ಸಮಾಜ ಕಲ್ಯಾಣ ಸಂಸ್ಥೆ ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ನೀಡುವ ರಾಷ್ಟ್ರೀಯ ವೀರವನಿತೆ ಯಕ್ಷಗಾನ ನೃತ್ಯ ಕಲಾ ರತ್ನ ಪ್ರಶಸ್ತಿಗೆ ತುಳು ಹಾಗೂ ಕನ್ನಡ ಭಾಷೆಯ ಯಕ್ಷಗಾನ ಕಲಾವಿದೆ ಹಾಗೂ ತಾಳಮದ್ದಳೆಯಲ್ಲಿಯೂ ಸಾಧನೆ ಮಾಡಿದ ಬಲ್ನಾಡಿನ ಶ್ರುತಿ ವಿಸ್ಮಿತ್ ಆಯ್ಕೆಯಾಗಿದ್ದಾರೆ. ಎ.೬ರಂದು ಬೆಂಗಳೂರಿನ ಅಕ್ಕಮಹಾದೇವಿ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಶ್ರತಿ ವಿಸ್ಮಿತ್ ಗೌಡ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ





































































