ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕಿಯಾಗಿ ವಿದ್ಯಾರ್ಥಿನಿ ಆಯ್ಕೆ

ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ ಗೆ ಮೊದಲ ಬಾರಿಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಬ್ಯಾಂಕ್ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಈಕೆ ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಆಯ್ಕೆಗೊಂಡ ಅವರು ಇಲ್ಲಿ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ. ವಿದ್ಯಾರ್ಥಿನಿ ಸ್ವಾತಿ ರೈ ಆರ್ತಿಲ.
ಕಡಬ ತಾಲೂಕಿನ ಆರ್ತಿಲ ದಿ.ಆನಂದ ರೈ ಮತ್ತು ತಾರಾ ರೈ ಅವರ ಪುತ್ರಿಯಾದ ಸ್ವಾತಿ ರೈ ಅವರಿಗೆ ಈ ಅವಕಾಶ ಬಂದಿರುವುದು ಈ ಕುಟುಂಬಕ್ಕೆ ಅತ್ಯಂತ ಸಂತಸ ತಂದಿದೆ. ತಾಯಿ ಮತ್ತು ಅಣ್ಣ ಯತೀಶ್ ರೈ ಜತೆ ವಾಸಿಸುತ್ತಿರುವ ಸ್ವಾತಿ ರೈ ಅವರಿಗೆ ಈ ಅವಕಾಶ ಅಚಾನಕ್ ಆಗಿ ಬಂದಿದೆ. ಈ ಅವಕಾಶ ಮೊದಲಿಗೆ ಇವರ ತಾಯಿ ತಾರಾ ರೈ ಅವರಿಗೆ ಬಂದಿತ್ತು. ಆದರೆ ಅವರು ತಮ್ಮ ವೈಕ್ತಿಕ ಕಾರಣಗಳಿಂದ ತಿರಸ್ಕಾರ ಮಾಡಿದರು. ಕಡಬ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರಕಾಶ್‌ ಎನ್, ಇವರೂ ಮಾನಸಿಕ ಧೈರ್ಯ ತುಂಬಿದರು. ಮೊದಲಿಗೆ ಕಾಲೇಜಿನ ಓದಿಗೆ ತೊಂದರೆ ಆಗುತ್ತದೆ ಎಂದಿದ್ದ ಸ್ವಾತಿ ರೈ ಕೊನೆಗೆ ಬಂದ ಅವಕಾಶ ಬಿಡುವುದಿಲ್ಲ ಎಂಬ ಗಟ್ಟಿ ನಿರ್ಧಾರ ಮಾಡಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top