ಕಡಿಮೆ ರಕ್ತದ ಒತ್ತಡ ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾವು

ರಾಯಚೂರಿನ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ತಾಲೂಕಿನ ಅತ್ತನೂರು ಗ್ರಾಮದ ವಿದ್ಯಾರ್ಥಿ ತರುಣಕುಮಾರ ತಂದೆ ಮಲ್ಲೇಶ (14) ಶಾಲೆಯಲ್ಲಿ ಲೋ ಬಿಪಿ ಉಂಟಾಗಿ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.
ಶಾಲೆಯಲ್ಲಿ ವಿದ್ಯಾರ್ಥಿ ಕುಸಿದು ಬಿದ್ದಿದ್ದು, ಕೂಡಲೇ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಬಾಲಕ ಸಾವನ್ನಪ್ಪಿದ್ದಾನೆ. ಪೋಷಕರಿಗೆ ಇಬ್ಬರು ಮಕ್ಕಳಿದ್ದು ಮೃತ ಬಾಲಕ ಹಿರಿಯ ಪುತ್ರನೆಂದು ಹೇಳಲಾಗುತ್ತಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top