ಆರತಕ್ಷತೆ ಊಟ ಸೇವಿಸಿದ ಮಹಿಳೆ ಸಾವು,ಹಲವರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ಮೇ.12 ರಂದು ನಡೆದ ಆರತಕ್ಷತೆ ಊಟ ಮಾಡಿದ ಬಹುತೇಕ ಮಂದಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು 60 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ.16 ರಂದು ಮೃತಪಟ್ಟಿದ್ದಾರೆ.
ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ 5 ಮಂದಿಯ ಪೈಕಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದುವೆ ಸಮಾರಂಭಕ್ಕೆ ಆಗಮಿಸಿ ಊಟ ಮಾಡಿದ ವ್ಯಕ್ತಿಗಳಲ್ಲಿ ಹಲವರಿಗೆ ವಾಂತಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಅವರೆಲ್ಲರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎನ್ನಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಬಂದಾರಿನ ಸುಮಾರು 40 ಹೆಚ್ಚು ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ಅರತಕ್ಷತೆಯ ಸಸ್ಯಾಹಾರಿ ಮತ್ತು ಮಾಂಸಾಹಾರಿ ಭೋಜನ ಸೇವಿಸಿದ ಮಂದಿ ಅಸ್ವಸ್ಥರಾಗುತ್ತಿದ್ದು ಘಟನೆಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top