ಬಂಟ್ವಾಳ ತಾಲೂಕಿನ ಕುರಿಯಾಳದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಹ*ತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣದಕ್ಕೆ ಸಂಬಂಧಿಸಿ ಪೊಲೀಸರು ಗುರುವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ ಪೂಜಾರಿ(21),ಬಂಟ್ವಾಳದ ಅಮ್ಮುಂಜೆ ಗ್ರಾಮದ ಪ್ರಥ್ವಿರಾಜ್ ಜೋಗಿ (21) ಮತ್ತು ಅಮ್ಮುಂಜೆ ಗ್ರಾಮದ ಚಿಂತನ್ (19) ಬಂಧಿತರು ಎಂದು ತಿಳಿದು ಬಂದಿದೆ.
ಮೂವರನ್ನು ಬಂಟ್ವಾಳದ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಬಂಧಿಸಿರುವುದಾಗಿ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಕರಣದ ತನಿಖೆಗಾಗಿ 5 ಪೊಲೀಸರ ತಂಡಗಳನ್ನು ರಚಿಸಲಾಗಿದ್ದು ತನಿಖೆ ಮುಂದುವರಿದಿದೆ.
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
