ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ರಿಕ್ಷಾ,ಚಾಲಕ ಸಾವು

ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಮ್ಮುಂಜೆಯಲ್ಲಿ ಕಳೆದ ಮಧ್ಯ ರಾತ್ರಿ ವೇಳೆ ನಡೆದಿದೆ.
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾ‌ರ್ ಎಂಬಲ್ಲಿ ಅಪಘಾತ ನಡೆದಿದ್ದು. ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ (37) ಮೃತಪಟ್ಟ ಯುವಕನಾಗಿದ್ದಾನೆ.
ಈತನ ಸಂಬಂಧಿ ಮಕ್ಕಳಾದ ತುಷಾರ್.ಭವಿತ್ ಮತ್ತು ಪ್ರದೀಪ್‌ ಅವರನ್ನು ಮೂಡಬಿದರೆಯ ಮಿಜಾರು ಎಂಬಲ್ಲಿಗೆ ಜಾತ್ರೆಗೆ ಹೋಗಿ ವಾಪಸು ಮನೆಗೆ ಬರುವ ವೇಳೆ ಘಟನೆ ನಡೆದಿದೆ. ಸಂಬಂಧಿ ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top