ಶಾಮಿಯಾನದ ಲಾರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಮೇ.18ರಂದು ರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ಬೈಪಾಸ್ ರಸ್ತೆ ಉರ್ಲಾಂಡಿಯಲ್ಲಿ ನಡೆದಿದೆ.
ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ ಸುದೀಪ್ ಚೊಕ್ಕಾಡಿ(38ವ.)ಮೃತಪಟ್ಟವರು.ನೇರಳಕಟ್ಟೆಯಲ್ಲಿರುವ ತಂಗಿ ಮನೆಯಲ್ಲಿ ನಡೆಯಲಿದ್ದ ಅಗೇಲು ಸೇವೆ ಕಾರ್ಯಕ್ರಮಕ್ಕೆ ಹೋಗಲೆಂದು ಅವರು ದೇವಸ್ಯ ತನ್ನ ಮನೆಯಿಂದ ಹೊರಟು ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.ಮುರದಲ್ಲಿ ಖಾಸಗಿ ಆಯುರ್ವೇದಿಕ್ ಉತ್ಪನ್ನಗಳ ಮಾರ್ಕೆಟಿಂಗ್ ಪ್ರತಿನಿsಯಾಗಿ ಕೆಲಸ ನಿರ್ವಹಿಸುತ್ತಿದ್ದ ಸುದೀಪ್ ಅವರು ತಾಯಿ ಮತ್ತು ವಿಶೇಷಚೇತನ ಸಹೋದರನೊಂದಿಗೆ ದೇವಸ್ಯದಲ್ಲಿ ವಾಸ್ತವ್ಯ ಹೊಂದಿದ್ದರು.
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು



































