February 2025

ಬೈಕ್ ಸವಾರನ ಮೇಲೆ ಮರ ಬಿದ್ದು ಗಾಯ

ಕಡಬ ತಾಲೂಕಿನ ಕೋಡಿಂಬಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ಭಾರೀ ಗಾತ್ರದ ಮರದ ರೆಂಬೆ ಮರಿದು ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ ಸವಾರ ಗಾಯ ಗೊಂಡ ಘಟನೆ ಫೆ.4 ರಂದು ಸಂಜೆ ನಡೆದಿದೆ.ಸ್ಥಳಕ್ಕೆ ಅರಣ್ಯ ಇಲಾಖೆಯವರು, ಪೋಲೀಸರು ಆಗಮಿಸಿದ್ದಾರೆ. ಗಾಯ ಗೊಂಡ ಬೈಕ್ ಸವಾರ ಚಿಕಿತ್ಸೆಗಾಗಿ ಕಡಬ ಆಸ್ಪತ್ರೆಗೆ ತೆರಳಿದ್ದಾರೆ.ಕೆಲವು ಸಮಯಗಳ ಹಿಂದೆಯಷ್ಟೇ ಇದೇ ರಸ್ತೆಯಲ್ಲಿ ಸ್ವಲ್ಪ ಮುಂದೆ ಮರವೊಂದು ಉರುಳಿ ಬಿದ್ದು ಬೈಕ್ ಸವಾರ ಒಬ್ಬರು ಮೃತ ಪಟ್ಟಿದ್ದರು.

ಬೈಕ್ ಸವಾರನ ಮೇಲೆ ಮರ ಬಿದ್ದು ಗಾಯ Read More »

ಸಂಪಾಜೆ ಪೇರಡ್ಕ ಗೂನಡ್ಕ ಉರೂಸ್ ಸಮರೋಪ, ನಮ್ಮ ಕಾಯಕದಲ್ಲಿ ಪ್ರಾಮಾಣಿಕತೆಯನ್ನು ತೋರಿಸಿ – ಸಯ್ಯದ್ ಝೈನುಲ್ ಆಬಿದಿನ್ ತಂಘಳ್ ದುಗ್ಗಲಡ್ಕ

ನಾವು ಮಾಡುವ ಕೆಲಸ ಅಥವಾ ಸೇವೆಯಲ್ಲಿ ವಂಚನೆ ಮೋಸ ಇರಬಾರದು. ಪ್ರಾಮಾಣಿಕವಾಗಿರಬೇಕು, ಯಜಮಾನನಿಗೆ ಯಾವತ್ತು ಮೋಸ ಮಾಡಬಾರದು ಅವರಿಗೆ ತೃಪ್ತಿಯಾಗುವಂತಾ ಸೇವೆ ಮತ್ತು ಕಾಯಕವಾಗಿರಬೇಕೆಂದು ಬಹು| ಸಯ್ಯದ್ ಝೈನುಲ್ ಆಬಿದೀನ್ ತಂಘಳ್ ದುಗ್ಗಲಡ್ಕ ಹೇಳಿದರು. ಅವರು ಫೆ.2 ರಂದು ಸಂಪಾಜೆ ಗ್ರಾಮದ ಇತಿಹಾಸ ಪ್ರಸಿದ್ಧ ವಲಿಯುಲ್ಲಾಹಿ ದರ್ಗಾ ಶರೀಫ್ ಪೇರಡ್ಕ ಗೂನಡ್ಕ ಇದರ ಉರೂಸ್ ಸಮಾರೋಪ ಸಮಾರಂಭದಲ್ಲಿ ದುವಾಶೀರ್ವಾಚನ ಮಾಡಿ ಮಾತನಾಡಿದರು. ಅಧ್ಯಕ್ಷತೆಯನ್ನು ಮುಹಿದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ವಹಿಸಿದರು. ಸ್ಥಳೀಯ ಖತೀಬರಾದ

ಸಂಪಾಜೆ ಪೇರಡ್ಕ ಗೂನಡ್ಕ ಉರೂಸ್ ಸಮರೋಪ, ನಮ್ಮ ಕಾಯಕದಲ್ಲಿ ಪ್ರಾಮಾಣಿಕತೆಯನ್ನು ತೋರಿಸಿ – ಸಯ್ಯದ್ ಝೈನುಲ್ ಆಬಿದಿನ್ ತಂಘಳ್ ದುಗ್ಗಲಡ್ಕ Read More »

ಕಾಂಗ್ರೆಸ್ ಮುಖಂಡನ ಮೇಲೆ ಗುಂಡು ಹಾರಾಟ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ ಅವರ ಮೇಲೆ ಫೆ. 4ರ ಮಂಗಳವಾರ ಅನಂತಾಡಿಯಲ್ಲಿ ಗುಂಡು ಹಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಫೈರಿಂಗ್ ನಡೆಯಲು ಕಾರಣ ಏನೆಂದು ತಿಳಿದು ಬಂದಿಲ್ಲ ಚಿತ್ತರಂಜನ್ ಶೆಟ್ಟಿ ಅನಂತಾಡಿಗೆ ಯಾಕೆ ಹೋಗಿದ್ದರು ಎಂಬ ವಿಚಾರವೂ ತಿಳಿದು ಬಂದಿಲ್ಲ.ಮಿಸ್ ಫೈಯರ್ ಎಂಬ ಮಾಹಿತಿ ಇದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ಅವರೇ ಹೋಗಿ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಮುಖಂಡನ ಮೇಲೆ ಗುಂಡು ಹಾರಾಟ Read More »

ಅರಂಬೂರು : ಮಾ.15 ,16, 17 ಮತ್ತು 18 ರಂದು ವೈಭವದ  ಶ್ರೀ ವಯನಾಟ್ ಕಲವನ್ ದೈವಂಕಟ್ಟು ಮಹೋತ್ಸವ

ಅರಂತೋಡು, ಫೆ. 4 : ಮಾ.15 ,16, 17 ಮತ್ತು 18 ರಂದು   ಆಲೆಟ್ಟಿ ಗ್ರಾಮದ ಅರಂಬೂರು   ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಭಾರೀ ವೈಭವದಿಂದ ನಡೆಯಲಿದೆ ಎಂದು ಮಹೋತ್ಸವದ ಅಧ್ಯಕ್ಷರಾದ ಪಿ.ಬಿ ಸುಧಾರ ರೈ  ಹಾಗೂ ಇತರ ಪದಾಧಿಕಾರಿಗಳು ತಿಳಿಸಿದ್ದಾರೆ. ದೈವಸ್ತಾನದ ವಠಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು  ಮಾತನಾಡಿದರು. ತೀಯಾ ಸಮಾಜದ ಆಡಳಿತಕ್ಕೆ ಒಳಪಡುವ ತಾಲೂಕಿನ ಏಕೈಕ ವಯನಾಟ್ ಕುಲವನ್ ದೈವಸ್ಥಾನವಾಗಿರುವ   ಅರಂಬೂರಿನಲ್ಲಿ ಗ್ರಾಮಸ್ಥರ ಒಗ್ಗೂಡುವಿಕೆಯಲ್ಲಿ, ಎಲ್ಲರ ಸಹಕಾರದಲ್ಲಿ

ಅರಂಬೂರು : ಮಾ.15 ,16, 17 ಮತ್ತು 18 ರಂದು ವೈಭವದ  ಶ್ರೀ ವಯನಾಟ್ ಕಲವನ್ ದೈವಂಕಟ್ಟು ಮಹೋತ್ಸವ Read More »

ಅರಂಬೂರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಹಲವು ವರ್ಷಳಿಗೊಮ್ಮೆ ನಡೆಯುವ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮುಂದಿನ ಮಾರ್ಚ್ 15,16,17 ಮತ್ತು 18 ರಂದು ನಡೆಯಲಿರುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆಯು ಫೆ.4 ರಂದು ದೈವಸ್ಥಾನದಲ್ಲಿ ನೆರವೇರಿತು.ದೈವಸ್ಥಾನದ ಕುಟುಂಬದ ಯಜಮಾನ ಹಿರಿಯರಾದ ಕುಂಞಕಣ್ಣ ಅವರು ದೈವಸ್ಥಾನದಲ್ಲಿ ಪ್ರಾರ್ಥನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಹೋತ್ಸವ ಸಮಿತಿ ಅಧ್ಯಕ್ಷ ಸುಧಾರ ರೈ,ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಬಾರ್ಪಣೆ, ಕಾರ್ಯಾಧ್ಯಕ್ಷರಾದ ಎನ್.ಎ.ರಾಮಚಂದ್ರ, ನಾರಾಯಣ ಕೇಕಡ್ಕ ರಾಧಾಕೃಷ್ಣ ಪರಿವಾರಕಾನ, ಪದ್ಮಯ್ಯ ಪಡ್ಡು, ಕುಂಞರಾಮನ್ ಶ್ರೀ

ಅರಂಬೂರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ Read More »

ಸರ್ವ ಧರ್ಮ ಸಮ್ಮೇಳನಗಳು ಎಲ್ಲೆಡೆ ನಡೆಯುವ ಅಗತ್ಯ ಇದೆ -ಸದಾನಂದ ಮಾವಜಿ

ಪ್ರಸ್ತುತ ಕಾಲಘಟ್ಟದಲ್ಲಿ ಸರ್ವಧರ್ಮ ಸಮ್ಮೇಳನಗಳು ಎಲ್ಲೆಡೆ ನಡೆಯುವ ಅಗತ್ಯ ಇದೆ ಎಂದು ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂಧ ಮಾಜಿ ಹೇಳಿದರು. ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಸರ್ವಧರ್ಮ ಸಮ್ಮೇಳನಗಳು ನಶಿಸಿ ಹೋಗಿದೆ ಇಂದು ಇದರ ಅಗತ್ಯ ಇದೆ. ಪೇರಡ್ಕದ ಸೌಹಾರ್ಧತೆಯು ತೆಕ್ಕಿಲ್ ಕುಟುಂಬದ ಹಿರಿಯರಿಂದ ಬಳುವಳಿಯಾಗಿ ಬಂದಿದೆ ಅವರ ಕುಟುಂಬದ ಕುಡಿ ಟಿ.ಎಂ ಶಹೀದ್ ತೆಕ್ಕಿಲ್ ರವರು ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ. ಪೇರಡ್ಕದ ದರ್ಗಾ ಶರಿಫ್ ಕಾರ್ಣಿಕ ಇರುವ ಕ್ಷೇತ್ರ ಅದರ ಅನುಭವ ನನಗೂ ಆಗಿದೆ

ಸರ್ವ ಧರ್ಮ ಸಮ್ಮೇಳನಗಳು ಎಲ್ಲೆಡೆ ನಡೆಯುವ ಅಗತ್ಯ ಇದೆ -ಸದಾನಂದ ಮಾವಜಿ Read More »

ದೇವರ ಮೇಲಿನ ಭಕ್ತಿಯಿಂದ ಜೀವನ ಪಾವನವಾಗುತ್ತದೆ: ಶ್ರೀ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ

ದೇವರ ಮೇಲಿನ‌ ಭಕ್ತಿಯಿಂದ ಬದುಕು ಪಾವನವಾಗುತ್ತದೆ, ಜೀವನ ಸುಂದರ ವಾಗುತ್ತದೆ. ಮಡಿವಾಳ ಸಮಾಜ ಆತ್ಮೀಯತೆಯಿಂದ ಬಂಧುತ್ವ ಹೊಂದಿದ ಏಕಮಾತ್ರ ಸಮಾಜ ಎಂದು ಮೂಡಬಿದ್ರೆ ಶ್ರೀ ಕ್ಷೇತ್ರ ಕರಿಂಜೆಯ ಶ್ರೀ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿಯವರು ಹೇಳಿದರು.ಉಬರಡ್ಕ ಮಿತ್ತೂರು ಶ್ರೀ ವೀರಭದ್ರ ದೇವರ ಭಂಡಾರದ ಮನೆ ಚಾರಿಟೇಬಲ್ ಟ್ರಸ್ಟ್ ಹುಳಿಯಡ್ಕ ಇದರ ವತಿಯಿಂದ ಶ್ರೀ ನಾಗಸಾನಿಧ್ಯ ಮತ್ತು ಶ್ರೀ ವೀರಭದ್ರ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ವೀರಭದ್ರ ದೇವರ ಭಂಡಾರ ಮನೆ ಗೃಹ ಪ್ರವೇಶ ಮತ್ತು ವಾರ್ಷಿಕ ಪೂಜೆಯ ಅಂಗವಾಗಿ

ದೇವರ ಮೇಲಿನ ಭಕ್ತಿಯಿಂದ ಜೀವನ ಪಾವನವಾಗುತ್ತದೆ: ಶ್ರೀ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ Read More »

ಸುಳ್ಯ : ನಾಳೆ ಪವರ್ ಕಟ್

33 ಕಾವು – ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.04ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುಳ್ಯ : ನಾಳೆ ಪವರ್ ಕಟ್ Read More »

ಐವರ್ನಾಡು : ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ಫೆ. 8, 9, 10 ರಂದು ನಡೆಯುವ ಪ್ರತಿಷ್ಟಾ ವಾರ್ಷಿಕೋತ್ಸವ ಪ್ರಯುಕ್ತ ಫೆ.2 ರಂದು ಬೆಳಿಗ್ಗೆ ಶ್ರೀ ದೇವರಿಗೆ ಮಹಾಪೂಜೆ, ಮಂಗಳಾರತಿಯ ಬಳಿಕ ಅರ್ಚಕರಾದ ರಾಮಚಂದ್ರ ಪಿ.ಜಿ. ಯವರಿಂದ ಗೊನೆ ಕಡಿಯುವ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಯ ನೂತನ ಅಧ್ಯಕ್ಷರಾದ ರಾಜೇಶ್ ಭಟ್ ಬಾಂಜಿಕೋಡಿ, ಪೂರ್ವಾಧ್ಯಕ್ಷರಾದ ಶ್ರೀನಿವಾಸ ಮಡ್ತಿಲ, ರಾಜಾರಾಮ ರಾವ್ ಉದ್ದಂಪಾಡಿ, ವೈದಿಕ ಮುಖ್ಯಸ್ಥರು, ವಸಿಷ್ಠ ಭಟ್ ನಾಟಿಕೇರಿ ನರಸಿಂಹ ಭಟ್, ಅರ್ಚಕರ ಸಹಾಯಕರು.

ಐವರ್ನಾಡು : ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »

ಉಬೈಸ್ ಗೂನಡ್ಕ ರವರಿಗೆ ರಾಷ್ಟ್ರೀಯ ಪ್ರೇರಣಾ ದೂತ ಪ್ರಶಸ್ತಿ ಪ್ರದಾನ

ಉಬೈಸ್ ಗೂನಡ್ಕ ರವರಿಗೆ ಮೆಡಲ್ ಮತ್ತು ರಾಷ್ಟ್ರೀಯ ಪ್ರೇರಣಾ ದೂತ ಪ್ರಶಸ್ತಿಯನ್ನು ರಾಮಕೃl ಮಠದ ಕಾರ್ಯದರ್ಶಿ ಸ್ವಾಮಿ ಅತಿ ದೇವಾನಂದ ಮಹಾರಾಜ್, ಐಎಎಸ್ ಅಧಿಕಾರಿಗಳು ಮತ್ತು ಬಿಹಾರದ ಮಾಜಿ ಕಾರ್ಮಿಕ ಸಚಿವ ಸುರೇಂದ್ರ ರಾಂ ಅವರಿಂದ ಪ್ರದಾನ ಮಾಡಲಾಯಿತು. ಉಬೈಸ್ ಅವರು ಯೆನೆಪೋಯಾ ವಿಶ್ವವಿದ್ಯಾಲಯದಲ್ಲಿ ಸಕ್ರಿಯ NSS ಸ್ವಯಂಸೇವಕರಾಗಿ, ಚುರುಕು ವಿದ್ಯಾರ್ಥಿಯಾಗಿ ಮತ್ತು ತುರ್ತು ರಕ್ತದಾತರಾಗಿ ವಿಶಿಷ್ಟ ಹೆಸರು ಮಾಡಿದ್ದಾರೆ. ಯೆನಪೋಯಾ ಕಾಲೇಜಿನ ವಿದ್ಯಾರ್ಥಿ ಪರಿಷತ್ ಕಾರ್ಯದರ್ಶಿಯಾಗಿ ಗುರುತಿಸಿಕೊಂಡಿರುವ ಅವರು ರಾಷ್ಟ್ರೀಯ ಶಿಬಿರದಲ್ಲೂ ಭಾಗವಹಿಸಿದ್ದಾರೆ. NSS ಮತ್ತು

ಉಬೈಸ್ ಗೂನಡ್ಕ ರವರಿಗೆ ರಾಷ್ಟ್ರೀಯ ಪ್ರೇರಣಾ ದೂತ ಪ್ರಶಸ್ತಿ ಪ್ರದಾನ Read More »

error: Content is protected !!
Scroll to Top