ದುಬೈಯಲ್ಲಿ ಉಧ್ಯಮಿಯಾಗಿರುವ ಅರಂತೋಡಿನ ಸೈಫುದ್ಧೀನ್ ಪಠೇಲ್ ತನ್ನ ಧರ್ಮ ಪತ್ನಿಯೊಂದಿಗೆ ಪವಿತ್ರಾ ಉಮ್ರಾ ಯಾತ್ರೆಗೆ ತೆರಳಲಿರುವುದರಿಂದ ಅವರನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿಯ ಆಡಳಿತ ಮಂಡಳಿ ವತಿಯಿಂದ ಫೆ.19 ಬೀಳ್ಕೊಡಲಾಯಿತು.
ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದ್ದರು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಿದರು. ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ಎ.ಹೆಚ್.ವೈ.ಎ ಅಧ್ಯಕ್ಷ ಅಬ್ದುಲ್ ಮಜೀದ್ ಯಾತ್ರಾರ್ಥಿಗೆ ಶುಭ ಹಾರೈಸಿದರು. ಕಾರ್ಯದರ್ಶಿ ಕೆ.ಎಂ ಮೂಸಾನ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ನಿವೃತ್ತ ಉಪನ್ಯಾಸಕ ಅಬ್ದುಲ್ಲ ಮಾಸ್ತರ್, ಸದರ್ ನೌಶಾದ್ ಅಝ್ಹರಿ, ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಹಾಜಿ ಅಬ್ದುಲ್ ಖಾದರ್ ಪಠೇಲ್, ಹಾಜಿ ಬದುರುದ್ದೀನ್ ಪಠೇಲ್, ಕೆ.ಎಂ ಮೊಯಿದು ಕುಕ್ಕುಂಬಳ, ಎ. ಹನೀಫ್, ಅಮೀರ್ ಕುಕ್ಕುಂಬಳ, ಮುಜೀಬ್ ಅರಂತೋಡು, ಟಿ.ಎಂ ಜಾವೇದ್ ತೆಕ್ಕಿಲ್, ಜುಬೈರ್ ಎಸ್.ಇ, ಪಸೀಲು, ಹನೀಫ್ ಕುನ್ನಿಲ್, ಬಾತಿಷ ಕುಕ್ಕುಂಬಳ ಮೊದಲಾದವರು ಉಪಸ್ಥಿತರಿದ್ದರು
ಅರಂತೋಡು : ಉಮ್ರಾ ಯಾತ್ರಾರ್ಥಿ ಸೈಫುದ್ಧೀನ್ ಪಠೇಲ್ ಗೆ ಬೀಳ್ಕೊಡುಗೆ
