ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ಬುಧವಾರ ವರದಿಯಾಗಿದೆ.
ಕನಕಮಜಲು ಗ್ರಾಮದ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ ಮಗನಿಗೆ ಕೇಳಿ ಅವರು ತಕ್ಷಣ ಅವರು ಮನೆಯವರಿಗೆ ಹಾಗೂ ಕನಕಮಜಲಿನ ಸ್ಥಳೀಯರಿಗೆ ಈ ವಿಷಯ ತಿಳಿದರು
ಅಂಗಡಿಯೆದುರು ಜನ ಸೇರಿ ಅಂಗಡಿಯ ಎದುರುನಿಂತಿದ್ದ ಹಾಗೂ ಅಂಗಡಿಯೊಳಗೆ ಕಳವು ನಡೆಸುತ್ತಿದ್ದ ಕಳ್ಳನನ್ನು ಹಿಡಿದುಕೊಂಡರು.
ವಿಚಾರಿಸಿದಾಗ
ಬಂಟ್ವಾಳದ ಸಜೀಪ ಮೂಲದ ಸುಹೈಲ್ ಹಾಗು ರಿಯಾಜ್ ಎಂದು ಪರಿಚಯ ಹೇಳಿದರೆನ್ನಲಾಗಿದೆ.
ಬಳಿಕ ಆ ಇಬ್ಬರು ಕಳ್ಳರನ್ನು ಪೋಲೀಸರಿಗೆ ಒಪ್ಪಿಸಿದರೆಂದು ತಿಳಿದುಬಂದಿದೆ.
ಕನಕಮಜಲು ಪರಿಸರದಲ್ಲಿ ಇತ್ತೀಚಿನ ಕೆಲ ವರ್ಷದಿಂದ ಕೆಲವು ಕಳವು ಪ್ರಕರಣ ನಡೆದಿತ್ತು. ಅದೆಲ್ಲವೂ ಇದುವರೆಗೆ ಪತ್ತೆಯಾಗಿರಲಿಲ್ಲ. ಇದೀಗ ರೆಡ್ ಹ್ಯಾಂಡಾಗಿ ಊರವರೇ ಸೇರಿ ಕಳ್ಳನನ್ನು ಹಿಡಿದಿದ್ದಾರೆ.
ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಊರವರು
