ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಏ.22 ರಂದು ಭೇಟಿ ನೀಡಿದ್ದಾರೆ.
ಈ ವೇಳೆ ಪೊಲೀಸ್ ಇಲಾಖೆಯ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.
ಅಮಿತ್ ಸಿಂಗ್ ಭೇಟಿ ವೇಳೆ ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಎಸ್.ಪಿ.ಯತೀಶ್ ಎನ್, ಪ್ರೊಬೆಷನರಿ ಐಪಿಎಸ್ ಮನಿಷಾ ಮನೋಹಿ, ಪುತ್ತೂರು ಡಿವೈಎಸ್.ಪಿ. ಅರುಣ್ ನಾಗೇ ಗೌಡ, ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ತಿಮ್ಮಪ್ಪ ನಾಯ್ ಬೆಳ್ಳಾರೆ ಠಾಣಾ ಎಸ್.ಐ.ಈರಯ್ಯ ದೂಂತೂರು, ಸುಬ್ರಹ್ಮಣ್ಯ ಠಾಣಾ ಎಸ್.ಐ.ಕಾರ್ತಿಕ್ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ
