ಬಂಟ್ವಾಳ : ದುಷ್ಕರ್ಮಿಗಳ ತಂಡವೊಂದು ಮಂಗಳವಾರ ತಲವಾರು ದಾಳಿ ನಡೆಸಿ ತಲವಾರು ದಾಳಿಗೊಳಗಾದ ವ್ಯಕ್ತಿಗಳಲ್ಲಿ ಒಬ್ಬ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿರುವ ಘಟನೆ ಅಡ್ಡರು ಕೊಲ್ಕಮಜಲು ಎಂಬಲ್ಲಿ ನಡೆದಿದ್ದು ಈ ಘಟನೆಗೆ ಸಂಬಂಧಿಸಿ 15 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಅಬ್ದುಲ್ ರಹಿಮಾನ್ ಮೃತಪಟ್ಟ ಯುವಕನಾಗಿದ್ದು, ಕಲಂದರ್ ಶಾಫಿ ಎಂಬ ಯುವಕ ಗಾಯಗೊಂಡಿದ್ದಾನೆ. ಅಬ್ದುಲ್ ರಹಿಮಾನ್ ಅವರು ಇಮ್ಮಿಯಾಝ್ ಅವರೊಂದಿಗೆ ತನ್ನ ಪಿಕ್ ಅಪ್ ವಾಹನದಲ್ಲಿ ಅದ್ದೂರಿನಿಂದ ಕಲ್ಪನೆ ಸಮೀಪ ಕಾಗುಡ್ಡೆ ಎಂಬಲ್ಲಿ ಮನೆಯೊಂದರ ಬಳಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ರಹಿಮಾನ್ ಅವರ ತಲೆಗೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ವೇಳೆ ರಹಿಮಾನ್ ಜೊತೆಗಿದ್ದ ಕಲಂದರ್ ಶಾಫಿ ಮೇಲೆಯೂ ತಲವಾರಿನಿಂದ ದಾಳಿ ನಡೆಸಲಾಗಿದು, ಅವರಿಗೂ ಗಂಭೀರ ಗಾಯಗಳಾಗಿವೆ.
ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ಸ್ಥಳೀಯ ಇಬ್ಬರು ಸೇರಿದಂತೆ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿಗೆ ಪರಿಚಯಸ್ಥರೇ ಆಗಿದ್ದರು ಎಂದು ತಿಳಿದು ಬಂದಿದೆ.
ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಅನ್ ಲೋಡ್ ಮಾಡುವ 15 ಮಂದಿ ಅಬ್ದುಲ್ ರಹಿಮಾನ್ ಅವರನ್ನು ಪಿಕಪ್ ವಾಹನದಿಂದ ಎಳೆದು ಹಾಕಿ ತಲವಾರು, ಚೂರಿ, ರಾಡ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದಾಗ ತನ್ನ ಮೇಲೆಯೂ ಹಲ್ಲೆ
ನಡೆಸಿದ್ದಾರೆ ಎಂದು ಘಟನೆಯಲ್ಲಿ ಗಾಯಗೊಂಡಿರುವ ಕಲಂದರ್ ಶಾಫಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಂಟ್ವಾಳ : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ, 15 ಮಂದಿ ವಿರುದ್ಧ ಪ್ರಕರಣ ದಾಖಲು
