April 1, 2025

ರಾಜ್ಯದ ಜನತೆಗೆ ಮತ್ತೆ ಗಾಯದ ಮೇಲೆ ಬರೆ ಎಳೆದ ರಾಜ್ಯ ಸರಕಾರ, ಡಿಸೇಲ್ ಬೆಲೆ ಮತ್ತೆ ಏರಿಕೆ

ಬೆಂಗಳೂರು: ವಿದ್ಯುತ್ ಹಾಗೂ ಹಾಲಿನ ದರ ಏರಿಕೆ ಮತ್ತು ಮುದ್ರಾಂಕ ಶುಲ್ಕಗಳ ಹೆಚ್ಚಳದ ಬೆನ್ನಲ್ಲೇ ಡೀಸೆಲ್ ಬೆಲೆಯೂ ಹೆಚ್ಚಾಗಿದ್ದು ಏಪ್ರಿಲ್ 1ರ ಮಂಗಳವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ಏರುಗತಿಯಲ್ಲಿ ಸಾಗಿರುವ ತೆರಿಗೆ ಹೇರಿಕೆಯ ಭಾರ ಇದೀಗ ಡೀಸೆಲ್ ಮಾರಾಟದ ಮೇಲೂ ಬಿದ್ದಿದ್ದು ಶೇ.18.44ರಷ್ಟಿದ್ದ ಮಾರಾಟ ತೆರಿಗೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಶೇ.21.17ಕ್ಕೆ ಏರಿಸಿದೆ. ತತ್ಪರಿಣಾಮ ಡೀಸೆಲ್ ದರ ಸರಾಸರಿ 2 ರೂ. ಹೆಚ್ಚಳವಾಗಿದೆ. ಪ್ರಸ್ತುತ 88.99 ರೂ. ಇರುವ ಪ್ರತಿ ಲೀಟ‌ರ್ […]

ರಾಜ್ಯದ ಜನತೆಗೆ ಮತ್ತೆ ಗಾಯದ ಮೇಲೆ ಬರೆ ಎಳೆದ ರಾಜ್ಯ ಸರಕಾರ, ಡಿಸೇಲ್ ಬೆಲೆ ಮತ್ತೆ ಏರಿಕೆ Read More »

ರಸ್ತೆಯಲ್ಲಿ ಮತ್ತೊಂದು ಹೆಣ್ಣು ಮಗು ಪತ್ತೆ!

ದ.ಕ ಜಿಲ್ಲೆಯಲ್ಲಿ ಕಾಡಿನಲ್ಲಿ ನಾಲ್ಕು ತಿಂಗಳ ಮಗುವೊಂದು ಪತ್ತೆಯಾದ ಕೆಲವೇ ದಿನಗಳಲ್ಲಿ ಕೂಡೋಳುಕೆರೆ -ಮುಂಡೋಟ್ಟು ರಸ್ತೆಯಲ್ಲಿ ಅಂದಾಜು 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದ್ದು ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ, 0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಇಂದು

ರಸ್ತೆಯಲ್ಲಿ ಮತ್ತೊಂದು ಹೆಣ್ಣು ಮಗು ಪತ್ತೆ! Read More »

ಪೆರಾಜೆ : ಶ್ರದ್ಧಾ ಭಕ್ತಿಯಿಂದ ನಡೆದ ಭಗವತಿ ದೊಡ್ಡ ಮುಡಿ ಉತ್ಸವ

ಪೆರಾಜೆ ಶ್ರೀ ಶಾಸ್ತಾವು ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಶ್ರೀ ಭಗವತಿ ದೊಡ್ಡಮುಡಿ ಏ.1ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.ಸಹಸ್ರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು. ಕ್ಷೇತ್ರದ ಆಡಳಿತ ಮಂಡಳಿಯವರು,ಸಮಿತಿ ಸದಸ್ಯರು, ತಕ್ಕ ಮುಖ್ಯಸ್ಥರು ಉಪಸ್ಥಿತರಿದ್ದರು.

ಪೆರಾಜೆ : ಶ್ರದ್ಧಾ ಭಕ್ತಿಯಿಂದ ನಡೆದ ಭಗವತಿ ದೊಡ್ಡ ಮುಡಿ ಉತ್ಸವ Read More »

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕಾಲಾವದಿ ಜಾತ್ರೋತ್ಸವ ಏ.13ರಿಂದ ಆರಂಭಗೊಳ್ಳಲಿದ್ದುಏಪ್ರಿಲ್ 1ರಂದು ಬೆಳಿಗ್ಗೆ 9 ಗಂಟೆಗೆ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.ಈ ಸಂದರ್ಭಗಳಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ,ದೇವಳದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ ವ್ಯವಸ್ಥಾಪನಾ ಸಮಿತಿಸದಸ್ಯರಾದ ತೀರ್ಥರಾಮ ಪರ್ನೋಜಿ,ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ,ವಸಂತ ಪೆಲ್ತಡ್ಕ,ಮಾಲತಿ ಬೋಜಪ್ಪ,ಚಂಚಲಾಕ್ಷ್ಮಿನಾಗೇಂದ್ರ,ಮಾಜಿ ಸದಸ್ಯರಾದ

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ; ಇರಾನ್‌ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್: ಪರಮಾಣು ಒಪ್ಪಂದಕ್ಕೆ  ಸಹಿ ಹಾಕದಿದ್ದರೆ ಮತ್ತು ಪರಮಾಣು ಕಾರ್ಯಕ್ರಮದ ಬಗ್ಗೆ ಅಮೆರಿಕದ ಜೊತೆ ಮಾತುಕತೆಗೆ ಒಪ್ಪದಿದ್ದರೆ ಇರಾನ್‌ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಇಂದು ಬೆದರಿಕೆ ಹಾಕಿದ್ದಾರೆ. ಖಾಸಗಿ ವಾಹಿನಿಗೆ ನೀಡಿದ ದೂರವಾಣಿ ಸಂದರ್ಶನದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಯುಎಸ್ ಮತ್ತು ಇರಾನಿನ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ ಎಂದು ದೃಢಪಡಿಸಿದರು.ಈ ಬಗ್ಗೆ ಅಂತಿಮ ಎಚ್ಚರಿಕೆಯ ಸಂದೇಶ ರವಾನಿಸಿದ ಟ್ರಂಪ್, “ಅವರು ಒಪ್ಪಂದ ಮಾಡಿಕೊಳ್ಳದಿದ್ದರೆ, ಬಾಂಬ್ ದಾಳಿ ನಡೆಸಬೇಕಾಗುತ್ತದೆ. ಅವರು ಹಿಂದೆಂದೂ

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ; ಇರಾನ್‌ಗೆ ಟ್ರಂಪ್ ಬೆದರಿಕೆ Read More »

ಮಾದಕ ದ್ರವ್ಯ ಸೇವನೆ ಮಾಡಿದ ಆರೋಪಿಯ ಬಂಧನ

ಮಾದಕ ದ್ರವ್ಯ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಯೊಬ್ಬನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಜೋಗಿಬೆಟ್ಟು ನಿವಾಸಿ ನಿಝಾಮುದ್ದೀನ್ (27ವ.) ಬಂಧಿತ ಆರೋಪಿ.ಮಾ.31ರಂದು ಬೆಳಿಗ್ಗೆ 9 ಗಂಟೆಗೆ ಉಪ್ಪಿನಂಗಡಿ ಠಾಣೆ ಪಿಎಸ್‌ಐ ಅವಿನಾಶ್‌ರವರು ಸಿಬ್ಬಂದಿಗಳೊಂದಿಗೆ ರಂಜಾನ್ ಹಬ್ಬದ ಪ್ರಯುಕ್ತ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಉಪ್ಪಿನಂಗಡಿ ಜಂಕ್ಷನ್‌ನಲ್ಲಿರುವ ಫೈ ಓವರ್ ಬಳಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಅಮಲು ಸೇವನೆ ಮಾಡಿ ನಶೆಯಲ್ಲಿದ್ದವರಂತೆ ಮಾತನಾಡುತ್ತಾ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಸಮರ್ಪಕ ಉತ್ತರವನ್ನು ನೀಡಲು

ಮಾದಕ ದ್ರವ್ಯ ಸೇವನೆ ಮಾಡಿದ ಆರೋಪಿಯ ಬಂಧನ Read More »

error: Content is protected !!
Scroll to Top