ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಸೀತಾರಾಮ ಎಂಬವರ ಪುತ್ರ ಪುನೀತ್ (ಗಣೇಶ್) (25)ಎಂಬ ಯವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ವರದಿಯಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ತಂದೆ,ತಾಯಿ ಹಾಗೂ ಸಹೋದರ ದಿನೇಶ ರನ್ನು ಅಗಲಿದ್ದಾರೆ.ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಳಿಯಾರು : ಯುವಕ ಆತ್ಮಹತ್ಯೆ





































































