ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಕಾನೂನು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ವರದಿಯಾಗಿದೆ
ಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಮನೆಯವರು ಸುಳ್ಯಕ್ಕೆ ಮದುವೆಗೆಂದು ಬಂದಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಪೋಲಿಸರು ಆಗಮಿಸಿ ಮಹಜರು ನಡೆಸಿ ಸರಕಾರಿ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕೊಂಡೊಯ್ದಿದ್ದಾರೆ.
ಯುವಕ ಸುಳ್ಯದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾನೆ. ತಾಯಿ ಪ್ರಸನ್ನ ಕುಮಾರಿ, ಸಹೋದರ ಪ್ರಜೀತ್, ಸಹೋದರಿ ಮಾಯಶ್ರೀಯನ್ನು ಅಗಲಿದ್ದಾರೆ.
ಕಾನೂನು ವಿದ್ಯಾರ್ಥಿ ನೇಣು ಬಿಗಿದು ಆತ್ಮ ಹತ್ಯ
