March 31, 2025

ನಾಳೆ (ಏ.1) ತೊಡಿಕಾನ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕಾಲಾವದಿ ಜಾತ್ರೋತ್ಸವ ಏ.13ರಿಂದ ಆರಂಭಗೊಳ್ಳಲಿದೆ.ನಾಳೆ (ಏ.1) ಬೆಳಿಗ್ಗೆ 9 ಗಂಟೆಗೆ ಗೊನೆ ಮುಹೂರ್ತ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಸೀಮೆಯ ಹೆಚ್ಚಿನ ಭಕ್ತರು ಭಾಗವಹಿಸಬೇಕೆಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಾಳೆ (ಏ.1) ತೊಡಿಕಾನ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »

ಸುಳ್ಯದಿಂದ ಹೋಗುತ್ತಿದ್ದಾಗ ಪ್ರಸಿದ್ದ ಭಾಗವತ ಸತೀಶ ಆಚಾರ್ಯ ಬೈಕ್ ಅಪಘಾತದಲ್ಲಿ ಸಾವು

ಬೆಳ್ತಂಗಡಿ : ಪ್ರಸಿದ್ಧ ಭಾಗವತರಾದ ಸತೀಶ್ ಆಚಾರ್ಯ(40 ವ) ಇಂದು ಮುಂಜಾನೆ 4 ಗಂಟೆಗೆ ಅಂಡಿಂಜೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ.ಅವರು ಮಂಗಳದೇವಿ ಮೇಳದಲ್ಲಿ ಭಾಗತರಾಗಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರು.ಸತೀಶ್‌ ಆಚಾರ್ಯ ಅವರು ಸುಳ್ಯದಲ್ಲಿ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಇಂದು ಮುಂಜಾನೆ 4 ಗಂಟೆಗೆ ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿರುವ ಸಂದರ್ಭದಲ್ಲಿ ಅಂಡಿಂಜೆ ಸಮೀಪ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ

ಸುಳ್ಯದಿಂದ ಹೋಗುತ್ತಿದ್ದಾಗ ಪ್ರಸಿದ್ದ ಭಾಗವತ ಸತೀಶ ಆಚಾರ್ಯ ಬೈಕ್ ಅಪಘಾತದಲ್ಲಿ ಸಾವು Read More »

ಅರಂತೋಡು : ಸಂಭ್ರಮದ ಈದುಲ್ ಫಿತರ್ ಆಚರಣೆ

ಅರಂತೋಡು ನಲ್ಲಿ ಈದುಲ್ ಫಿತರ್ ಹಬ್ಬವನ್ನು ಮುಸ್ಲಿಂ ಭಾಂಧವರು ಬಹಳ ಸಂಭ್ರಮದಿಂದ ಆಚರಿಸಲಾಯಿತು, ಈದ್ ನಮಾಜ್ ನೇತ್ರತ್ವ ವನ್ನು ಖತಿಬ್ ಬಹು, ಇಸ್ಮಾಯಿಲ್ ಪೈಝಿ ಗಟ್ಟಮನೆ ನಿರ್ವಹಿಸಿ, ಈದ್ ಸಂದೇಶ ನೀಡಿದರು, ಜಮಾತ್ ಪದಾಧಿಕಾರಿಗಳು, ಅದೀನ ಸಂಘ ಸಂಸ್ಥೆ ಪದಾಧಿಕಾರಿಗಳು, ಜಮಾತ್ ನ ಸರ್ವ ಸದಸ್ಯರು ಪಾಲ್ಗೊಂಡರು

ಅರಂತೋಡು : ಸಂಭ್ರಮದ ಈದುಲ್ ಫಿತರ್ ಆಚರಣೆ Read More »

error: Content is protected !!
Scroll to Top