May 2025

ಕಾರಿಗೆ ಬಸ್ಸು ಡಿಕ್ಕಿ ಹೊಡೆದು ಮೂವರು ಗಂಭೀರ

ಪುತ್ತೂರು; ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಹಾಗು ಮೊಮ್ಮಗಳು ಗಂಭೀರವಾಗಿ ಗಾಯಗೊಂಡವರು. ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಕಾರ್ಯಕ್ರಮವಿತ್ತು. ಇದರಲ್ಲಿ ಭಾಗವಹಿಸಲು ಅವರ ಮಗಳು ಅಪೂರ್ವ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಬಸ್ಸಿನಲ್ಲಿ ಬಂದಿದ್ದರು. ಈಶ್ವರ್ ಭಟ್ ಅವರು ಪುತ್ತೂರು ಪೇಟೆಯಿಂದ ಇವರನ್ನು ತಮ್ಮ ವ್ಯಾಗನರ್‌ ಕಾರಿನಲ್ಲಿ ಮನೆಗೆ […]

ಕಾರಿಗೆ ಬಸ್ಸು ಡಿಕ್ಕಿ ಹೊಡೆದು ಮೂವರು ಗಂಭೀರ Read More »

ದ.ಕ‌ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಬಂಟ್ವಾಳ ತಾಲೂಕಿನಲ್ಲಿ ರಹೀಂ ಎಂಬವರ ಬರ್ಬರ ಹತ್ಯೆಯಾಗಿದ್ದು ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಐದು ಪ್ರಮುಖ ತಾಲೂಕುಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಾಜ್ಞೆ ವಿಧಿಸಲಾಗಿದೆ.

ದ.ಕ‌ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ Read More »

ಪಿಕಪ್ ವಾಹನದಲ್ಲಿ ಸಂಚಾರಿಸುತ್ತಿದ್ದವರ ಮೇಲೆ ತಂಡ ಮಾರಕಾಸ್ತ್ರಗಳಿಂದ ಹಲ್ಲೆ , ಓರ್ವ ಸಾವು,ಮತ್ತೋರ್ವ ಗಂಭೀರ

ತಂಡವೊಂದು ಪಿಕಪ್ ವಾಹನದಲ್ಲಿಸಂಚರಿಸುತ್ತಿದ್ದವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮೇ.27ರಂದು ನಡೆದಿದ್ದು, ಘಟನೆಯಿಂದಾಗಿ ಪಿಕಪ್ ವಾಹನವನ್ನು ಚಲಾಯಿಸುತ್ತಿದ್ದಾತ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ರಹೀಂ ಕೊಲೆಯಾದ ವ್ಯಕ್ತಿ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡಿ ಹಿಂದಿರುಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದ್ದಾರೆ. ಘಟನೆಯಿಂದಾಗಿ ರಹೀಂ ಮೃತಪಟ್ಟಿದ್ದಾರೆ. ಅವರ

ಪಿಕಪ್ ವಾಹನದಲ್ಲಿ ಸಂಚಾರಿಸುತ್ತಿದ್ದವರ ಮೇಲೆ ತಂಡ ಮಾರಕಾಸ್ತ್ರಗಳಿಂದ ಹಲ್ಲೆ , ಓರ್ವ ಸಾವು,ಮತ್ತೋರ್ವ ಗಂಭೀರ Read More »

ಮದುವೆಗಳು ಮ(ಕ)ನಸುಗಳನ್ನು ಮುರಿಯದಿರಲಿ..

ಕೆಲವೊಂದು ಘಟನೆಗಳು ಅದೆಷ್ಟೇ ದೂರದೂರಿನಲ್ಲಿ ನಡೆದಿದ್ದರೂ ಮನಸ್ಸಿಗೆ ಘಾಸಿಯುಂಟು ಮಾಡುತ್ತದೆ. ಎಳೆ ವಯಸ್ಸಿನಲ್ಲಿ ಹೃದಯಾಘಾತ, ಎಳೆ ವಯಸ್ಸಿಗೇ ಬರುವ ಸಾವುಗಳು..ಇವುಗಳೊಂದಿಗೆ ಬದುಕಿದ್ದಕ್ಕೂ ಕೊಲ್ಲುತ್ತಲೇ ಬದುಕಿಸುವ ಕೆಲವೊಂದು ಕಹಿ ಘಟನೆಗಳು.ನಾಲ್ಕೈದು ದಿನಗಳ ಹಿಂದೆ ಹಾಸನದಲ್ಲಿ ಮದುವೆ ಮಂಟಪದಲ್ಲಿ ವರ ತಾಳಿ ಕಟ್ಟುವ ವೇಳೆಗೆ ಮದುವೆ ಬೇಡವೆಂದ ವಧುವಿನ ಬಗೆಗಿನ ವೀಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ವಧುವಿಗೆ ಬೇರೆ ಹುಡುಗನೊಂದಿಗೆ ಇದ್ದ ಪ್ರೀತಿ ಇದಕ್ಕೆ ಕಾರಣವಾಗಿತ್ತು. ಆದರೆ, ಇದನ್ನು ಯಾರೊಂದಿಗೂ ಹೇಳಿಕೊಳ್ಳದೆ ಬಚ್ಚಿಟ್ಟುಕೊಂಡು ಮದುವೆಯವರೆಗೆ ತಂದು ನಿಲ್ಲಿಸಿದ್ದ ವಧು ಸರಿಯಾಗಿ

ಮದುವೆಗಳು ಮ(ಕ)ನಸುಗಳನ್ನು ಮುರಿಯದಿರಲಿ.. Read More »

ಮಹಿಳೆಯ ಹತ್ಯೆ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳು!

ಒಂಟಿಯಾಗಿದ್ದ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆಯಲ್ಲಿ ನಡೆದಿದೆ.ಲತಾ(40) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮಹಿಳೆಯ ಪತಿ ಹೋಲ್ ಸೇಲ್ ಬಟ್ಟೆ ವ್ಯಾಪಾರಿಯಾಗಿದ್ದು. ಲತಾ ಅವರ ಮಗಳು ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.ಲತಾ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಂದರ್ಭದಲ್ಲಿ ನುಗ್ಗಿದ ದರೋಡೆಕೋರರು ಲತಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಹಂತಕರು ಪರಾರಿಯಾಗಿದ್ದಾರೆ.

ಮಹಿಳೆಯ ಹತ್ಯೆ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳು! Read More »

ಬೈಕ್ ಗೆ ಕೆ.ಆರ್.ಟಿ.ಸಿ‌ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಕಡಬದ ಸಮೀಪದ ಹಳೆಸ್ಟೇಷನ್‌ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಂದು ತಿಳಿದು ಬಂದಿದೆ‌ಯುವಕ ಮರ್ಧಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ವೃತ್ತಿ ಮಾಡುತ್ತಿದ್ದು.ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆಸ್ಟೇಷನ್ ಬಳಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಒಮ್ಮಿ ಕಾರೊಂದನ್ನು

ಬೈಕ್ ಗೆ ಕೆ.ಆರ್.ಟಿ.ಸಿ‌ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »

ಬೈಕ್ ಸವಾರನ ಮೇಲೆ‌ ಕಾಡಾನೆ ದಾಳಿ ಮಾಡಿ ಬೈಕ್ ಸವಾರ ಗಂಭೀರ

ಬೈಕ್ ಸವಾರನೋರ್ವನ‌ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಬಳಿ ನಡೆದಿದೆ.ಕಾಫಿ ಎಸ್ಟೇಟ್ ನಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಸುಬ್ರಮಣ್ಯ ಎಂಬವರು ಆನೆ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಕಾಡಾನೆ ದಾಳಿಯಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಕಾಫಿ ಎಸ್ಟೇಟಿಗೆ ಸುಬ್ರಮಣ್ಯ ತೆರಳುತ್ತಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ಸುಬ್ರಮಣ್ಯ ನೆಲಕ್ಕೆ ಬಿದ್ದಿದ್ದು, ಈ ವೇಳೆ ಸುಬ್ರಮಣ್ಯನ ಹೊಟ್ಟೆಗೆ ಕಾಡಾನೆ ಬಲವಾಗಿ ತಿವಿದಿದೆ.

ಬೈಕ್ ಸವಾರನ ಮೇಲೆ‌ ಕಾಡಾನೆ ದಾಳಿ ಮಾಡಿ ಬೈಕ್ ಸವಾರ ಗಂಭೀರ Read More »

ಭಾರೀ ಮಳೆ ಹಿನ್ನಲೆ,ದ.ಕ ಜಿಲ್ಲಾ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ

ದ.ಕ‌ ಜಿಲ್ಲೆಯಲ್ಲಿ ಭಾರೀ ಸುರಿಯುತ್ತಿದ್ದು ದಿನಾಂಕ: 28.05.2025 ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 27.05.2025 ಮತ್ತು ದಿನಾಂಕ: 28.05.2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.ನೀರು ಇರುವ ತಗ್ಗು ಪ್ರದೇಶ, ಕೆರೆ,

ಭಾರೀ ಮಳೆ ಹಿನ್ನಲೆ,ದ.ಕ ಜಿಲ್ಲಾ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ Read More »

ಸುಳ್ಯ ಕೆ.ಆರ್.ಟಿ.ಸಿ‌ ಬಸ್ಸ್ ನಿಲ್ದಾಣದಲ್ಲಿ ಏಕಾಏಕಿ ಹಿಂದಕ್ಕೆ ಚಲಿಸಿದ‌ ಪ್ರಯಾಣಿಕರಿದ್ದ ಬಸ್ಸ್ ,ತಪ್ಪಿದ ಭಾರೀ ಅನಾಹುತ

ಸುಳ್ಯ ಕೆ.ಎಸ್.ಆರ್.ಟಿ.ಸಿ‌ ಬಸ್ಸು ನಿಲ್ದಾಣದಲ್ಲಿ ಮೇ.26ರಂದು ಪುತ್ತೂರು ಸುಳ್ಯ ಸರ್ವಿಸ್ ಬಸ್ಸ್ ಹಿಂದಕ್ಕೆ ಚಲಿಸಿ ಚಾಲಕರೋರ್ವರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ವರದಿಯಾಗಿದೆ.ಮಧ್ಯಾಹ್ನ ನಂತರ 2.5೦ ಗಂಟೆಗೆ ಪುತ್ತೂರು ಸುಳ್ಯ ಸರ್ವಿಸ್ ಬಸ್ಸಿನಲ್ಲಿ‌ ಸುಮಾರು 35ರಿಂದ 40 ಮಂದಿ ಪ್ರಯಾಣಿಕರು‌ ಕುಳಿತುಕೊಂಡಿದ್ದರು.ಈ ಸಂದರ್ಭದಲ್ಲಿ ಬಸ್ಸು ಏಕಾಏಕಿ ಹಿಂದಕ್ಕೆ ಚಲಿಸಿತು.ಬಸ್ಸು ಹಿಂದಕ್ಕೆ ಚಲಿಸುತ್ತಿರುವುದನ್ನು ಕಂಡ ಪ್ರಯಾಣಿಕರು ಬೊಬ್ಬೆ ಹೊಡೆಯ ತೊಡಗಿದರು.ಕೂಡಲೇ ಬೇರೊಬ್ಬ ಕೆ.ಎಸ್.ಆರ್.ಟಿ.ಬಸ್ಸಿನ ಚಾಲಕರು ಓಡಿ ಬಂದು ಕೈಯಿಂದ ಬ್ರೇಕ್ ಒತ್ತಿ ಬಸ್ಸು ಹಿಂದಕ್ಕೆ ಚಲಿಸುವುದನ್ನು

ಸುಳ್ಯ ಕೆ.ಆರ್.ಟಿ.ಸಿ‌ ಬಸ್ಸ್ ನಿಲ್ದಾಣದಲ್ಲಿ ಏಕಾಏಕಿ ಹಿಂದಕ್ಕೆ ಚಲಿಸಿದ‌ ಪ್ರಯಾಣಿಕರಿದ್ದ ಬಸ್ಸ್ ,ತಪ್ಪಿದ ಭಾರೀ ಅನಾಹುತ Read More »

ಆಯಿಷಾ ಹಜ್ಜುಮ್ಮ ನಿಧನ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ತೆಕ್ಕಿಲ್ ಗೆ ಭೇಟಿ -ಸಾಂತ್ವನ:

ಸಂಪಾಜೆ ಪೇರಡ್ಕ ಗೂನಡ್ಕ ಮೊಹಿಯುದ್ದಿನ್ ಜುಮಾ ಮಸೀದಿ ಮಾಜಿ ಅಧ್ಯಕ್ಷರು ಅರಂತೋಡು ಎ ಎಚ್ ವೈ ಎ ಸ್ಥಾಪಕಾಧ್ಯಕ್ಷರಾದ ಟಿ ಎಂ ಬಾವ ಹಾಜಿ ತೆಕ್ಕಿಲ್ ಅವರ ಪತ್ನಿ ಪೊನ್ನಂಬಿಲಾತ್ ಪಾರಪ್ರವನ್ ಇರಿಂಘತ್ ನಾರಾನತ್ ಆಯಿಷಾ ಹಜ್ಜುಮ್ಮ ಅವರ ನಿಧನದ ಹಿನ್ನಲೆಯಲ್ಲಿ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ತೆಕ್ಕಿಲ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಈ ಸಂದರ್ಭದಲ್ಲಿ ಟಿ ಎಂ ಶಾಹಿದ್ ತೆಕ್ಕಿಲ್, ಟಿ ಎಂ ಜಾವೆದ್ ತೆಕ್ಕಿಲ್

ಆಯಿಷಾ ಹಜ್ಜುಮ್ಮ ನಿಧನ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ತೆಕ್ಕಿಲ್ ಗೆ ಭೇಟಿ -ಸಾಂತ್ವನ: Read More »

error: Content is protected !!
Scroll to Top