April 2025

ಅರಂತೋಡು: ಮೆಸ್ಕಾಂ ಸಲಹಾ ಸಮಿತಿಗೆ ಸದಸ್ಯರ ನಾಮನಿರ್ದೇಶನ

ಅರಂತೋಡು ಮೆಸ್ಕಾಂ ಸಲಹಾ ಸಮಿತಿಗೆ ರಾದಕೃಷ್ಣ ಪಾರೆಮಜಲು, ಕೇಪು ದೊಡ್ಡಕುಮೇರಿ, ಚೈತ್ರ ಬಾಳೆಕಜೆ ತೋಡಿಕಾನ, ತಾಜುದ್ದಿನ್ ಅರಂತೋಡು ಹಾಗೂ ಜುಬೈರ್ ಎಸ್ ಇ ನಾಮನಿರ್ದೇಶನಗೊಂಡಿದ್ದಾರೆ. ಇವರ ನೇಮಕಕ್ಕೆ ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ, ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಹಾಗೂ ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಶಿಫಾರಸು ಮಾಡಿದ್ದರು.

ಅರಂತೋಡು: ಮೆಸ್ಕಾಂ ಸಲಹಾ ಸಮಿತಿಗೆ ಸದಸ್ಯರ ನಾಮನಿರ್ದೇಶನ Read More »

ಮಂಡೆಕೋಲು : ಮಹಾವಿಷ್ಣುಮೂರ್ತಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವವು ಎ.22ರಿಂದ ಆರಂಭಗೊಂಡು ಎ.26ರ ತನಕ ನಡೆಯುವುದು. ಆ ಪ್ರಯುಕ್ತ ಗೊನೆ ಮುಹೂರ್ತ ಎ.14ರಂದು ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಸದಸ್ಯರು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ದಾಮೋದರ ಪಾತಿಕಲ್ಲು ಹಾಗೂ ಪದಾಧಿಕಾರಿಗಳು, ಪವಿತ್ರ ಪಾಣಿ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್ ಕೇನಾಜೆ ಮತ್ತು ಪದಾಧಿಕಾರಿಗಳು, ಕಚೇರಿಸಮಿತಿ ಅಧ್ಯಕ್ಷ ಪೂರ್ಣಚಂದ್ರ ಕಣೆಮರಡ್ಕ ಹಾಗೂ ಪದಾಧಿಕಾರಿಗಳು, ವಿವಿಧ ಸಮಿತಿಯವರು,

ಮಂಡೆಕೋಲು : ಮಹಾವಿಷ್ಣುಮೂರ್ತಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »

ಅಡ್ಡ ಹೊಳೆ ಸಮೀಪ ಬಸ್ ಅಪಘಾತಗೊಂಡು ಮೂವರು ಗಂಭೀರ

ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೆಂದು ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಎ.14ರಂದು ರಾತ್ರಿ ನಡೆದಿದೆ.ಘಟನೆಯಲ್ಲಿ ಬಸ್ಸಿನಲ್ಲಿದ್ದ ದಂಪತಿ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು 10 ಮಂದಿಗೆ ಸಣ್ಣಪುಟ್ಟ ಗಾಯವಾಗಿರುವುದಾಗಿ ವರದಿಯಾಗಿದೆ.ಕುಂದಾಪುರ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸು ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿದೆ.ಬಸ್ಸಿನ ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಡಿವೈಡರ್‌ಗೆ

ಅಡ್ಡ ಹೊಳೆ ಸಮೀಪ ಬಸ್ ಅಪಘಾತಗೊಂಡು ಮೂವರು ಗಂಭೀರ Read More »

ಪರ್ನಿಚರ್ ಮಳಿಗೆಗೆ ಬೆಂಕಿ ಬಿದ್ದು ನಷ್ಟ

ಪುತ್ತೂರು ತಾಲೂಕಿನ ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿರುವ ಫರ್ನಿಚರ್ ಮಳಿಗೆಯೊಂದರಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ.ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ.ಬೆಂಕಿ ಬಿದ್ದಿರುವ ವಿಷಯ ತಿಳಿದು ಜನರು ದೌಡಾಯಿಸಿ ಆಗಮಿಸುತ್ತಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

ಪರ್ನಿಚರ್ ಮಳಿಗೆಗೆ ಬೆಂಕಿ ಬಿದ್ದು ನಷ್ಟ Read More »

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ‌ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಧ್ವಜಾರೋಹಣ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಏ.13ರಂದು ಧ್ವಜಾರೋಹಣ ನಡೆಯಿತು.ಏ.20ರ ತನಕ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.ವ್ಯವಸ್ಥಾಪನಾ ಸಮಿತಿ ಅಧ್ಯಕ್ಣ ಕೇಶವ ಕೊಳಲುಮೂಲೆ,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ಬಿ. ದಿವಾಕರ ರೈ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವಿನ್ ರಂಗತ್ತಮಲೆ, ಧ್ವಜಾರೋಹಣ ದಿನದ ಅನ್ನದಾನ ಪ್ರಾಯೋಜಕರಾದ ಡಾ. ಕೆ. ವಿ. ರೇಣುಕಾಪ್ರಸಾದ್ ದಂಪತಿಗಳು, ಮರ್ಕಂಜ – ಮಿನುಂಗೂರು ದೇವಸ್ಥಾನದ ಜೀರ್ಣೋದ್ದಾರ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯಹರೀಶ್ ಕಂಜಿಪಿಲಿ, ವ್ಯವಸ್ಥಾಪನಾ ಸಮಿತಿ

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ‌ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಧ್ವಜಾರೋಹಣ Read More »

ಬಾಲಕಿಯ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ!

ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿಕೊಲೆಗೈದಿದ್ದ ಆರೋಪಿಯನ್ನು ಪೊಲೀಸರ ಗುಂಡೇಟಿಗೆ ಬಲಿಯಾದ ಘಟನೆ ವರದಿಯಾಗಿದೆ.ಪೊಲೀಸರು ಹೆಚ್ಚಿನ ವಿಚಾರಣೆಗೆ ಅರೋಪಿಯನ್ನು ಕರೆದೊಯ್ದಾಗ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಗುಂಡು ಹೊಡೆದ ಪರಿಣಾಮ ಮೃತಪಟ್ಟ ಘಟನೆ ಹುಬ್ಬಳಿ ನಗರದ ಹೊರ ವಲಯದಲ್ಲಿ ನಡೆದಿದೆ.ಬಿಹಾರದ ಪಾಟ್ನಾದ ರಿತೇಶಕುಮಾರ (35) ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಆರೋಪಿ ವಶಕ್ಕೆ ಪಡೆದು ಆತನು ವಾಸಿಸುತ್ತಿದ್ದ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ಮಾಡುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಮಹಿಳಾ

ಬಾಲಕಿಯ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ! Read More »

ಸುಳ್ಯ : ಸಿ.ಎ ಬ್ಯಾಂಕ್ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮ

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ಸಿ.ಎ.ಬ್ಯಾಂಕ್ ಕಾಂಪ್ಲೆಕ್ಸ್ ಲೋಕಾರ್ಪಣೆ ಸಮಾರಂಭ ಅದ್ದೂರಿಯಾರಿ ಎ.12ರಂದು ನಡೆಯಿತು.ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್‌.ರಾಜೇಂದ್ರ ಕುಮಾರ್ ಶತಮಾನೋತ್ತರ ದಶಮಾನೋತ್ಸವ ಹಾಗೂ ನೂತನ ಸಿ.ಎ.ಬ್ಯಾಂಕ್ ಕಾಂಪ್ಲೆಕ್ಸ್ ಉದ್ಘಾಟಿಸಿದರು.ಸಿ.ಎ.ಬ್ಯಾಂಕ್‌ ಅಧ್ಯಕ್ಷ ವಿಕ್ರಂ ಅಡ್ಡಂಗಾಯರ ಅಧ್ಯಕ್ಷತೆ ವಹಿಸಿದ್ದರು.ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ

ಸುಳ್ಯ : ಸಿ.ಎ ಬ್ಯಾಂಕ್ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮ Read More »

ಏ.16ಕ್ಕೆ ದೀನ್ ದಯಾಳ್ ಸಹಕಾರ ಸಂಘ ನಿಯಮಿತ ಸುಳ್ಯ ಇದರ ವತಿಯಿಂದ ಪಾಲು ಬಂಡವಾಳ ಪ್ರಮಾಣ ಪತ್ರ ವಿತರಣೆ

ಸುಳ್ಯದ ರಥಬೀದಿಯ ಟಿ.ಎ.ಪಿ.ಸಿ.ಎಂ.ಎಸ್. ಕಟ್ಟಡದ 2ನೇ ಮಹಡಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೀನ ದಯಾಳ್ ಸಹಕಾರ ಸಂಘ ನಿಯಮಿತ ಸುಳ್ಯ ಇದರ ವತಿಯಿಂದ ಪಾಲು ಬಂಡವಾಳ ಪ್ರಮಾಣ ಪತ್ರ ವಿತರಣೆ ಮತ್ತು ಭಾರತ್ ಒನ್ ಜನ ಸಂಪರ್ಕ ಕೇಂದ್ರದ ಉದ್ಘಾಟನೆ ಕಾರ್ಯಕ್ರಮವು ಎ.16 ರಂದು ನಡೆಯಲಿದೆ.ದಿನ ದಯಾಳ್ ಸಹಕಾರ ಸಂಘ ನಿಯಮಿತ ಸುಳ್ಯ 2024 ಡಿ.7 ರಂದು ಉದ್ಘಾಟನೆಗೊಂಡಿದ್ದು, ಇದೀಗ ಸಹಕಾರ ಸಂಘದ ಅಡಿಯಲ್ಲಿ ಕೇಂದ್ರ ಸರಕಾರದ ಭಾರತ್ ಒನ್ ಜನ ಸಂಪರ್ಕ ಕೇಂದ್ರ ಮಂಜೂರಾತಿಗೊಂಡಿರುತ್ತದೆ. ಸಹಕಾರ ಸಂಘದ

ಏ.16ಕ್ಕೆ ದೀನ್ ದಯಾಳ್ ಸಹಕಾರ ಸಂಘ ನಿಯಮಿತ ಸುಳ್ಯ ಇದರ ವತಿಯಿಂದ ಪಾಲು ಬಂಡವಾಳ ಪ್ರಮಾಣ ಪತ್ರ ವಿತರಣೆ Read More »

ತೊಡಿಕಾನ : ಮಲ್ಲಿಕಾರ್ಜುನ ದೇವರ ಜಾತ್ರೋತ್ಸವಕ್ಕೆ ಶ್ರದ್ದಾ ಭಕ್ತಿಯಿಂದ ನಡೆದ ಹಸಿರುವಾಣಿ ಮೆರವಣಿಗೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಇಂದಿನಿಂದ ಆರಂಭಗೊಳ್ಳಲಿದ್ದು ಹಸಿರುವಾಣಿ ಮೆರವಣಿಗೆ ನಡೆಯಿತು.ಸಿಂಗಾರಿ ಮೇಳ, ವಿವಿಧ ಕುಣಿತ ಭಜನಾ ತಂಡಗಳಿಂದ ಕುಣಿತ ಭಜನೆ ಹಸಿರುವಾಣಿ ಮೆರವಣಿಗೆಗೆ ವಿಶೇಷ ಆಕರ್ಷಣೆಯಾಗಿತ್ತು.ಹಸಿವಾಣಿ ಮೆರವಣಿಗೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಸದಸ್ಯರು ಮಾಜಿ ಅಧ್ಯಕ್ಷರು ಸದಸ್ಯರು,ಜಾತ್ರೋತ್ಸವ ಸಮಿತಿ ಅಧ್ಯಕ್ಷರು ವಿವಿಧ ಸಮಿತಿಯ ಸಂಚಾಲಕರು,ಉಪ ಸಂಚಾಲಕರು,ಸದಸ್ಯರು ಸುಳ್ಯ ಸೀಮೆಯ ಭಕ್ತರು ಉಪಸ್ಥಿತರಿದ್ದರು.

ತೊಡಿಕಾನ : ಮಲ್ಲಿಕಾರ್ಜುನ ದೇವರ ಜಾತ್ರೋತ್ಸವಕ್ಕೆ ಶ್ರದ್ದಾ ಭಕ್ತಿಯಿಂದ ನಡೆದ ಹಸಿರುವಾಣಿ ಮೆರವಣಿಗೆ Read More »

ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.ಏ.12 ರಂದು ಸುಮಾರು ರಾತ್ರಿ 12:15 ಕ್ಕೆ ಗಂಟೆಗೆ ಬೆಳ್ತಂಗಡಿ ತಾಲೂಕು ಕುತ್ತೂರು ಗ್ರಾಮದ ಪುರುಷ ಗುಡ್ಡೆ ಎಂಬಲ್ಲಿ ಕೊಕ್ರಾಡಿ ನಾರಾವಿ ಸಾರ್ವಜನಿಕ ಡಾಮರು ರಸ್ತೆಯಲ್ಲಿ ಕೆ ಎ 19 ಇಪಿ 9677 ನೇ ಮೋಟಾರು ಸೈಕಲ್ ನ್ನು ಅದರ ಸವಾರ ಪ್ರಶಾಂತ ರವರು ತಿರುವು ರಸ್ತೆಯಲ್ಲಿ

ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು Read More »

error: Content is protected !!
Scroll to Top