ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ ನಿವಾಸಿ ವೀರಭದ್ರ (29) ಮೃತ ಯುವಕ.
ವೀರಭದ್ರ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು ತೋಟದ ಕಾರ್ಮಿಕನಾಗಿ ಕುವೆಚ್ಚಾರ್ನಲ್ಲಿ ಕೆಲಸ ಮಾಡುತ್ತಿದ್ದರು.
ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು





































































