April 2025

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರಾರ ಗುಂಡಿನ ದಾಳಿ,ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವು

ಕಾಶ್ಮೀರ : ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ.ಕೊಪ್ಪ ತಾಲೂಕಿನ ಕುಣಿಮಕ್ಕಿ ಮೂಲದ ಮಂಜುನಾಥ್ ರಾವ್ ತಂದೆ ಶಿವಮೊಗ್ಗ ಮ್ಯಾಮ್ ಕೋಸ್ ನಲ್ಲಿ ಮ್ಯಾಮೇಜರ್ ಆಗಿದ್ರು, ನಿವೃತ್ತಿ ಬಳಿಕ ಶಿವಮೊಗ್ಗದಲ್ಲೇ ಮಂಜುನಾಥ್ ರಾವ್ ಸೆಟ್ಲ್ ಆಗಿದ್ದರು.ಒಟ್ಡು 30 ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ.20 ವರ್ಷಗಳ ಹಿಂದೆಯೇ ಶಿವಮೊಗ್ಗ ತೆರಳಿದ್ದ ಮಂಜುನಾಥ್ ರಾವ್ ಕುಟುಂಬ ಶಿವಮೊಗ್ಗದಲ್ಲಿ ರಿಯಲ್‌ ಎಸ್ಟೇಟ್ ಮಾಡಿಕೊಂಡಿಕೊಂಡಿದ್ದರು. ಪತ್ನಿ ಕಡೂರು […]

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರಾರ ಗುಂಡಿನ ದಾಳಿ,ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವು Read More »

ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ

ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಏ.22 ರಂದು ಭೇಟಿ ನೀಡಿದ್ದಾರೆ.ಈ ವೇಳೆ ಪೊಲೀಸ್ ಇಲಾಖೆಯ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.ಅಮಿತ್ ಸಿಂಗ್ ಭೇಟಿ ವೇಳೆ ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಎಸ್.ಪಿ.ಯತೀಶ್ ಎನ್, ಪ್ರೊಬೆಷನರಿ ಐಪಿಎಸ್ ಮನಿಷಾ ಮನೋಹಿ, ಪುತ್ತೂರು ಡಿವೈಎಸ್.ಪಿ. ಅರುಣ್ ನಾಗೇ ಗೌಡ, ಸುಳ್ಯ ಸರ್ಕಲ್ ಇನ್ಸ್‌ ಪೆಕ್ಟರ್ ತಿಮ್ಮಪ್ಪ ನಾಯ್ ಬೆಳ್ಳಾರೆ ಠಾಣಾ ಎಸ್.ಐ.ಈರಯ್ಯ ದೂಂತೂರು, ಸುಬ್ರಹ್ಮಣ್ಯ ಠಾಣಾ ಎಸ್.ಐ.ಕಾರ್ತಿಕ್ ಹಾಗೂ ಪೊಲೀಸ್

ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ Read More »

ಪ್ರಿಯಕರನ ಕೈ ಹಿಡಿದ ಸರಿಗಮಪ ಖ್ಯಾತಿಯ ಪೃಥ್ವಿ ಭಟ್

ಬೆಂಗಳೂರು: ಹೆತ್ತವರ ವಿರೋಧ ನಡುವೆಯೂ ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ಪ್ರೀಯಕರನ ಕೈ ಹಿಡಿದು ಸಪ್ತಪದಿ ತುಳಿದಿದ್ದಾರೆ. ಇದರ ಮಧ್ಯೆ ತಂದೆ ಶಿವಪ್ರಸಾದ್ ಭಟ್ ಅವರು ಆಡಿಯೋ ಒಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರು. ಅದರಲ್ಲಿ ಮಗಳು ಹಾಗೂ ಆಕೆಯ ಸಂಗೀತ ಗುರು ನರಹರಿ ದೀಕ್ಷಿತ್ ಅವರ ಬಗ್ಗೆ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ತಂದೆಯ ಆಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಗಾಯಕಿ ಪೃಥ್ವಿ ಭಟ್ ತಂದೆಗೆ ಕಳುಹಿಸಿರುವ ಆಡಿಯೋ ವೈರಲ್ ಆಗಿದೆ.ಪೃಥ್ವಿ ಭಟ್ ಮನೆಯವರ

ಪ್ರಿಯಕರನ ಕೈ ಹಿಡಿದ ಸರಿಗಮಪ ಖ್ಯಾತಿಯ ಪೃಥ್ವಿ ಭಟ್ Read More »

ತಾಲೂಕು ಗೌಡ ಮಹಿಳಾ ಘಟಕದಿಂದ ಚೆಸ್ ಸ್ಪರ್ಧೆ ಉದ್ಘಾಟನೆ

ಸುಳ್ಯ ಗೌಡರ ಯುವ ಸೇವಾ ಸಂಘ ಇದರ ತಾಲೂಕು ಮಹಿಳಾ ಘಟಕದ ವತಿಯಿಂದ ಮಕ್ಕಳ ಮುಕ್ತ ಚೆಸ್ ಸ್ಪರ್ಧೆ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಯಿತು.ಚೆಸ್ ಸ್ಪರ್ಧೆಯನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಯವರು ಉದ್ಘಾಟಿಸಿ ಮಾತನಾಡಿದರು.ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಕರ್ನಾಟಕ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕರಾಗಿರುವ ಸಹಕಾರಿ ರತ್ನ ಚಂದ್ರ ಕೋಲ್ಟಾರ್ ರನ್ನು ಸನ್ಮಾನಿಸಲಾಯಿತು.

ತಾಲೂಕು ಗೌಡ ಮಹಿಳಾ ಘಟಕದಿಂದ ಚೆಸ್ ಸ್ಪರ್ಧೆ ಉದ್ಘಾಟನೆ Read More »

ಸುಳ್ಯ : ಡಾ.ಆರ್.ಕೆ ನಾಯರ್ ರವರಿಗೆ ಶ್ರೀಗುರುರಾಘವೇಂದ್ರಾನುಗ್ರಹ ಮೊದಲ ಪ್ರಶಸ್ತಿ ಪ್ರದಾನ

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಎರಡನೇಯ ದಿನದಂದು ಶ್ರೀಗುರುರಾಘವೇಂದ್ರಾನುಗ್ರಹ ಮೊದಲ ಪ್ರಶಸ್ತಿ ಪ್ರದಾನ ಸಮಾರಂಭವು ಎ.22 ರಂದು ಮಠದ ಸಭಾಭವನದಲ್ಲಿ ನಡೆಯಿತು.ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಸಭಾ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಆಶೀರ್ವಚನ ನೀಡಿದರು.ಗ್ರೀನ್ ಹೀರೋ ಆಫ್ ಇಂಡಿಯಾ ಪರಿಸರ ತಜ್ಞರಾದ ಡಾ.ಆ‌ರ್.ಕೆ.ನಾಯರ್ ರವರಿಗೆ ಸ್ವಾಮೀಜಿಯವರ ಸಮ್ಮುಖದಲ್ಲಿ ಮಠದ ವತಿಯಿಂದ ಪ್ರದಾನ ಮಾಡಲಾಗುವ ಪ್ರಥಮ ವರ್ಷದ ಶ್ರೀಗುರುರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರದಾನ

ಸುಳ್ಯ : ಡಾ.ಆರ್.ಕೆ ನಾಯರ್ ರವರಿಗೆ ಶ್ರೀಗುರುರಾಘವೇಂದ್ರಾನುಗ್ರಹ ಮೊದಲ ಪ್ರಶಸ್ತಿ ಪ್ರದಾನ Read More »

ಸುಳ್ಯ : ವೈಭವದಿಂದ ನಡೆದ ರಾಯರ ಪಟ್ಟಣ ಸವಾರಿ

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 7ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಅಂಗವಾಗಿ ಏ.21 ರಂದು ಪಲ್ಲಕ್ಕಿಯಲ್ಲಿ ರಾಯರ ವೈಭವದ ಪಟ್ಟಣ ಸವಾರಿ ಸುಳ್ಯದ ಮುಖ್ಯ ರಸ್ತೆಯಲ್ಲಿ ನಡೆಯಿತು. ಚೆಂಡೆ, ಡೋಲು, ವಾದ್ಯ ಮೇಳ, ಆಕರ್ಷಕ ಭಜನೆ, ದೀಪಗಳ ಸಾಲು, ಭಜನೆಯೊಂದಿಗೆಭಕ್ತರೊಂದಿಗೆ ರಾಯರನ್ನು ಪಲ್ಲಕಿಯಲ್ಲಿ ಕುಳ್ಳಿರಿಸಿ ಪಟ್ಟಣ ಸವಾರಿ ಮಾಡಲಾಯಿತು. ಶ್ರೀ ಗುರು ರಾಘವೇಂದ್ರ ಮಠದಿಂದ ಹೊರಟ ಪಟ್ಟಣ ಸವಾರಿಗೆಯುವಜನ ಸಂಯುಕ್ತ ಮಂಡಳಿ, ಶ್ರೀಹರಿ ಕಾಂಪ್ಲೆಕ್ಸ್, ಬಸ್ ನಿಲ್ದಾಣದ ಬಳಿಯಲ್ಲಿ ಹಾಗು ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿ

ಸುಳ್ಯ : ವೈಭವದಿಂದ ನಡೆದ ರಾಯರ ಪಟ್ಟಣ ಸವಾರಿ Read More »

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಜೀವಿನಿ ಒಕ್ಕೂಟ ಸ್ವ-ಉತ್ಪನ್ನ ಪ್ರದರ್ಶನ ಮತ್ತು ಮಾರಾಟಸಂಪಾಜೆಯ ಮೋಹಿನಿ ವಿಶ್ವನಾಥ್ (ನಿಶಾ)ರಿಗೆ ಜಿಲ್ಲಾ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಸ್ವತಃ ತಾವೇ ಮಾಡಿರುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮಾರಾಟ ಮೇಳ ಮಂಗಳೂರು, ತಾಲ್ಲೂಕು ಪಂಚಾಯತ್ ಆವರಣದಲ್ಲಿ ನಡೆಯಿತು.ಕೆ.ಇ ಜಯರಾಮ್ ಜಿಲ್ಲಾ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಸಹಾಯಕ ಆಯುಕ್ತರು ಹರ್ಷವರ್ಧನ್ ಎಸ್. ಜೆ ಸ್ವಸಹಾಯ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಜೀವಿನಿ ಒಕ್ಕೂಟ ಸ್ವ-ಉತ್ಪನ್ನ ಪ್ರದರ್ಶನ ಮತ್ತು ಮಾರಾಟಸಂಪಾಜೆಯ ಮೋಹಿನಿ ವಿಶ್ವನಾಥ್ (ನಿಶಾ)ರಿಗೆ ಜಿಲ್ಲಾ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ Read More »

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ನಡೆದ ವಾಲಿಬಾಲ್ ತರಬೇತಿ ಶಿಬಿರ ಸಮಾರೋಪ ಮತ್ತು ತಾಲೂಕು ವಾಲಿಬಾಲ್ ಚಾಂಪಿಯನ್ ಶಿಪ್ ಉದ್ಘಾಟನೆ

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಇದರ ಆಶ್ರಯದಲ್ಲಿ ಯುವಜನ ಸಂಯುಕ್ತ ಮಂಡಳಿ (ರಿ) ಇದರ ಸಹಕಾರದಲ್ಲಿ ಎ.11ರಿಂದ ನಡೆದ ವಾಲಿಬಾಲ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಹೊನಲು ಬೆಳಕಿನ ಪುರುಷರ ತಾಲೂಕು ವಾಲಿಬಾಲ್ ಪಂದ್ಯಾಟ ಉದ್ಘಾಟನಾ ಕಾರ್ಯಕ್ರಮ ಸುಳ್ಯ ಯುವಜನ ಸಂಯುಕ್ತ ಮಂಡಳಿ ಮುಂಭಾಗದ ಜ್ಯುನಿಯರ್ ಕಾಲೇಜ್ ಕ್ರೀಡಾಂಗಣ ದಲ್ಲಿ ನಡೆಯಿತು. ವಾಲಿಬಾಲ್ ಅಸೋಸಿಯೇಶನ್ (ರಿ) ಸುಳ್ಯ ಇದರ ಅಧ್ಯಕ್ಷರಾದ ದೊಡ್ಡಣ್ಣ ಬರೆಮೇಲು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯದ

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ನಡೆದ ವಾಲಿಬಾಲ್ ತರಬೇತಿ ಶಿಬಿರ ಸಮಾರೋಪ ಮತ್ತು ತಾಲೂಕು ವಾಲಿಬಾಲ್ ಚಾಂಪಿಯನ್ ಶಿಪ್ ಉದ್ಘಾಟನೆ Read More »

ತೊಡಿಕಾನ : ದೇವಳಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಏ.20ರಂದು ಭೇಟಿ ನೀಡಿ ಮಲ್ಲಿಕಾರ್ಜುನ ದೇವರ ದರ್ಶನ ಪಡೆದರು.ದೇವರ ದರ್ಶನ ಪಡೆದು ಅವರು ಬಳಿಕ‌ ದೇವರ ಮೀನುಗಳಿಗೆ ಆಹಾರ. ಸಮರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಅರಂತೋಡು‌ ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ನಿಕೇಶ್ ಉಬರಡ್ಕ ಉಪಸ್ಥಿತರಿದ್ದರು.

ತೊಡಿಕಾನ : ದೇವಳಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಶ್ರದ್ಧಾ ಭಕ್ತಿಯಿಂದ ನಡೆದ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಆರಾಟ ಮಹೋತ್ಸವ

ಸುಳ್ಯ ಸೀಮೆ ಮಹತೋಭಾರ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಆರಾಟ ಮಹೋತ್ಸವ ಏ.19ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.ಏ.18ರಂದು ರಾತ್ರಿ ಬಲಿ ಹೊರಟು ವಾಲಸಿರಿ ಉತ್ಸವ ನಡೆಯಿತು.ಏ.19ರಂದು ಬೆಳಿಗ್ಗೆ 7 ಗಂಟೆಗೆ ಆರಾಟ ಬಾಗಿಲು ತೆರೆಯಲಾಯಿತು.ಸಂಜೆ 5 ಗಂಟೆಗೆ ಮಿತ್ತೂರು ನಾಯರ್ ದೈವದ ಭಂಡಾರ ಆಗಮಿಸಿತು.ರಾತ್ರಿ ಉತ್ಸವ ಬಲಿ ನಡೆದು ಅವಭ್ರತ ಸ್ನಾನವಾಗಿ ಬಂದು ದರ್ಶನ ಬಲಿ,ಬಟ್ಟಲು ಕಾಣಿಕೆ,ಧ್ವಜ ಆವರೋಹಣ ನಡೆಯಿತು.ಏ.20ರಂದು ಮಧ್ಯಾಹ್ನ ಸಂಪ್ರೋಕ್ಷಣೆ,ಮಂತ್ರಾಕ್ಷತೆ ನಡೆಯಿತು.ಭಕ್ತರು ಆಧಿಕ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ದರ್ಶನ

ಶ್ರದ್ಧಾ ಭಕ್ತಿಯಿಂದ ನಡೆದ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಆರಾಟ ಮಹೋತ್ಸವ Read More »

error: Content is protected !!
Scroll to Top