ಕೆ.ಪಿ‌.ಸಿ.ಸಿ ವಕ್ತಾರ ಸ್ಥಾನಕ್ಕೆ ಸವಾದ್ ಗೂನಡ್ಕ ರಾಜೀನಾಮೆ

ಬಂಟ್ವಾಳದ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ ಹಾಗೂ ದ.ಕ.ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವಲ್ಲಿ ಜಿಲ್ಲೆಯ ಪೊಲೀಸ್‌ ಇಲಾಖೆಯ ನಿರಂತರ ವೈಫಲ್ಯವನ್ನು ಖಂಡಿಸಿ ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರ ಸಭೆಯಲ್ಲಿ ಕೆ.ಪಿ.ಸಿ.ಸಿ.ವಕ್ತಾರ ಸ್ಥಾನಕ್ಕೆ ಶೌವಾದ್ ಗೂನಡ್ಕರವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರವು ದ.ಕ.ಜಿಲ್ಲೆಯ ಶಾಂತಿ, ಸುವ್ಯವಸ್ಥೆಗೆ ವಿಶೇಷ ಆದ್ಯತೆಯನ್ನು ನೀಡಿ ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ಹತ್ಯೆಯಾದ ಅಮಾಯಕ ವ್ಯಕ್ತಿ ಅಬ್ದುಲ್ ರಹ್ಮಾನ್ ಕುಟುಂಬಸ್ಥರಿಗೆ ಗರಿಷ್ಠ ಪ್ರಮಾಣದ ಪರಿಹಾರ ನೀಡುವ ವರೆಗೂ ಹಾಗೂ ಈ ಹಿಂದಿನ ಕೋಮು ಹತ್ಯೆ ಪ್ರಕರಣಗಳಲ್ಲಿ ಭಾಗಿಯಾದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ವರೆಗೆ ಕಾಂಗ್ರೆಸ್ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲವೆಂದು ಶೌವಾದ್ ಗೂನಡ್ಕರವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದು ಇಂದು ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರ ಸಭೆಯ ಒಕ್ಕೊರಲ ತೀರ್ಮಾನವಾಗಿದೆ ಎಂದವರು ಹೇಳಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top