March 2025

ಅರಂತೋಡು ಮಸೀದಿಯಲ್ಲಿ ದುಬೈ ಸಮಿತಿ ವತಿಯಿಂದ ಇಪ್ತಾರ್ ಕೂಟ

ಅರಂತೋಡು ಜಮಾಅತ್ ದುಬೈ ಸಮಿತಿ ವತಿಯಿಂದ ಮಾ. 5 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ ಇಪ್ತಾರ್ ಕೂಟ ನಡೆಯಿತು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ದುವಾ ನೆರವೇರಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ, ಕಾರ್ಯದರ್ಶಿ ಕೆ.ಎಂ ಮೂಸಾನ್ ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ದುಬೈ ಸಮಿತಿ ಗೌರವಾಧ್ಯಕ್ಷ ಹಾಜಿ ಬದುರುದ್ದೀನ್ ಪಠೇಲ್, ಪಠೇಲ್ ಚಾರಿಟೇಬಲ್ ಟ್ರಸ್ಟೀ ಹಾಜಿ ಅಬ್ದುಲ್ ಖಾದರ್ ಪಠೇಲ್, ದುಬೈ ಸಮಿತಿ ನಿರ್ದೇಶಕರಾದ ಕೆ.ಎಂ ಅನ್ವಾರ್, ರಾಫಿ […]

ಅರಂತೋಡು ಮಸೀದಿಯಲ್ಲಿ ದುಬೈ ಸಮಿತಿ ವತಿಯಿಂದ ಇಪ್ತಾರ್ ಕೂಟ Read More »

ಸುಳ್ಯದಲ್ಲಿ ಕಂಟೈನರ್ ಲಾರಿ ಪಲ್ಟಿ,ತಪ್ಪಿದ ಅನಾಹುತ

ಸುಳ್ಯ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣ ಬಳಿ ಚಾಲಕನ ನಿಯಂತ್ರಣ ತಪ್ಪಿಪರಿಣಾಮ ಕಂಟೈನರ್ ಲಾರಿ ಪಲ್ಟಿಯಾಗಿ ರಸ್ತೆಯ ಪಕ್ಕದ ಪಿಎಲ್ ಡಿ ಬ್ಯಾಂಕ್ ನ ತಡೆಗೋಡೆಗೆ ಅಪ್ಪಳಿಸಿ ತಡೆಗೋಡೆ ಹಾನಿಯಾದ ಘಟನೆ ಇದೀಗ ವರದಿಯಾಗಿದೆ ಇಂದು ಬೆಳಗಿನ ಜಾವ 6.45 ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ರಸ್ತೆಯ ಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಸ್ಕೂಟಿಯೊಂದು ಕಂಟೈನರ್ ಅಡಿಗೆ ಸಿಲುಕಿದೆ ಎನ್ನಲಾಗಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಚಾಲಕ ಪಾರಾಗಿದ್ದು. ಪಕ್ಕದ ನಂದಿನಿ ಸ್ಟಾಲ್ ಗೂ ಹಾನಿಯಾಗಿದೆ.ಕಂಟೈನರ್ ಚಾಲಕನ ನಿದ್ದೆ ಮಂಪರು

ಸುಳ್ಯದಲ್ಲಿ ಕಂಟೈನರ್ ಲಾರಿ ಪಲ್ಟಿ,ತಪ್ಪಿದ ಅನಾಹುತ Read More »

ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ : ಅಪಾರ ಪ್ರಮಾಣದ ರಬ್ಬರ್ ನಾಶ

ಚೆಂಬು ಗ್ರಾಮದ ಊರುಬೈಲಿನಲ್ಲಿ ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ತಗುಲಿ ಸಂಪೂರ್ಣ ನಾಶವಾದ ಘಟನೆ ಬುಧವಾರ ರಾತ್ರಿ ನಡೆದಿದೆ.ಊರು ಬೈಲಿನ ಎಕ್ಕಡ್ಕ ಚರಿತ ಅವರ ಮನೆಯ ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ತಗುಲಿದ್ದು ಅಪಾರ ಪ್ರಮಾಣದ ರಬ್ಬರ್ ಸೀಟುಗಳು ಸುಟ್ಟು ಹೋಗಿವೆ. ಘಟನಾ ಸ್ಥಳಕ್ಕೆ ಸ್ಥಳೀಯರು , ಸುಳ್ಯ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ : ಅಪಾರ ಪ್ರಮಾಣದ ರಬ್ಬರ್ ನಾಶ Read More »

ನದಿಗೆ ಹಾರಿ ಆತ್ಮ ಹತ್ಯೆಗೆ ಯತ್ನಿಸಿದಾತನನ್ನು ತಡೆದ ಸಾರ್ವಜನಿಕರು

ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾತನನ್ನು ಸಾರ್ವಜನಿಕರು ರಕ್ಷಿಸಿದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ.ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಶಂಕರಯ್ಯ ಆತ್ಮಹತ್ಯೆ ಉದ್ದೇಶಕ್ಕಾಗಿಯೇ ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದಿದ್ದರು ಎನ್ನಲಾಗಿದೆ. ಮಾಹಿತಿ ಪಡೆದ ಕೂಡಲೇ ಕಾರ್ಯಾಚರಣೆ ನಡೆಸಿದ ಸಿದ್ದೀಕ್ ಎಂ.ಕೆ.ರೋಡ್, ಶಂಕರಯ್ಯ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದರು. ಉಪವಾಸವಿದ್ದ ಸಂದರ್ಭ ನಡೆಸಿದ ರಕ್ಷಣಾ ಕಾರ್ಯಕ್ಕೆ ಸಾರ್ವಜನಿಕರು ಅಭಿನಂದಿಸಿದ್ದಾರೆ.ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ಸಮಸ್ಯೆಯೇ ಕಾರಣ

ನದಿಗೆ ಹಾರಿ ಆತ್ಮ ಹತ್ಯೆಗೆ ಯತ್ನಿಸಿದಾತನನ್ನು ತಡೆದ ಸಾರ್ವಜನಿಕರು Read More »

ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ ಸ್ಮರಣಾಂಜಲಿ ಕಾರ್ಯಕ್ರಮ,ಎಂ.ಎ.ಮುಸ್ತಫಾ ಬೆಳ್ಳಾರೆ ಚುಟುಕು ವಾಚನ

ಕಾಸರಗೋಡು ಜಿಲ್ಲೆ ದೇಲಂಪಾಡಿಯ ಬನಾರಿ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ಮಾ 2ರಂದು ನಡೆದ ಕೀರ್ತಿಶೇಷ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಜರುಗಿದ ಚುಟುಕು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು’ಇವರು ಕಹಿ’ಹಾಗೂ’ಯಾಕೆ ನಿಧಾನ ಎಂಬ ಎರಡು ಚುಟುಕು ವಾಚಿಸಿದರು.

ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ ಸ್ಮರಣಾಂಜಲಿ ಕಾರ್ಯಕ್ರಮ,ಎಂ.ಎ.ಮುಸ್ತಫಾ ಬೆಳ್ಳಾರೆ ಚುಟುಕು ವಾಚನ Read More »

ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಅವರಿಗೆ ಅಂತರಾಷ್ಟ್ರೀಯ ವನಿತಾ ಪ್ರಶಸ್ತಿ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 9 ರಂದು ಬಾಪೂ ಸಭಾಂಗಣ ಗಾಂಧಿ ಭವನ ಬೆಂಗಳೂರಿಲ್ಲಿ ಚೇತನ ಪೌಂಡೇಶನ್ ಕರ್ನಾಟಕ ಸೋಶಿಯಲ್ ಕ್ಲಬ್ ಆಶ್ರಯದಲ್ಲಿ ನಡೆಯುವ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಅವರ ಸಾಹಿತ್ಯ ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಅಂತರಾಷ್ಟ್ರೀಯ ವನಿತಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಚೇತನ ಫೌಂಡೇಶನ್ ಕ್ಲಬ್ ನ ಅಧ್ಯಕ್ಷರು ಚಂದ್ರಶೇಖರ ಮಾಡಲಗೇರಿ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಅವರಿಗೆ ಅಂತರಾಷ್ಟ್ರೀಯ ವನಿತಾ ಪ್ರಶಸ್ತಿ Read More »

ಪ್ರೇಯಸಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ತಾನು ಆತ್ಮ ಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

ಬೆಳಗಾವಿ ನಗರದಲ್ಲಿ ಪಾಗಲ್ಮಿಯೋರ್ವ ಪ್ರೇಯಸಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಸಹಾಪುರದಿಂದ ಮಂಗಳವಾರ ವರದಿಯಾಗಿದೆ.ಐಶ್ವರ್ಯ ಮಹೇಶ ಲೋಹಾರ (18) ಕೊಲೆಯಾದ ಯುವತಿ. ಕುಳ್ಳೂರು ಗ್ರಾಮದ ಪಾಗಲ್ ಪ್ರೇಮಿ ಪ್ರಶಾಂತ ಯಲ್ಲಪ್ಪ ಮಂಡೇಕರ (29) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಪ್ರೇಯಸಿಯ ಚಿಕ್ಕಮ್ಮನ ಮನೆಗೆ ಬಂದ ಪ್ರಶಾಂತ ಪ್ರೇಯಸಿಯನ್ನು ಮದುವೆ ಆಗುವುದಾಗಿ ಕೇಳಿದ್ದಾನೆ. ಇದಕ್ಕೆ ಒಪ್ಪದ ಪ್ರೇಯಸಿಗೆ ವಿಷ ಕುಡಿಸಲು ಯತ್ನಿಸಿದ್ದಾನೆ. ಇದನ್ನು ನಿರಾಕರಿಸಿದ್ದಾಗ ಪ್ರೇಯಸಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ನಂತರ ತನ್ನ

ಪ್ರೇಯಸಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ತಾನು ಆತ್ಮ ಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ Read More »

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ನೇಮಕ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ ಇವರು ನೇಮಕವಾಗಿದ್ದಾರೆ.ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್, ಗಣೇಶ್ ಕಾಶಿ, ವಿಶ್ವನಾಥ ಕೆ, ಲೋಕೇಶ್ವರಿ ವಿನಯ ಚಂದ್ರ ಗೌಡ, ಪ್ರಮೋದ್ ಕುಮಾರ್ ಶೆಟ್ಟಿ, ಪ್ರಶಾಂತ್ ಮಚ್ಚಿನ, ನೇಮಕವಾಗಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ಅಧಿಕಾರ ಹಸ್ತಾಂತರವನ್ನು ಮಾಡಿದರು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ನೇಮಕ Read More »

ಅಡಿಕೆ ಬೆಳೆಯ ಎಲೆಚುಕ್ಕಿ ರೋಗದಿಂದ ರೈತರಿಗೆ ಆರ್ಥಿಕ ನಷ್ಟ: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ವಿಧಾನ ಪರಿಷತ್ ಕಲಾಪದಲ್ಲಿ ಪ್ರಸ್ತಾಪ

ಬೆಂಗಳೂರು: ಅಡಿಯ ಬೆಳೆಯ ಎಲೆಚುಕ್ಕಿ ರೋಗದಿಂದ ಸುಳ್ಯ-ಪುತ್ತೂರು,ಕಡಬ ಭಾಗದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಿದ್ದಾರೆ. ರೋಗಕ್ಕೆ ಸಮರ್ಪಕವಾಗಿ ಔಷದಿಗಳು ತೋಟಗಾರಿಕೆ ಇಲಾಖೆಯಲ್ಲಿ ಸಿಗುತ್ತಿಲ್ಲ. ಪೋಷಕಾಂಶಗಳನ್ನು ನೀಡುತ್ತಿಲ್ಲ. ಔಷಧಿಗಳ ಕೊರತೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋ‌ರ್ ಕುಮಾರ್ ಪುತ್ತೂರು ವಿಧಾನ ಪರಿಷತ್ ಕಲಾಪದಲ್ಲಿ ಹೇಳಿದರು.ರಾಜ್ಯದ ವಿಧಾನ ಮಂಡಲ ಅಧಿವೇಶನದಲ್ಲಿ ಇಂದು ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಎಲೆ ಚುಕ್ಕಿ ರೋಗದ ಬಗ್ಗೆ ಧ್ವನಿ ಎತ್ತಿ, ಕೇಂದ್ರದಿಂದ ಅನುದಾನ ಬಂದರೂ ರೈತರ ಕೈಗೆ ಸೇರಿಲ್ಲ. ರಾಜ್ಯದಿಂದಲೂ ಅನುದಾನ ಶೀಘ್ರವಾಗಿ

ಅಡಿಕೆ ಬೆಳೆಯ ಎಲೆಚುಕ್ಕಿ ರೋಗದಿಂದ ರೈತರಿಗೆ ಆರ್ಥಿಕ ನಷ್ಟ: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ವಿಧಾನ ಪರಿಷತ್ ಕಲಾಪದಲ್ಲಿ ಪ್ರಸ್ತಾಪ Read More »

ಪುತ್ತೂರು ತಾಲೂಕಿನಲ್ಲಿ ಭೂಕಂಪನದ ಅನುಭವ

ಪುತ್ತೂರು ತಾಲೂಕಿನಲ್ಲಿ ಭೂ ಕಂಪನದ ಅನುಭವವಾಗಿದ್ದು, ಆತಂಕಗೊಂಡು ಮನೆಯಿಂದ ಜನ ಓಡಿ ಬಂದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.ಪುತ್ತೂರು ತಾಲೂಕಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪನದ ಅನುಭವವಾಗಿದೆ ಎನ್ನಲಾಗಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯದಿಂದ ಮನೆಯಿಂದ ಹೊರಗ ಓಡಿ ಬಂದಿದ್ದಾರೆ. ಆದರೆ ಯಾವ ಕಾರಣಕ್ಕೆ ಭೂಮಿ ಕಂಪಿಸಿದೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಗೊತ್ತಾಗಬೇಕಿದೆ.

ಪುತ್ತೂರು ತಾಲೂಕಿನಲ್ಲಿ ಭೂಕಂಪನದ ಅನುಭವ Read More »

error: Content is protected !!
Scroll to Top