ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜೋಡುಪಾಲ ಸೇತುವೆಯ ಬಳಿ ದೋಸ್ತ್ ಹಾಗೂ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾದ ಘಟನೆ ಏ.24 ರಂದು ಸಂಜೆ ನಡೆದಿದೆ.
ಘಟನೆಯಲ್ಲಿ ವಾಹನಗಳ ಎರಡೂ ಜಖಂಗೊಂಡಿದ್ದು, ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳನ್ನು ಮಡಿಕೇರಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಹಾಗೂ ಎರಡೂ ಬದಿಯಲ್ಲೂ ವಾಹನಗಳು ಕಿಲೋಮೀಟರ್ ರಷ್ಟು ಸರತಿ ಸಾಲಿನಲ್ಲಿ ನಿಂತಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸರು ಆಗಮಿಸಿದ್ದಾರೆ.