February 2025

ಉಬರಡ್ಕ : ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

ಉಬರಡ್ಕದ ಶ್ರೀ ವೀರಭದ್ರ ದೇವರ ಭಂಡಾರದ ಮನೆಯ ಗೃಹಪ್ರವೇಶ ಮತ್ತು ಶ್ರೀ ದೇವರ ಪ್ರತಿಷ್ಟ್ಯ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮಾಚಿದೇವ ಜಯಂತಿ ಆಚರಣೆ ಫೆ.2 ರಂದು ಸಂಜೆ ನಡೆಯಿತು.ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಸುಳ್ಯ ತಾಲೂಕು ಮಡಿವಾಳ ಸಂಘದ ಅಧ್ಯಕ್ಷರಾದ ಲೋಕೇಶ್ ಏನೆಕಲ್ಲು ವಹಿಸಿದ್ದರು.ಉಬರಡ್ಕದ ಶ್ರೀ ನರಸಿಂಹ ದೇವಸ್ಥಾನದ ವ್ಯವಸ್ಥಾಪನ ಸಮಿತಿ ನಿಕಟ ಪೂರ್ವಧ್ಯಕ್ಷ ರತ್ನಕರ ಗೌಡ ಬಳ್ಳಡ್ಕ ಸಭಾ ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಸಮೂಹ ಸಂಪನ್ಮೂಲ ವ್ಯಕ್ತಿ […]

ಉಬರಡ್ಕ : ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ Read More »

ಉಬರಡ್ಕ : ವೀರಭದ್ರ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರುವಾಣಿ ಮೆರವಣಿಗೆ

ಉಬರಡ್ಕ ಮಿತ್ತೂರಿನ ಹುಳಿಯಡ್ಕ ಶ್ರೀ ವೀರಭದ್ರ ಭಂಡಾರದ ಮನೆ ಚಾರಿಟೇಬಲ್ ಟ್ರಸ್ಟ್ ಇಲ್ಲಿಯ ವೀರಭದ್ರ ದೇವರ ಪ್ರತಿಷ್ಟಾ ಬ್ರಹ್ಮಕಲಶೋತ್ಸವವು ಫೆ.3 ರಂದು ನಡೆಯಲಿದ್ದು, ಇದರ ಪ್ರಯುಕ್ತ ಇಂದು ಬೆಳಿಗ್ಗೆ ಹಸಿರುವಾಣಿ ಮೆರವಣಿಗೆಯು ಕುತ್ತಮೊಟ್ಟೆ ಹೂಪಾರೆಯ ಶ್ರೀ ಅಯ್ಯಪ್ಪ ಶಾಸ್ತಾವು ಭಜನಾ ಮಂದಿರದಿಂದ ಶಂಖನಾದದೊಂದಿಗೆ ಸಾಗಿ ವೀರಭದ್ರ ಕ್ಷೇತ್ರಕ್ಕೆ ತಲುಪಿತು. ನಂತರ ಉಗ್ರಾಣ ತುಂಬಿಸಲಾಯಿತು. ನೂರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು. ಸಮಿತಿಯ ಪದಾಧಿಕಾರಿಗಳು ಎಲ್ಲರನ್ನೂ ಸ್ವಾಗತಿಸಿದರು.ಸಂಜೆ ಪೂರ್ಣಕುಂಭ ಸ್ವಾಗತದೊಂದಿಗೆ ತಂತ್ರಿಗಳ ಆಗಮನ, ನಂತರ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ,

ಉಬರಡ್ಕ : ವೀರಭದ್ರ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರುವಾಣಿ ಮೆರವಣಿಗೆ Read More »

ಸಾತ್ವಿಕರಾದ ಮಹಾತ್ಮರ ಬದುಕು ಮಾದರಿಯಾಗಿಸೋಣ – ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್

ಗೂನಡ್ಕ: ಸಾತ್ವಿಕರಾದ ಔಲಿಯಾಗಳು ಅಲ್ಲಾಹನ ಇಷ್ಟದಾಸರಾಗಿದ್ದಾರೆ. ನೈಜ ವಿಶ್ವಾಸ, ನಿಷ್ಕಳಂಕ ಸತ್ಕರ್ಮಗಳು ಮತ್ತು ಪರಮೋನ್ನತ ಆಧ್ಯಾತ್ಮ ಶಕ್ತಿಗಳ ಮೂಲಕ ಅಲ್ಲಾಹನ ಪ್ರೀತಿ ಪಾತ್ರರಾದ ಇಂತಹ ಮಹಾನುಭಾವರಿಂದ ಈ ಜಗತ್ತಿನಲ್ಲಿ ಧಾರ್ಮಿಕತೆ, ಶಾಂತಿ ಮತ್ತು ನೆಮ್ಮದಿ ನೆಲೆ ನಿಂತಿದೆ. ನೈತಿಕ ಮೌಲ್ಯಗಳೊಂದಿಗೆ ಸಜ್ಜನರಾಗಿ ಬಾಳಲು ನಾವು ಅವರ ಬದುಕನ್ನು ಮಾದರಿಯಾಗಿಸಬೇಕು ಎಂದು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್ ಕರೆ ನೀಡಿದರು. ಇತಿಹಾಸ ಪ್ರಸಿದ್ಧ ಪೇರಡ್ಕ ಗೂನಡ್ಕ ಮಖಾಂ ಉರೂಸಿನ ಎರಡನೇ ದಿನದ ಕಾರ್ಯಕ್ರಮವನ್ನು

ಸಾತ್ವಿಕರಾದ ಮಹಾತ್ಮರ ಬದುಕು ಮಾದರಿಯಾಗಿಸೋಣ – ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್ Read More »

ಐವರ್ನಾಡು : 17ನೇ ವರ್ಷದ ಸಾಮೂಹಿಕ‌ ಸತ್ಯನಾರಾಯಣ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಬೆಳ್ಳಾರೆ ವಲಯ. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಐವರ್ನಾಡು ಇದರ ಸಹಯೋಗದಿಂದ 17ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಈ ದಿನ ಪಂಚಲಿಂಗೇಶ್ವರ ದೇವಸ್ಥಾನ ಐವರ್ನಾಡು ಸಭಾಂಗಣದಲ್ಲಿ ನಡೆಯಿತು. ಶ್ರೀ ಸತ್ಯನಾರಾಯಣ ಪೂಜೆಗೆ 105 ವೃತದಾರಿಗಳು ಇದ್ದು 620 ಸತ್ಯನಾರಾಯಣ ಪೂಜಾ ಸೇವೆ ಆಗಿರುತ್ತದೆ. ಈ ಪೂಜಾ ಧಾರ್ಮಿಕ ಸಭಾ ಕಾರ್ಯಕ್ರಮವು ಭಕ್ತಾದಿಗಳಿಗೆ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಮಾಣಿಲ ಆಶೀರ್ವಚನ ನೀಡಿದರು.

ಐವರ್ನಾಡು : 17ನೇ ವರ್ಷದ ಸಾಮೂಹಿಕ‌ ಸತ್ಯನಾರಾಯಣ ಪೂಜೆ Read More »

ಸುಳ್ಯ : ಶ್ರದ್ಧಾ ಭಕ್ತಿಯಿಂದ ನಡೆದ ಕಲ್ಕುಡ,ಕಲ್ಲುರ್ಟಿ,ಗುಳಿಗ ದೈವದ ಕೋಲ

ಸುಳ್ಯದ ನಾವೂರು ಕಲ್ಕುಡ ದೈವಸ್ಥಾನದಲ್ಲಿ ಫೆ.2ರಂದು ಕಲ್ಕುಡ ಕಲ್ಲುರ್ಟಿ ಗುಳಿಗ ದೈವದ ಕೋಲ ನಡೆಯಿತು.ಕೋಲದ ಬಳಿಕ ಪ್ರಸಾದ ವಿತರಿಸಲಾಯಿತು.ಮಧ್ಯಾಹ್ಬಅನ್ನಸಂತರ್ಪಣೆ ನಡೆಯಿತು‌.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯವರು ಸಾವಿರಾರು ಭಕ್ತರು ಉಪಸ್ಥಿತರಿದ್ದು ದೈವಗಳ ದರ್ಶ‌ನ ಪಡೆದರು.

ಸುಳ್ಯ : ಶ್ರದ್ಧಾ ಭಕ್ತಿಯಿಂದ ನಡೆದ ಕಲ್ಕುಡ,ಕಲ್ಲುರ್ಟಿ,ಗುಳಿಗ ದೈವದ ಕೋಲ Read More »

ಪುತ್ತೂರು : ಲಂಚ ತೆಗೆದುಕೊಂಡರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ !

ಪುತ್ತೂರು:ಯಾವುದೇ ಅಧಿಕಾರಿಗಳಾಗಲಿ, ಸಿಬ್ಬಂದಿಗಳಾಗಲಿ ಎಲ್ಲಾದರೂ ನನ್ನ ಹೆಸರು ಹೇಳಿ,ಶಾಸಕರಿಗೆ ಪಾಲು ನೀಡಬೇಕಾಗಿದೆ ಎಂದು ಹೇಳಿ ಜನರಿಂದ ದುಡ್ಡು ತೆಗೆದುಕೊಂಡಿರುವುದು ಗೊತ್ತಾದರೆ ಅಂಥವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಶಾಸಕ ಅಶೋಕ್‌ ಕುಮಾರ್ ರೈ ಅವರು ಆಕ್ರೋಶ ಭರಿತ ಮಾತುಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಬಳಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಶಾಸಕರು ಉತ್ತರಿಸಿದರು.ಸರಕಾರಿ ಆಪ್ ಬಗ್ಗೆ ಗ್ರಾಮ ಆಡಳಿತಾಧಿಕಾರಿಯೋರ್ವರು ಧಿಕ್ಕಾರ ಕೂಗಿದ ವಿಚಾರ ವೈರಲ್ ಆಗಿರುವ ಕುರಿತು ಪತ್ರಕರ್ತರು ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಶಾಸಕ ಅಶೋಕ್ ಕುಮಾರ್

ಪುತ್ತೂರು : ಲಂಚ ತೆಗೆದುಕೊಂಡರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ! Read More »

ಉಬರಡ್ಕ : ಫೆ.2ರಿಂದ ವೀರಭದ್ರ ದೇವರ ನೂತನ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸುಳ್ಯ ತಾಲೂಕಿನ ಉಬರಡ್ಕಮಿತ್ತೂರು ಗ್ರಾಮದ ಹುಳಿಯಡ್ಕದಲ್ಲಿ ನಿರ್ಮಾಣಗೊಂಡಿರುವ ವೀರಭದ್ರ ದೇವರ ನೂತನ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ.2ರಂದು ಆರಂಭಗೊಂಡು ಫೆ.4 ರವರೆಗೆ ನಡೆಯಲಿದೆ.ಫೆ.2 ರಂದು ಬೆಳಗ್ಗೆ ಉಬರಡ್ಕ ಹೂಪಾರೆ (ಕುತ್ತಮೊಟ್ಟೆ) ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆ ಆರಂಭಗೊಳ್ಳುವುದು, ಮೆರವಣಿಗೆ ಕ್ಷೇತ್ರಕ್ಕೆ ತಲುಪಿದ ಬಳಿಕ ಉಗ್ರಾಣ ತುಂಬಿಸಲಾಗುವುದು. ಸಂಜೆ ತಂತ್ರಿಗಳ ಆಗಮಣದ ಬಳಿಕ ದೇವತಾ ಪ್ರಾರ್ಥನೆ, ಬಳಿಕ ವಿವಿಧ ವೈದಿಕ ಕಾರ್ಯಗಳು ನಡೆಯುವುದು.ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವುದು, ಫೆ.3ರಂದು ಬೆಳಗ್ಗೆ ಗಣಪತಿ ಹವನ, ಬಳಿಕ

ಉಬರಡ್ಕ : ಫೆ.2ರಿಂದ ವೀರಭದ್ರ ದೇವರ ನೂತನ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಫೆ.9ಕ್ಕೆ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮಾರಾಟಿ ಸಮಾಜ ಬಾಂಧವರಿಗೆ ವಾರ್ಷಿಕ ಕ್ರೀಡಾಕೂಟ

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮಾರಾಟಿ ಸಮಾಜ ಬಾಂಧವರ ಸಂಘಟನೆಯ ಸಲುವಾಗಿ ವಾರ್ಷಿಕ ಕ್ರೀಡಾ ಕೂಟ ಫೆ.9ರಂದು ಗಿರಿದರ್ಶಿನಿ ವಠಾರದಲ್ಲಿ ನಡೆಯಲಿದೆ ಎಂದು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ ಅಜ್ಜಾವರ ಹೇಳಿದರು. ಅವರು ಫೆ.1ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘ 1993ರಲ್ಲಿ ಆರಂಭವಾಗಿ 31 ವರ್ಷ ದಿಂದ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ.ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸೇಸು ನಾಯ್ಕ ಅರಂಬೂರು

ಫೆ.9ಕ್ಕೆ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮಾರಾಟಿ ಸಮಾಜ ಬಾಂಧವರಿಗೆ ವಾರ್ಷಿಕ ಕ್ರೀಡಾಕೂಟ Read More »

ಯುವಕ,ಯುವತಿಯರು ಲಹರಿ ಪಧಾರ್ಥದ ವ್ಯಾಮೋಹಕ್ಕೆ ಒಳಗಾಗಿರುವುದು ಖೇದಕರ : ಪಾಣಕ್ಕಾಡ್ ಹಮೀದಾಲಿ ಶಿಹಾಬ್ ತಂಘಳ್

ಸುಳ್ಯ: ಪೇರಡ್ಕ ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭದ ಪ್ರಥಮ ದಿನದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಹಾಗೂ ಉದ್ಘಾಟನಾ ಸಮಾರಂಭ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ಜ. 31 ರಂದು ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಬಹು| ಸಯ್ಯದ್ ಅಲ್ಹಾಜ್ ಹಮಿದಾಲಿ ಶಿಹಾಬ್ ತಂಘಳ್ ಪಾಣಕ್ಕಾಡ್ ನೆರವೇರಿಸಿ, ಮಾತನಾಡಿ ಇವತ್ತಿನ ಕಾಲಘಟ್ಟದಲ್ಲಿ ಯುವಕ–ಯುವತಿಯರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಲಹರಿ ಪದಾರ್ಥಗಳಿಂದ ಆಕರ್ಷಣೆಯಾಗಿ, ಸಮಾಜ ಕಟ್ಟುವ ಬದಲು ಸಮಾಜವನ್ನು ಹಾಳು ಮಾಡುತ್ತಿದ್ದಾರೆ. ಸ್ವತಃ ತಂದೆ- ತಾಯಿಯವರನ್ನು ಕೊಲೆ ಮಾಡುವಂತ ಕೆಟ್ಟ ಪ್ರವೃತ್ತಿಗೆ

ಯುವಕ,ಯುವತಿಯರು ಲಹರಿ ಪಧಾರ್ಥದ ವ್ಯಾಮೋಹಕ್ಕೆ ಒಳಗಾಗಿರುವುದು ಖೇದಕರ : ಪಾಣಕ್ಕಾಡ್ ಹಮೀದಾಲಿ ಶಿಹಾಬ್ ತಂಘಳ್ Read More »

ಕಾಂತಮಂಗಲ : ಶ್ರದ್ಧಾ ಭಕ್ತಿಯಿಂದ ನಡೆದ ಗುತ್ಯಮ್ಮ ದೇವಿಯ ವಾರ್ಷಿಕೋತ್ಸವ,ಮತ್ತೆ ಒಂದಾದ ಡಾ.ಕೆ.ವಿ ಚಿದಾನಂದ ಮತ್ತು ಡಾ.ಕೆ.ವಿ ರೇಣುಕಾಪ್ರಸಾದ್ ಸಹೋದರರು!

ಡಾ.ಕೆ.ವಿ ರೇಣುಕಾಪ್ರಸಾದ್ ಧರ್ಮದರ್ಶಿಯಾಗಿರುವ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ದೈವಗಳ ವಾರ್ಷಿಕ ಉತ್ಸವ ಶ್ರದ್ದಾ ಭಕ್ತಿಯಿಂದ ವೈಭಯುತವಾಗಿ ಜ. 31ರಂದು ನಡೆಯಿತು.ಬೆಳಿಗ್ಗೆ ನವಗ್ರಹ ಹೋಮ, ಚಂಡಿಕಾ ಹೋಮ ನಡೆದು ಪೂರ್ಣಾಹುತಿ ನಂತರ ಮಹಾಮಂಗಳಾರತಿ,ಪ್ರಸಾದ ವಿತರಣೆಯಾಗಿ ಮಧ್ಯಾಹ್ನ 1.00ರಿಂದ ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಗಂಟೆ 5.00ರಿಂದ ರಂಗ ಪೂಜೆ, ಪ್ರಸನ್ನ ಪೂಜೆ, ಪ್ರಾರ್ಥನೆ,ಪ್ರಸಾದ ವಿತರಣೆ ನಡೆಯಿತು.ಸಾವಿರಾರು ಭಕ್ತಾಭಿಮಾನಿಗಳು ಭಾಗವಹಿಸಿ ಶ್ರೀ ದೇವಿಯ ಗಂಧ ಪ್ರಸಾದವನ್ನು ಸ್ವೀಕರಿಸಿದರು.ಈ ಬಾರಿ ಗುತ್ಯಮ್ಮ ದೇವಿ ಕ್ಷೇತ್ರಕ್ಕೆ ಡಾ.ಕೆ.ವಿ.ಚಿದಾನಂದ ಹಾಗೂ

ಕಾಂತಮಂಗಲ : ಶ್ರದ್ಧಾ ಭಕ್ತಿಯಿಂದ ನಡೆದ ಗುತ್ಯಮ್ಮ ದೇವಿಯ ವಾರ್ಷಿಕೋತ್ಸವ,ಮತ್ತೆ ಒಂದಾದ ಡಾ.ಕೆ.ವಿ ಚಿದಾನಂದ ಮತ್ತು ಡಾ.ಕೆ.ವಿ ರೇಣುಕಾಪ್ರಸಾದ್ ಸಹೋದರರು! Read More »

error: Content is protected !!
Scroll to Top