March 2025

ಮಾ.15 ಮತ್ತು ಮಾ.16ರಂದು ಸುಳ್ಯ ಬೂಡು ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು ಮಾ.16ರಂದು ನಡೆಯಲಿರುವುದು ಎಂದು ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಹೇಳಿದ್ದಾರೆ.ಅವರು ಸುಳ್ಯ ಪ್ರೆಸ್‌ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಸುಮಾರು ವರ್ಷಗಳಿಂದ ಬೂಡುವಿನಲ್ಲಿ ಈ ಭಾಗದ ಜನರು ದೈವಗಳ ಆರಾಧನೆ ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ದೈವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ‌. ಮಾ.15ರಂದು ಬೆಳಗ್ಗೆ […]

ಮಾ.15 ಮತ್ತು ಮಾ.16ರಂದು ಸುಳ್ಯ ಬೂಡು ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ Read More »

ಮಾ.15ಕ್ಕೆ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಸಮಾರಂಭ

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಹಿರಿಯ ಸಹಕಾರಿ ಚಂದ್ರ ಕೋಲ್ಟಾರ್ ಅವರಿಗೆ ಅಭಿನಂದನಾ ಸಮಾರಂಭ ಮತ್ತು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳನಿಯಮಿತ ಬೆಂಗಳೂರು ಇದರ ನೂತನ ಅಧ್ಯಕ್ಷ ಎಸ್.ಚಂದ್ರಶೇಖರ ಮೈಸೂರು ಇವರ ಅಧಿಕೃತ ಭೇಟಿ ಕಾರ್ಯಕ್ರಮ ಮಾ.15 ಶನಿವಾರ ಸುಳ್ಯದಲ್ಲಿ ನಡೆಯಲಿದೆ.ಸಂಜೆ 5 ರಿಂದ ಅಭಿನಂದನಾ ಸಭಾ ಕಾರ್ಯಕ್ರಮ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿರವುದು ಎಂದು ಸಹಕಾರಿ ರತ್ನ ಚಂದ್ರ ಕೋಲ್ಟಾರ್ ಅಭಿನಂದನಾ

ಮಾ.15ಕ್ಕೆ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಸಮಾರಂಭ Read More »

ಕರ್ನಾಟಕ ರಾಜ್ಯ ಬಜೆಟ್ ನಿಂದ ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ

ಕರ್ನಾಟಕ ರಾಜ್ಯ ಬಜೆಟ್ ನಿಂದ ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆಯಾಗಿದೆ ಎಂದು ವಿಧಾನ‌ ಪರಿಷತ್ ಸದಸ್ಯ ಕಿಶೋ‌ರ್ ಕುಮಾರ್ ಹೇಳಿದ್ದಾರೆ.ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ, ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲು

ಕರ್ನಾಟಕ ರಾಜ್ಯ ಬಜೆಟ್ ನಿಂದ ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ Read More »

ಆರಂತೋಡಿನಲ್ಲಿ ಕರ್ನಾಟಕದ ಮೊತ್ತ ಮೊದಲ ಪ್ರದಾನ ಮಂತ್ರಿ VDVK ಮಾರ್ಟ್ ಉದ್ಘಾಟನೆ

ಭಾರತ ಸರಕಾರದ ಬುಡಕಟ್ಟು ಮಂತ್ರಾಲಯ, ಟ್ರೈಪೆಡ್ ಹಾಗೂ DAY-NRLM( ಸಂಜೀವಿನಿ) ಜೊತೆಗೂಡಿ ಅನುಷ್ಠಾನಗೊಳಿಸುತ್ತಿರುವ PM-VDVK ಯಡಿ ಉತ್ಪಾದಿಸುತ್ತಿರುವ ವಿವಿಧ ಉತ್ಪನ್ನಗಳ ಕರ್ನಾಟಕದ ಮೊತ್ತ ಮೊದಲ ಪ್ರಕೃತಿ VDVK ಮಾರ್ಟ್ ನ್ನು ದಿನಾಂಕ 06.03.2025 ನೇ ಗುರುವಾರದಂದು ಆರಂತೋಡಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿನ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ l ಆನಂದ್ ಕೆ. IAS ರವರು ಲೋಕಾರ್ಪಣೆಗೊಳಿಸಿ VDVK ಯ ನೂತನ ಉತ್ಪನ್ನಗಳನ್ನು ಅನಾವರಣಗೊಳಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಆರಂತೋಡು ಪ್ರಕೃತಿ VDVK ಅಧ್ಯಕ್ಷರಾದ ಶೋಭಲತಾ ವಹಿಸಿದ್ದರು. ಕಾರ್ಯಕ್ರಮದಲ್ಲಿ

ಆರಂತೋಡಿನಲ್ಲಿ ಕರ್ನಾಟಕದ ಮೊತ್ತ ಮೊದಲ ಪ್ರದಾನ ಮಂತ್ರಿ VDVK ಮಾರ್ಟ್ ಉದ್ಘಾಟನೆ Read More »

ನಾಳೆ(ಮಾ.8) ತೊಡಿಕಾನದಲ್ಲಿ ಗೌಡ ಸಮುದಾಯವರಿಗೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ತಾಲೂಕು,ತೊಡಿಕಾನ ಗ್ರಾಮ ಸಮಿತಿ ವತಿಯಿಂದ(10 ಕುಟುಂಬ 18 ಗೋತ್ರದ ವ್ಯಾಪ್ತಿಗೆ ಒಳಪಟ್ಟಂತೆ)ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಸೀಮಿತ ಗ್ರಾಮಗಳಿಗೆ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟ ಫೆ.8ರಂದು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮೈದಾನ ನಡೆಯಲಿದೆ.ಸಂಜೆ 5 ಗಂಟೆಗೆ ಕಬಡ್ಡಿ ಪಂದ್ಯಾಟ ಆರಂಭವಾಗಲಿದ್ದು ರಾತ್ರಿ ಗಂಟೆ 8ಕ್ಕೆ ಸಭಾ ಕಾರ್ಯಕ್ರಮ ಉದ್ಘಾಟನೆಯಾಗಲಿದೆ.ಶ್ರೀ ಅಕ್ಷಯ್ ಕುರುಂಜಿ ಆರ್ಕಿಟೆಕ್ಟ್ಎ.ಓ.ಎಲ್.ಇ.(ರಿ.),ಕುರುಂಜಿಭಾಗ್‌, ಸುಳ್ಯ ಇವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಶ್ರೀ ಬಿ. ರಮಾನಂದ ಗೌಡ

ನಾಳೆ(ಮಾ.8) ತೊಡಿಕಾನದಲ್ಲಿ ಗೌಡ ಸಮುದಾಯವರಿಗೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ Read More »

ಕಟೀಲು ದುರ್ಗಾಪರಮೇಶ್ವರಿ ದೇವಳಕ್ಕೆ , ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ

ಪ್ರಸಿದ್ದ ದುರ್ಗಾ ದೇವಾಲಯವಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗನೊಂದಿಗೆ ಭೇಟಿ ನೀಡಿದ್ರು.ಈ ವೇಳೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ಪ್ರಸಾದ,ಶೇಷವಸ್ತ್ರ ನೀಡಿ ಗೌರವಿಸಲಾಯಿತು.ಕಾಂತಾರ ಚಾಪ್ಟರ್ 2 ಚಿತ್ರೀಕರಣ ಭಾಗಶಃ ಮುಗಿದಿರೋ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದು ಚಿತ್ರದ ಯಶಸ್ಸಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.ದರ್ಶನ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದು ಚಿತ್ರೀಕರಣ ಕೊನೆಯ ಹಂತದಲ್ಲಿದೆ ಅಕ್ಟೋಬರ್ 2 ರಂದು ಚಿತ್ರ ಬಿಡುಗಡೆ ಮಾಡುವುದಾಗಿ

ಕಟೀಲು ದುರ್ಗಾಪರಮೇಶ್ವರಿ ದೇವಳಕ್ಕೆ , ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ Read More »

ಪಿಕಪ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಪಂಜ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣ ಭಟ್ ಮೃತಪಟ್ಟ ಬೈಕ್‌ ಸವಾರ.ಕೃಷ್ಣ ಭಟ್‌ ಅವರು ಪಂಜದಿಂದ ಪುತ್ತೂರಿಗೆ ಬೈಕ್‌ ನಲ್ಲಿ ಬೈಕ್‌ ನಲ್ಲಿ ಬರುತ್ತಿದ್ದ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ ಸವಾರ , ಬೈಕ್‌ ನೊಂದಿಗೆ ನೆಲಕ್ಕೆ ಉರುಳಿ ಬಿದ್ದಿದ್ದು ,

ಪಿಕಪ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ ಅವರು ಕರ್ನಾಟಕ ಸಂಗೀತ ಗಾಯಕಿ ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ಗುರುವಾರ (ಮಾ.06) ಬೆಂಗಳೂರಿನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಕೈ ಹಿಡಿದರು.ಬಿಜೆಪಿ ನಾಯಕರಾದ ಬಿಎಲ್ ಸಂತೋಷ್, ಅಣ್ಣಾಮಲೈ, ಪ್ರತಾಪ್ ಸಿಂಹ, ಅಮಿತ್ ಮಾಳವಿಯಾ, ಬಿ.ವೈ. ವಿಜಯೇಂದ್ರ ಮತ್ತು ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವು ರಾಜಕೀಯ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ Read More »

ಅರಂಬೂರು : ಮಾ.15ರಿಂದ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ

ಅರಂಬೂರು : ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಮಾ.15ರಿಂದ 18ರ ತನಕ ನಡೆಯಲಿದೆ ಎಂದು ಮಹೋತ್ಸವ ಸಮಿತಿಯ ಅಧ್ಯಕ್ಷ ಪಿ.ಬಿ.ಸುಧಾಕರ‌ ರೈ ಹಾಗೂ ಇತರ ಪದಾಧಿಕಾರಿಳು ತಿಳಿಸಿದ್ದಾರೆ.ಅವರು ಅರಂಬೂರು ವಯನಾಟ್ ಕುಲವಂ ದೈವಸ್ಥಾನದ ವಠಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಇದೀಗ ದೈವಸ್ಥಾನದಲ್ಲಿ ಕೆಲವೊಂದು ಅಭಿವೃದ್ಧಿ ಕಾರ್ಯಗಳು ನಡೆದು ದೈವಂಕಟ್ಟು ಮಹೋತ್ಸವಕ್ಕೆ ತಯಾರು ನಡೆಸಲಾಗುತ್ತಿದೆ.ಎಲ್ಲರ‌ ಸಹಕಾರದಲ್ಲಿ ಉತ್ಸವ ನಡೆಯಲಿದ್ದು, 4 ದಿನದ ಉತ್ಸವದಲ್ಲಿ ಸುಮಾರು ಎಂಬತ್ತು

ಅರಂಬೂರು : ಮಾ.15ರಿಂದ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ Read More »

ಅರಂತೋಡು ಮಸೀದಿಯಲ್ಲಿ ದುಬೈ ಸಮಿತಿ ವತಿಯಿಂದ ಇಪ್ತಾರ್ ಕೂಟ

ಅರಂತೋಡು ಜಮಾಅತ್ ದುಬೈ ಸಮಿತಿ ವತಿಯಿಂದ ಮಾ. 5 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ ಇಪ್ತಾರ್ ಕೂಟ ನಡೆಯಿತು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ದುವಾ ನೆರವೇರಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ, ಕಾರ್ಯದರ್ಶಿ ಕೆ.ಎಂ ಮೂಸಾನ್ ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ದುಬೈ ಸಮಿತಿ ಗೌರವಾಧ್ಯಕ್ಷ ಹಾಜಿ ಬದುರುದ್ದೀನ್ ಪಠೇಲ್, ಪಠೇಲ್ ಚಾರಿಟೇಬಲ್ ಟ್ರಸ್ಟೀ ಹಾಜಿ ಅಬ್ದುಲ್ ಖಾದರ್ ಪಠೇಲ್, ದುಬೈ ಸಮಿತಿ ನಿರ್ದೇಶಕರಾದ ಕೆ.ಎಂ ಅನ್ವಾರ್, ರಾಫಿ

ಅರಂತೋಡು ಮಸೀದಿಯಲ್ಲಿ ದುಬೈ ಸಮಿತಿ ವತಿಯಿಂದ ಇಪ್ತಾರ್ ಕೂಟ Read More »

error: Content is protected !!
Scroll to Top