May 2025

ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಹಾಜರಾತಿಗೆ ಹೊಸ ಆ್ಯಪ್

ಮುಂದಿನ ಶೈಕ್ಷಣಿಕ ವರ್ಷದಿಂದ ಆನ್‌ಲೈನ್ ಹಾಜರಾತಿ ದಾಖಲಿಸಲು ಹೊಸ ಆ್ಯಪ್ ಅನ್ನು ಶಿಕ್ಷಣ ಇಲಾಖೆ ಅಭಿವೃದ್ಧಿಪಡಿಸಿದೆ. ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಮಂತ್ರಿಗಳು ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ. ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸುವಾಗ ಶಿಕ್ಷಣ ಸಚಿವರು ಇದರ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿರುವರು ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ. ಅಕಾಶ್ ಎಸ್. ಹೇಳುತ್ತಾರೆ. ಆ್ಯಪ್ ಆಧಾರಿತ ಶಿಕ್ಷಕರ ಹಾಜರಾತಿ ಸಿಕ್ಕಿಂನಲ್ಲಿ ಇದು ಜಾರಿಯಲ್ಲಿದ್ದು, ಯಶಸ್ವಿಯೂ ಆಗಿದೆ. ಪ್ರಧಾನಿಗಳು ಇದಕ್ಕೆ ಪ್ರಶಸ್ತಿಯೂ ನೀಡಿದ್ದಾರೆ. ಎಲ್ಲ ಶಿಕ್ಷಕರು ಸ್ಮಾರ್ಟ್ […]

ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಹಾಜರಾತಿಗೆ ಹೊಸ ಆ್ಯಪ್ Read More »

ಬಾ‌ರ್ & ರೆಸ್ಟೋರೆಂಟ್‌ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಬಾ‌ರ್ & ರೆಸ್ಟೋರೆಂಟ್‌ವೊಂದರ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುತ್ತೂರಿನ ಪೂರ್ಲಿಪ್ಪಾಡಿ ಎಂಬಲ್ಲಿ ಇಂದು ನಡೆದಿದೆ.ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮೃತ ವ್ಯಕ್ತಿ. ಪದ್ಮನಾಭಅವರು ಪುತ್ತೂರು ಪಡೀಲ್‌ನಲ್ಲಿರುವ ಬಾರ್ & ರೆಸ್ಟೋರೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಪದ್ಮನಾಭ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಾ‌ರ್ & ರೆಸ್ಟೋರೆಂಟ್‌ ಸಿಬ್ಬಂದಿ ಆತ್ಮಹತ್ಯೆಗೆ ಶರಣು Read More »

ಹಿಂದೂ ಎಂಬ ಕಾರಣಕ್ಕೆ ಮತಾಂಧರ ಒತ್ತಾಯಕ್ಕೆ ಮಣಿದು ಸರಕಾರ ಮತ್ತು ಇಲಾಖೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಮ್ಮನ್ನು ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ದುಃಖ ತಂದಿದೆ

ಹುಟ್ಟು ಕಾಂಗ್ರೇಸಿಗರಾದರೂ ಹಿಂದೂ ಎಂಬ ಕಾರಣಕ್ಕೆ ಮತಾಂಧರ ಒತ್ತಾಯಕ್ಕೆ ಮಣಿದು ಸರಕಾರ ಮತ್ತು ಇಲಾಖೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಮ್ಮನ್ನು ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ದುಃಖ ತಂದಿದೆ. ಆಡಳಿತ ವ್ಯವಸ್ಥೆಯ ಈ ನಡೆ ಸಮಸ್ತ ಹಿಂದೂಗಳನ್ನು ಆತ್ಮಾವಲೋಕನ ಮಾಡುವಂತೆ ಮಾಡಿದೆ ಎಂದು ಹತ್ಯೆಗೀಡಾದ ಸುಹಾಸ್ ಶೆಟ್ಟಿಯ ಮಾವ ರಾಜೇಶ್ ಶೆಟ್ಟಿ ಹೇಳಿದರು. ಅವರು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವಠಾರದಲ್ಲಿ ಇಂದು ಆಯೋಜಿಸಲಾಗಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹಿಂದೂ ಎಂಬ ಕಾರಣಕ್ಕೆ ಮತಾಂಧರ ಒತ್ತಾಯಕ್ಕೆ ಮಣಿದು ಸರಕಾರ ಮತ್ತು ಇಲಾಖೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಮ್ಮನ್ನು ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ದುಃಖ ತಂದಿದೆ Read More »

ನರೇಂದ್ರ ಮೋದಿಯವರ ಮನೆ ಮೇಲೆ ಬಾಂಬು ದಾಳಿ ನಡೆಸಬೇಕೆಂದು ಹೇಳಿಕೆ ನೀಡಿದ ಆರೋಪಿಯ ಬಂಧನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮನೆಯಮೇಲೆ ಮೊದಲು ಬಾಂಬ್ ದಾಳಿ ನಡೆಸಬೇಕು ಎಂದು ಹೇಳಿಕೆ ನೀಡಿದ್ದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಬೆಂಗಳೂರಿನಲ್ಲಿ ಬಂಡೇಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಸುಭಾಷ್‌ನಗರ ನಿವಾಸಿ ನವಾಜ್ (26) ಬಂಧಿತ ಆರೋಪಿ.ಬಳಿಕ ಆರೋಪಿಯನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಯಿತು.ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಭಾರತ ಮತ್ತು ಪಾಕ್ ಮಧ್ಯೆ ಯುದ್ಧ ನಡೆಯುತ್ತಿದೆ. ಜನರೆಲ್ಲ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು ಮೋದಿ. ಮೊದಲು ಮೋದಿ ಮನೆಯ ಮೇಲೆ ಬಾಂಬ್ ಹಾಕಬೇಕು; ಆದರೆ

ನರೇಂದ್ರ ಮೋದಿಯವರ ಮನೆ ಮೇಲೆ ಬಾಂಬು ದಾಳಿ ನಡೆಸಬೇಕೆಂದು ಹೇಳಿಕೆ ನೀಡಿದ ಆರೋಪಿಯ ಬಂಧನ Read More »

ಮೇ.18 ರಂದು ಕೇಶವ ಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನಾ ಸಮಾರಂಭ ಮತ್ತು ಕೇಶವಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ

ಮೇ.18 ರಂದು ಕೇಶವ ಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನಾ ಸಮಾರಂಭ ಮತ್ತು ಕೇಶವಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕೇಶವ ಕೃಪಾ ವೇದ ಕಲಾ ಪ್ರತಿಷ್ಠಾನ ಅಧ್ಯಕ್ಷ ವೇದ ಮೂರ್ತಿ ಪುರೋಹಿತ ನಾಗರಾಜ್ ಭಟ್ ತಿಳಿಸಿದ್ದಾರೆ.ಅವರು ಮೇ.13ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.ಶ್ರೀ ಕೇಶವ ಕೃಪಾ ವೇದ-ಯೋಗ – ಕಲಾ ಶಿಬಿರವು ರಜತ ಸಂಭ್ರಮದಲ್ಲಿದ್ದು, ಸಾರ್ಥಕ 25 ವರ್ಷಗಳನ್ನು ಪೂರೈಸಿದೆ ಏ.

ಮೇ.18 ರಂದು ಕೇಶವ ಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನಾ ಸಮಾರಂಭ ಮತ್ತು ಕೇಶವಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ Read More »

ಹಣದ ಸಮಸ್ಯೆ ನಿದ್ರೆ ಮಾತ್ರೆ ಸೇವಿಸಿದ ತಾಯಿ ಮಗ,ತಾಯಿ ಸಾವು ಮಗ ಗಂಭೀರ

ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗುಪ್ಪೆ ಹೊಂದಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದಿದ್ದು, ಮಗನ ಸ್ಥಿತಿ ಗಂಭೀರವಾಗಿದೆ.ಮೃತರು ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ ಪುತ್ನಿ ಕಲ್ಯಾಣಿ(96) ಎಂಬವರಾಗಿದ್ದಾರೆ. ಅವರ ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಅವರು ಗಂಭೀರಾವಸ್ಥೆಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಹಾಕ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.ಕಲ್ಯಾಣಿ ಮತ್ತು ಜಯರಾಂ ಕೆ ಅವರು

ಹಣದ ಸಮಸ್ಯೆ ನಿದ್ರೆ ಮಾತ್ರೆ ಸೇವಿಸಿದ ತಾಯಿ ಮಗ,ತಾಯಿ ಸಾವು ಮಗ ಗಂಭೀರ Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ

ದಕ್ಷಿಣ ಭಾರತದ ಪ್ರಸಿದ್ದ ನಾಗ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ ಯಾಗಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಪಟ್ಟಿ ಅಂತಿಮಗೊಂಡಿದ್ದು ಇಂದು ಮೇ.12ರಂದು ಸೋಮವಾರ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರು ಅಧಿಕಾರ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸದಸ್ಯರು ಸಭೆ ನಡೆಸಿ ಅಧ್ಯಕ್ಷರ ಅಧಿಕೃತ ಆಯ್ಕೆ ನಡೆಸಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಸಂಜೆ ಮಂಗಳೂರಿನಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ Read More »

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ!

ಉಡುಪಿ: ‘ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್‌ ಪೂಜಾರಿ ನಿಧನರಾಗಿದ್ದಾರೆ.ಅಪಾರ ಖ್ಯಾತಿ ಗಳಿಸಿದ್ದ ಉಡುಪಿ ಮೂಲದ ರಾಕೇಶ್ ಪೂಜಾರಿ ಸೋಮವಾರ (ಮೇ 12) ಮುಂಜಾನೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಮೂಲಗಳ ಪ್ರಕಾರ ಅವರು ಉಡುಪಿಯ ಕಾರ್ಕಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ಸ್ನೇಹಿತರ ಜತೆ ಇದ್ದಾಗಲೇ ಅವರಿಗೆ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಕುಸಿದು ಬಿದ್ದು ಅವರು ಮೃತಪಟ್ಟಿದ್ದಾರೆ ಎಂದು

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ! Read More »

ಅರಂತೋಡು : ವಿದ್ಯುತ್ ಶಾಕ್ ಹೊಡೆದು ರಿಕ್ಷಾ ಚಾಲಕ ಸಾವು

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಉಳುವಾರು ಸುಕುಮಾರ ಅವರ ಸಹೋದರ ಪುರುಶೋತ್ತಮ;( 55 ವರ್ಷ) ಉಳುವಾರು ವಿದ್ಯುತ್ ಶಾಕ್ ಹೊಡೆದು ಮ್ರತಪಟ್ಟ ಘಟನೆ ಭಾನುವಾರ ರಾತ್ರಿ ವರದಿಯಾಗಿದೆ.ವಿದ್ಯುತ್ ಟ್ರಾನ್ಸ್ ಪಾರ್ಮರ್ ಬಳಿ‌ ಅವರು ತೆರಳಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ‌ ತಿಳಿದು‌ ಬರಬೇಕಾಗಿದೆ.

ಅರಂತೋಡು : ವಿದ್ಯುತ್ ಶಾಕ್ ಹೊಡೆದು ರಿಕ್ಷಾ ಚಾಲಕ ಸಾವು Read More »

ನಾಳೆ(ಮೇ.9) ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಭಾರತದ ಸೈನಿಕರಿಗೆ ಜಯವಾಗಲು ಉಗ್ರರ ದಮನವಾಗಲು ವಿಶೇಷ ಪೂಜೆ

ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ದಿನಾಂಕ 09.05.2025 ನೇ ಶುಕ್ರವಾರ ಪೂರ್ವಾಹ್ನ 7.30 ಘಂಟೆಗೆ ಕರ್ನಾಟಕ ಸರಕಾರ ದ ಆದೇಶ ದಂತೆ ಉಗ್ರರ ವಿರುದ್ಧ ಹೋರಾಡುತ್ತಿರುವ ನಮ್ಮ ಸೈನಿಕರಿಗೆ ಎಲ್ಲ ರೀತಿಯಲ್ಲಿ ಜಯ ಸಿಗುವಂತಾಗಲಿ ಮತ್ತು ಎಲ್ಲ ಉಗ್ರರ ದಮನವಾಗಲಿ ಎಂದು ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ವಿಶೇಷ ಪ್ರಾರ್ಥನೆ ನಡೆಯಲಿದೆ.. ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಸೀಮೆಯ ಸರ್ವ ಭಕ್ತಾದಿಗಳು ಉಪಸ್ಥಿತರಿರಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯು.ಕೆ.ಕೇಶವ ಮನವಿ ಮಾಡಿಕೊಂಡಿದ್ದಾರೆ.

ನಾಳೆ(ಮೇ.9) ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಭಾರತದ ಸೈನಿಕರಿಗೆ ಜಯವಾಗಲು ಉಗ್ರರ ದಮನವಾಗಲು ವಿಶೇಷ ಪೂಜೆ Read More »

error: Content is protected !!
Scroll to Top