ಮಂಗಳೂರು : ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರಾಧಿಕಾರದ ಆಯುಕ್ತರಿಗೆ ಬ್ರೋಕರ್ ಗಳಿಂದ ವಾಮಾಚಾರದ ಬೆದರಿಕೆ!

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರಾಧಿಕಾರದ ಆಯುಕ್ತರು ಬ್ರೋಕರ್‌ ವಿರುದ್ದ ಕಠಿಣ ಕ್ರಮ ಕೈಗೊಂಡಿದ್ದು ಬ್ರೋಕರ್ ಗಳು ಸೇರಿ ಆಯುಕ್ತರ ವಿರುದ್ದವೇ ವಾಮಾಚಾರದ ಬೆದರಿಕೆಯೊಡ್ಡಿದ ಘಟನೆ ವರದಿಯಾಗಿದೆ.
ಬ್ರೋಕರ್‌ಗಳ ಅಟ್ಟಹಾಸದಿಂದ ಕಂಗಾಲಾದ ಮುಡಾ ಆಯುಕ್ತ ನೂರ್ ಝಹರಾ ಖಾನ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮುಡಾ ಕಚೇರಿಗೆ ದಲ್ಲಾಳಿಗಳನ್ನು ನಿರ್ಬಂಧಿಸಿದ್ದಕ್ಕೆ ಕಮಿಷನ‌ರ್ ಮೇಲೆ ವಾಮಾಚಾರ ಪ್ರಯೋಗದ ಬೆದರಿಕೆಯೊಡ್ಡಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆಯೆಂದು ದೂರಲಾಗಿದೆ. ಈ ಬಗ್ಗೆ ಅವರು ಮಂಗಳೂರಿನ ಉರ್ವಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದು
ದೂರಿನ ಆಧಾರದಲ್ಲಿ ಇಬ್ಬರು ದಲ್ಲಾಳಿಗಳಾದ ಬ್ರೋಕರ್‌ ವಹಾಬ್ (45) ಮತ್ತು ಅಸಿಸ್ಟೆಂಟ್ ಬ್ರೋಕರ್ ಸಾಬಿತ್ (25) ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top