ಅರಂತೋಡು, ಮೇ .21 : ಆರಂತೋಡು ಗ್ರಾಮ ಪಂಚಾಯತ್ ನ ಎನ್.ಆರ್. ಎಲ್. ಎಂ. ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಕುl ಭಾಗಿರಥಿ ಮುರುಳ್ಯ ರವರು ನೆರವೇಸಿದರು.
ಅವರು ಮಾತನಾಡಿ ಆರಂತೋಡು ಗ್ರಾಮ ಪಂಚಾಯತ್ ನ ಸಭಾಂಗಣಕ್ಕೆ ಅವಶ್ಯಕತೆ ಇರುವ ಪಾಕ ಶಾಲೆ ನಿರ್ಮಾಣಕ್ಕೆ ರೂ 5ಲಕ್ಷ ಅನುದಾನದ ಭರವಸೆ ಯೊಂದಿಗೆ ಆರಂತೋಡು ಗ್ರಾಮಕ್ಕೆ ಬಿಡುಗಡೆಯಾದ ಅನುದಾನಗಳ ಮಾಹಿತಿ ನೀಡಿದರು. ಅರಮನೆಗಯಾದ ಬಳಿ ಬಲ್ನಾಡ್ ಹೊಳೆಗೆ ಸೇತುವೆ ನಿರ್ಮಾಣಕ್ಕೆ 1.75ಕೋಟಿ ಅನುದಾನ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಅಭಿವೃದ್ಧಿ ಹೊಂದಿದ ರೆಂಜಾಳ- ಬಿಳಿಯಾರು ರಸ್ತೆಯ ರೆಂಜಾಳ ದಿಂದ ಪಿಂಗಾರತೋಟದ ವರೆಗೆ ಮರು ಡಾಂಬರಲೀಕರಣಕ್ಕೆ ಅನುದಾನ ಮತ್ತು ದೇರಾಜೆ -ಕೆರೆಮೂಲೆ ರಸ್ತೆ ಕಾಂಗ್ರೆಟ್ೀಕರಣಕ್ಕೆ ರೂ 5ಲಕ್ಷ ಅನುದಾನ ಬಿಡುಗಡೆಯಾಗಿರುವುದಾಗಿ ತಿಳಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರು ಪ್ರಸ್ತಾವಿಕಾ ಮಾತಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆರಂತೋಡು ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ ಕುತ್ತಮೊಟ್ಟೆರವರು ಮಾತಾಡಿ ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಆರಂತೋಡು -ತೊಡಿಕಾನ ಅವಳಿ ಗ್ರಾಮದ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಗೊಳಿಸಿದಕ್ಕೆ ಶಾಸಕರೀಗೆ ಕೃತಜ್ಞತೆ ಸಲ್ಲಿಸಿದರು. ವೇದಿಕೆ ಯಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಭವಾನಿ ಚಿಟ್ಟ ನೂರು, ಆರಂತೋಡು ಸಂಜೀವಿನಿ ಒಕ್ಕೂಟದ ಅಧ್ಯಕ್ಷ ರಾದ ಪ್ರಮೀಳಾ ಉಳುವಾರು ಉಪಸ್ಥಿತರಿದ್ದರು. ಕಾರ್ಯಕ್ರಮ ದಲ್ಲಿ. ಎನ್. ಆರ್. ಎಲ್. ಎಂ. ತಾಲೂಕು ಅಧಿಕಾರಿಗಳು,ಆರಂತೋಡು ಪಂಚಾಯತ್ ಆಡಳಿತ ಸಮಿತಿ ಸದಸ್ಯರು, ಸಹಕಾರಿ ಸಂಘ ದ ನಿರ್ದೇಶಕರುಗಳು, ಗ್ರಾಮದ ಸಂಘ, ಸಂಸ್ಥೆ ಯ ಪದಾಧಿಕಾರಿಗಳು ಹಾಗೂ ಊರಿನ ನಾಗರೀಕರು ಭಾಗವಹಿಸಿದ್ದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ. ಆರ್. ರವರು ಭಯೋತ್ಪಾದನಾ ವಿರೋಧಿ ದಿನಾಚರಣೆಯ ಪ್ರಮಾಣವಚನ ಬೋಧಿಸಿ ವಂದಿಸಿದರು.ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಮತ್ತು ಸ್ವಚ್ಛತಾ ಘಟಕದ ಸಿಬ್ಬಂದಿಗಳು ಸಹಕರಿಸಿದರು..
ಆರಂತೋಡು : ಗ್ರಾಮ ಪಂಚಾಯತ್ ನ ಎನ್. ಆರ್. ಎಲ್. ಎಂ ನೂತನ ಕಟ್ಟಡಕ್ಕೆ ಸುಳ್ಯ ಶಾಸಕರಿಂದ ಗುದ್ದಲಿ ಪೂಜೆ
