
ಸುಳ್ಯ: ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ಅವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ನಡೆದಿದೆ.
ಡಿ.29ರ ಮಧ್ಯಾಹ್ಬ ಅಜ್ಜಾವರ ಮಂಡೆಕೋಲು ತೆರಳುವ ಮಾರ್ಗಮಧ್ಯೆ ಪಡ್ಡಂಬೈಲ್ ಕ್ರಾಸ್ ಬಳಿ ಕೀಟನಾಶಕ ಸೇವಿಸಿದ್ದು ಮನೆಯಲ್ಲಿ ಅವರು ವಾಂತಿ ಮಾಡುವ ವೇಳೆ ವಿಷಸೇವಿಸಿದ್ದು ಅರಿವಿಗೆ ಬಂದಿದೆ. ತಕ್ಷಣ ಅವರನ್ನು ಸ್ಥಳಿಯ ಕ್ಲಿನಿಕ್ ಗೆ ಕರೆದೊಯ್ದು ಪ್ರಥಮ ಚಿಕಿತ್ಸೆಯ ಬಳಿಕ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರಿಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದರಿಂದ ಅವರನ್ನು ಮಂಗಳೂರಿಗೆ ಕಳುಹಿಸಲಾಗಿದೆ. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ.


































