ಸ್ಕೂಟರ್ ಅಪಘಾತದಲ್ಲಿ ಯುವ ಹಿಂದು ಮುಖಂಡ ಸಾವು

ಪುತ್ತೂರು : ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.
ಕೆಯ್ಯರು ಗ್ರಾಮದ ಎರಕ್ಕಳ ಬೆಳ್ಯಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ ವೀರಾಂಜನೇಯ ಘಟಕ ತಿಂಗಳಾಡಿಯ ಸಹ ಗೋ ರಕ್ಷಕ ಪ್ರಮುಖ್ ಕೀರ್ತನ್ ಗೌಡ (22) ಮೃತಪಟ್ಟವರು.
ಸೆ. 10ರಂದು ಮಧ್ಯರಾತ್ರಿ ಕೆದಂಬಾಡಿ ಗ್ರಾಮದ ತ್ಯಾಗರಾಜನಗರದಲ್ಲಿ ಸ್ಕೂಟರ್ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಕೀರ್ತನ್ ರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಕೀರ್ತನ್ ಗೌಡ ಅವರ ಸ್ಕೂಟರ್ ಅಪಘಾತದ ಬಗ್ಗೆ ಸಂಬಂಧಿಕರು ಸಂಶಯ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top