ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿಗೆ ದೇಶದ ಪ್ರಧಾನಿಯಾಗಬೇಕೆಂದು ಜಯನಗರ ಬೂತ್ ಸಮಿತಿಯವರು ಹರಕೆ ಹೇಳಿಕೊಂಡ ಪ್ರಕಾರ ಇಂದು ಕೊರಗಜ್ಜ ದೈವದ ನೇಮೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ,
ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವ ಎಸ್.ಅಂಗಾರ ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿದ್ದು ಪ್ರಸಾದ ಸ್ವೀಕರಿಸಿದರು.
ದೈವಸ್ಥಾನದ ಪ್ರಮುಖರಾದ ಕೇಶವ ಮಾಸ್ತರ್ ಹೊಸಗದ್ದೆ, ಜಿ.ಜಗನ್ನಾಥ ಜಯನಗರ, ನಗರ ಬಿಜೆಪಿ ಅಧ್ಯಕ್ಷ ಎ.ಟಿ. ಕುಸುಮಾಧರ, ಬೂತ್ ಸಮಿತಿಯವರು ಉಪಸ್ಥಿತರಿದ್ದರು.
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ,ಕೊರಗಜ್ಜ ದೈವದ ಹರಕೆ ಕೋಲ
