ಬಾಡಿಗೆ ಮನೆಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮ ಹತ್ಯೆ

ಸುಳ್ಯದ ಎ.ಪಿ.ಎಂ.ಸಿ. ಸಮೀಪದ ಬಾಡಿಗೆ ಮನೆಯೊಂದಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಮಡಪ್ಪಾಡಿ ಗ್ರಾಮದ ಕಜೆ ಪರಿಸರದ ವರದರಾಜ ಎಂಬ 45 ವರ್ಷ ಪ್ರಾಯದ ಈ ವ್ಯಕ್ತಿ ಈ ಕಟ್ಟಡದಲ್ಲಿ ಬಾಡಿಗೆ ರೂಮಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top