ಕಾಲು ಜಾರಿ ಬಿದ್ದು ನೀರು ಪಾಲಾದ ಕಾರ್ಮಿಕನ‌ ಗುರುತು ಪತ್ತೆ

ಆಲೆಟ್ಟಿ : ಪಾಲ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ನೀರು ಪಾಲಾದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಕೇರಳದ ಬಾಲಕೃಷ್ಣ (47) ಎಂಬವರು ನೀರು ಪಾಲಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಆಲೆಟ್ಟಿಯ ಸ್ಥಳೀಯರ ಮಾವಾಜಿ ಎಸ್ಟೇಟ್ ಗೆ ಅಡಿಕೆ ತೋಟದ ಕೆಲಸಕ್ಕೆ ಬಂದಿದ್ದರು. ಗುರುವಾರ ಸಂಜೆ ಕೆಲಸ ಮುಗಿಸಿ ನಾಲ್ಕು ಜನರ ತಂಡ ಹಿಂತಿರುಗುವ ವೇಳೆ ತೋಡಿನ ಅಡಿಕೆ ಮರದ ಪಾಲ ದಾಟುತ್ತಿದ್ದಾಗ ಬಾಲಕೃಷ್ಣ ಅವರು ಆಯತಪ್ಪಿ ನೀರಿಗೆ ಬಿದ್ದು ನೀರುಪಾಲಾಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತೋಡಿನಲ್ಲಿ ನೀರು ಹೆಚ್ಚು ಹಾಗೂ ರಭಸವಾಗಿ ಹರಿಯುತ್ತಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ಅಧಿಕಾರಿಗಳು, ಅಗ್ನಿ ಶಾಮಕ ದಳದವರು ಭೇಟಿ ನೀಡಿದ್ದಾರೆ. ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ.ಕಾರ್ಮಿಕನ ಹುಡುಕಾಟ ನಡೆಯಲಿದೆ

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top