ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಹಿರಿಯ ಸಹಕಾರಿ ಚಂದ್ರ ಕೋಲ್ಟಾರ್ ಅವರಿಗೆ ಅಭಿನಂದನಾ ಸಮಾರಂಭ ಮತ್ತು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ
ನಿಯಮಿತ ಬೆಂಗಳೂರು ಇದರ ನೂತನ ಅಧ್ಯಕ್ಷ ಎಸ್.ಚಂದ್ರಶೇಖರ ಮೈಸೂರು ಇವರ ಅಧಿಕೃತ ಭೇಟಿ ಕಾರ್ಯಕ್ರಮ ಮಾ.15 ಶನಿವಾರ ಸುಳ್ಯದಲ್ಲಿ ನಡೆಯಲಿದೆ.
ಸಂಜೆ 5 ರಿಂದ ಅಭಿನಂದನಾ ಸಭಾ ಕಾರ್ಯಕ್ರಮ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿರವುದು ಎಂದು ಸಹಕಾರಿ ರತ್ನ ಚಂದ್ರ ಕೋಲ್ಟಾರ್ ಅಭಿನಂದನಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಅಭಿನಂದನಾ ಸಮಿತಿಯ ಸಂಚಾಲಕ ದಿನೇಶ್ ಮಡಪ್ಪಾಡಿ ಮತ್ತು ಇತರ ಪದಾಧಿಕಾರಿಗಳು
ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಮಿತಿಯ ಸಂಚಾಲಕರಾದ ದಿನೇಶ್ ಮಡಪ್ಪಾಡಿಯವರು ಕಳೆದ 30 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತ್ತಿರುವ ಚಂದ್ರ ಕೋಲ್ಕಾರ್ ಅವರು ಇತ್ತೀಚೆಗೆ ರಾಜ್ಯ ಸಹಕಾರ ಪತ್ತಿನ ಸಂಘಗಳ ನಿಯಮಿತ ಬೆಂಗಳೂರು, ಮಹಾಮಂಡಲ ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವುದು ನಮಗೆಲ್ಲ ಹೆಮ್ಕೆಯ ವಿಷಯ
ಚಂದ್ರ ಕೋಲ್ಟಾರ್ ಅವರು ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತ ಉಳಿದ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಐವರ್ನಾಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಪೂರ್ವಾಧ್ಯಕ್ಷರಾಗಿ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಪೂರ್ವಾಧ್ಯಕ್ಷರಾಗಿ ಇದೀಗ ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಜೇನು ವ್ಯವಸಾಯಗಾರರ ಸಂಘದ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದಾರೆ. ಸಂಸ್ಥೆಗೆ ಭದ್ರವಾದ ಕಟ್ಟಿದ್ದಾರೆ.ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಮೂಲಕ ನಾಮ ನಿರ್ದೇಶನಗೊಂಡು
ಸಹಕಾರ ಪತ್ತಿನ ಸಂಘಗಳ ಮಹಾಮಂಡಲಕ್ಕೆ ನಡೆದ ಮೈಸೂರಿನ ಚಂದ್ರಶೇಖರ್ ಎಸ್ ಅವರ ನಾಯಕತ್ವದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಹುಮತದಿಂದ ಆಯ್ಕೆಯಾಗಿರುವುದು ಸುಳ್ಯದ ಸಹಕಾರಿಗಳೆಲ್ಲರಿಗೂ ಕುಶಿ ನೀಡಿದೆ.ಈ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಗುವುದು. ಅಲ್ಲದೆ ಈ ಸಮಾರಂಭದಲ್ಲಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಇದರ ನೂತನ ಅಧ್ಯಕ್ಷರಾದ ಮೈಸೂರಿನ ಚಂದ್ರಶೇಖರ್ ಎಸ್ ಅವರು ಅಧಿಕೃತವಾಗಿ ಭೇಟಿಯನ್ನು ನೀಡಲಿದ್ದು ಅವರನ್ನು ಸ್ವಾಗತಿಸಿ ಅಭಿನಂದಿಸಲಾಗುವುದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಹಕಾರಿ ರತ್ನ ಚಂದ್ರ ಕೋಲ್ಟಾರ್ ಅಭಿನಂದನಾ ಸಮಿತಿಯ ಅಧ್ಯಕ್ಷ ಎಸ್.ಆರ್.ಸೂರಯ್ಯ , ಪ್ರಧಾನ ಕಾರ್ಯದರ್ಶಿ ದಿನೇಶ್ ಕೋಲ್ಟಾರು, ಕೋಶಾಧಿಕಾರಿ ಕೆ.ಟಿ.ವಿಶ್ವನಾಥ, ಜತೆ ಕಾರ್ಯದರ್ಶಿಗಳಾದ ಸುಪ್ರೀತ್ ಮೋಂಟಡ್ಕ ಪ್ರೀತಮ್ ಡಿ.ಕೆ, ಮಹಿಳಾ ಸಮಿತಿಯ ವಿನುತಾ ಪಾತಿಕಲ್ಲು ಇತರರು ಉಪಸ್ಥಿತರಿದ್ದರು.
ಮಾ.15ಕ್ಕೆ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಸಮಾರಂಭ
