ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಕೊಡಗು ಸಂಪಾಜೆ ಗ್ರಾಮದ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್‌ರವರಿಗೆ ಜೀವಾವಧಿ ಸಜೆಯನ್ನು ಕೊಡಗು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಇಂದು ಘೋಷಿಸಿ ಆದೇಶ ಹೊರಡಿಸಿದೆ.
ಬಾಲಚಂದ್ರ ಕಳಗಿಯವರು ಚಲಾಯಿಸುತ್ತಿದ್ದ ಒಮಿನಿ ಕಾರಿಗೆ 2019 ಮಾ.19 ರಂದು ಲಾರಿ ಗುದ್ದಿಸಿ ಬಳಿಕ ಹೊಡೆದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು ಜಯನ್ ಎಂಬವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು. ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ ಸಂಪತ್ ಎಂಬಾತನನ್ನು ಸುಳ್ಯದ ಶಾಂತಿನಗರದಲ್ಲಿ ಹತ್ಯೆಗೈಯಲಾಗಿತ್ತು.
ಇದೀಗ ವಿಚಾರಣೆ ಮುಗಿದು ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ. ಇಬ್ಬರು ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್‌ರವರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 10 ಸಾವಿರ ದಂಡವನ್ನು ವಿಧಿಸಲಾಗಿದೆ.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top