February 2025

ಆರಿಕೋಡಿ ಕ್ಷೇತ್ರದ ಅದ್ರಷ್ಟ ಚೀಟಿ ಯೋಜನೆಯಲ್ಲಿ ಸುಳ್ಯದ ಪತ್ರಿಕಾ ವಿತರಕ ಸತೀಶ್ ಭಟ್ ಅವರಿಗೆ ಒಲಿಯಿತು ಬೈಕ್

ಪ್ರಸಿದ್ದ ಧಾರ್ಮಿಕ ಕ್ಷೇತ್ರ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ಅಂಗವಾಗಿ 7ನೇ ವರ್ಷದ ಅದೃಷ್ಟ ಚೀಟಿ ಯೋಜನೆಯಲ್ಲಿ ಸುಳ್ಯದ ಪತ್ರಿಕಾ ವಿತರಕ ಸತೀಶ್ ಭಟ್ ರವರಿಗೆ ಮೂರನೇ ಬಹುಮಾನ ಬೈಕ್ ಲಭಿಸಿದೆ.ಫೆ.13 ರಂದು ತನ್ನ ಸ್ನೇಹಿತರೊಂದಿಗೆ ರಾತ್ರಿ ಆರಿಕೋಡಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದಲ್ಲಿ ಭಾಗವಹಿಸಿದ್ದ ಅವರು ಅಲ್ಲಿಯೇ ಅದೃಷ್ಟ ಚೀಟಿ ಪಡೆದುಕೊಂಡಿದ್ದರು.

ಆರಿಕೋಡಿ ಕ್ಷೇತ್ರದ ಅದ್ರಷ್ಟ ಚೀಟಿ ಯೋಜನೆಯಲ್ಲಿ ಸುಳ್ಯದ ಪತ್ರಿಕಾ ವಿತರಕ ಸತೀಶ್ ಭಟ್ ಅವರಿಗೆ ಒಲಿಯಿತು ಬೈಕ್ Read More »

ಅಕ್ರಮ ಜಾನುವಾರು ಸಾಗಾಟದ ಸಂಶಯ,ಜಾನುವಾರು ಸಾಗಾಟ ವಾಹನ ತಡೆದ ಹಿಂದು ಸಂಘಟನೆ

ಸಂಪಾಜೆ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದಾರೆ ಎನ್ನುವ ಸಂಶಯದಲ್ಲಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಊರವರು ಸೇರಿಕೊಂಡು ತಡೆದು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಅಕ್ರಮವಾಗಿ ಮೈಸೂರಿಗೆ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಅಕ್ರಮ ಜಾನುವಾರು ಸಾಗಾಟದ ಸಂಶಯ,ಜಾನುವಾರು ಸಾಗಾಟ ವಾಹನ ತಡೆದ ಹಿಂದು ಸಂಘಟನೆ Read More »

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ರಿಕ್ಷಾ,ಚಾಲಕ ಸಾವು

ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಮ್ಮುಂಜೆಯಲ್ಲಿ ಕಳೆದ ಮಧ್ಯ ರಾತ್ರಿ ವೇಳೆ ನಡೆದಿದೆ.ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾ‌ರ್ ಎಂಬಲ್ಲಿ ಅಪಘಾತ ನಡೆದಿದ್ದು. ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ (37) ಮೃತಪಟ್ಟ ಯುವಕನಾಗಿದ್ದಾನೆ.ಈತನ ಸಂಬಂಧಿ ಮಕ್ಕಳಾದ ತುಷಾರ್.ಭವಿತ್ ಮತ್ತು ಪ್ರದೀಪ್‌ ಅವರನ್ನು ಮೂಡಬಿದರೆಯ ಮಿಜಾರು ಎಂಬಲ್ಲಿಗೆ ಜಾತ್ರೆಗೆ ಹೋಗಿ ವಾಪಸು ಮನೆಗೆ ಬರುವ ವೇಳೆ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ರಿಕ್ಷಾ,ಚಾಲಕ ಸಾವು Read More »

ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ಮಾಂಸ ನೀಡದೆ ಭಾರೀ ವಂಚನೆ !

ಕಾಡು ಹಂದಿಯ ಮಾಂಸ ನೀಡುವುದಾಗಿ ಅನೇಕರಿಂದ ಹಣ ಪಡೆದು ಅಪರಿಚಿತ ವ್ಯಕ್ತಿ ವಂಚಿಸಿದ ಘಟನೆ ಎಡಮಂಗಲದಲ್ಲಿ ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ಬೆಳಕಿಗೆ ಬರುತ್ತಿದೆ.ಎಡಮಂಗಲದ ವ್ಯಕ್ತಿಯೊಬ್ಬರು ಮಹಾಕಾಳಿ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಬೈಕ್ ನಲ್ಲಿ ಬಂದ ವ್ಯಕ್ತಿ “ಹಂದಿ ಮಾಂಸ ಇದೆ, ಬೇಕಾದರೆ ಕೊಡುತ್ತೇನೆ ಎಂದು ಹೇಳಿ ನಂಬಿಸಿದ್ದ .ತುಳುವರ ಕೆಡ್ಡಸವೂ ಆಗಿರುವ ಕಾರಣ ಮತ್ತು ಕೆ.ಜಿಗೆ 300 ರೂ ಎಂದಿದ್ದರಿಂದ ಹಿರಿಯ ವ್ಯಕ್ತಿ ಆತನ ಬೈಕ್ ನಲ್ಲಿ ಹೋಗಿ ಎಂ.ಎಸ್.ಎಲ್ ಶಾಪ್ ಬಳಿಯ ಇತರ

ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ಮಾಂಸ ನೀಡದೆ ಭಾರೀ ವಂಚನೆ ! Read More »

ದೇವಚಳ್ಳ : ಶಾಲಾ ರಂಗ ಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ಮಂಜೂರಾದ ರೂ 1,50,000/- ಅನುದಾನದ ಮಂಜೂರಾತಿ ಪತ್ರ ವಿತರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಯೋಜನಾಧಿಕಾರಿರವರು ಮಾತನಾಡುತ್ತ, ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಯೋಜನೆಯಿಂದ ಸಿಗುವ ಸೌಲಭ್ಯಗಳ

ದೇವಚಳ್ಳ : ಶಾಲಾ ರಂಗ ಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ಮಂಜೂರಾದ ರೂ 1,50,000/- ಅನುದಾನದ ಮಂಜೂರಾತಿ ಪತ್ರ ವಿತರಣೆ. Read More »

ಸತ್ತ ಆನೆಯ ದಫನ ಮಾಡಿದ ಅರಣ್ಯ ಇಲಾಖೆ

ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಧರ್ಮಸ್ಥಳ – ಮುಂಡಾಜೆ ಮೀಸಲು ಅರಣ್ಯದ ಅನಾರು ಪ್ರದೇಶದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಫೆ.13 ರಂದು ಮಧ್ಯಾಹ್ನ ಕಂಡು ಬಂದ ಕಾಡಾನೆ ರಾತ್ರಿ ಸುಮಾರು 11 ಗಂಟೆಗೆ ಸಾವನ್ನಪ್ಪಿದ ಘಟನೆ ಹಿನ್ನಲೆ ಫೆ. 14 ರಂದು ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ದಫನ ಮಾಡಲಾಯಿತು.25 ರಿಂದ 30 ವರ್ಷದ ಹೆಣ್ಣು ಆನೆ ಆಗಿದ್ದು, ಕಳೆದ ಎರಡು ತಿಂಗಳಿಂದ ಸರಿಯಾದ ಆಹಾರ ಸೇವಿಸುತ್ತಿರಲ್ಲಿಲ್ಲ ಎನ್ನಲಾಗಿದೆ . ಆನೆಯ ದೇಹದ

ಸತ್ತ ಆನೆಯ ದಫನ ಮಾಡಿದ ಅರಣ್ಯ ಇಲಾಖೆ Read More »

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕಾರ

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು.ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿ ಮಾಡಲಾಗಿದೆ.

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕಾರ Read More »

ಕಾಡಾನೆ ಅರಣ್ಯದಲ್ಲಿ ಸಾವು

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಕತ್ತರಿಗುಡ್ಡ ಅನ್ನಾರು ಪರಿಸರದಲ್ಲಿ ಗುರುವಾರ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಶುಕ್ರವಾರ ಮ್ರತಪಟ್ಟಿದೆ ಎಂದು ತಿಳಿದು ಬಂದಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿ ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡಿದ್ದರು. ಆದರೆ ಆನೆ ಸ್ಥಿತಿ ಗಂಭೀರವಾಗಿದ್ದರಿಂದ ಇಂದು ಅದು ಮೃತಪಟ್ಟಿದೆ ಎನ್ನಲಾಗಿದೆ.

ಕಾಡಾನೆ ಅರಣ್ಯದಲ್ಲಿ ಸಾವು Read More »

ಅರಂತೋಡು : ವಿಷ ಸೇವಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಅರಂತೋಡು ಗ್ರಾಮದ ಅಡಿಗಾರ ನಾರಾಯಣ ಎಂಬವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಶುಕ್ರವಾರ ವರದಿಯಾಗಿದೆ.ಜೀವನ್ಮರಣದ ಹೋರಾಟದಲ್ಲಿದ್ದ ನಾರಾಯಣ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ.

ಅರಂತೋಡು : ವಿಷ ಸೇವಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು Read More »

ಅರಂತೋಡು : ಆತ್ಮಹತ್ಯೆಗೆ ಯತ್ನಿಸಿ ವ್ಯಕ್ತಿ ಗಂಭೀರ

ಅರಂತೋಡು ಗ್ರಾಮದ ಅಡಿಗಾರ ನಾರಾಯಣ ಎಂಬವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಶುಕ್ರವಾರ ವರದಿಯಾಗಿದೆ.ಜೀವನ್ಮರಣದ ಹೋರಾಟದಲ್ಲಿರುವ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅರಂತೋಡು : ಆತ್ಮಹತ್ಯೆಗೆ ಯತ್ನಿಸಿ ವ್ಯಕ್ತಿ ಗಂಭೀರ Read More »

error: Content is protected !!
Scroll to Top