May 2025

ಭಾರತವನ್ನು ಕೆಣಕಿದರೆ, ಸಿಡಿಲಿನಂತಹ ಉತ್ತರ ಕಟ್ಟಿಟ್ಟ ಬುತ್ತಿ – ಸಂಸದ ಕ್ಯಾ. ಚೌಟ

ಮಂಗಳೂರು: ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿಯ ಕುರಿತಂತೆ ಪ್ರತಿಕ್ರಿಯಿಸಿರುವ ಸಂಸದರು, ’ಸಿಂಧೂರ ’ ಎನ್ನುವುದು ರಾಷ್ಟ್ರದ ವೀರತ್ವ, ಧೈರ್ಯ ಮತ್ತು […]

ಭಾರತವನ್ನು ಕೆಣಕಿದರೆ, ಸಿಡಿಲಿನಂತಹ ಉತ್ತರ ಕಟ್ಟಿಟ್ಟ ಬುತ್ತಿ – ಸಂಸದ ಕ್ಯಾ. ಚೌಟ Read More »

ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಉಗ್ರ ಹಫೀಜ್ ಸಯೀದ್ ಮತ್ತು ಮಸೂದ್ ಅಜ‌ರ್ ಸಾವು?

ಪಹಲ್ಲಾಮ್ ಭಯೋತ್ಪಾದಕ ದಾಳಿಗೆಪ್ರತ್ಯುತ್ತರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಉಗ್ರ ಹಫೀಜ್ ಸಯೀದ್ ಮತ್ತು ಮಸೂದ್ ಅಜ‌ರ್ ಕೂಡಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.ಭಾರತದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಲಾಹೋರ್ ನಿಂದ 400 ಕಿಲೋ ಮೀಟರ್ ದೂರದಲ್ಲಿರುವ ಬಹಾವಲ್ಪುರದಲ್ಲಿರುವ ಜೈಶ್ ಎ ಮೊಹಮ್ಮದ್ ನ ಪ್ರಧಾನ ಕಚೇರಿಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.ಸುಮಾರು 18ಕ್ಕೂ ಅಧಿಕ ಎಕರೆ ಜಾಗದಲ್ಲಿರುವ ಜೈಶ್‌ ಇ ಮೊಹಮ್ಮದ್ ಪ್ರಧಾನ ಕಚೇರಿ ಉಗ್ರರ ನೇಮಕಾತಿ, ದೇಣಿಗೆ ಸಂಗ್ರಹ, ಉಗ್ರ ಚಟುವಟಿಕೆಯ

ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಉಗ್ರ ಹಫೀಜ್ ಸಯೀದ್ ಮತ್ತು ಮಸೂದ್ ಅಜ‌ರ್ ಸಾವು? Read More »

ಪಹಲ್ಗಾಮ್‌ ದಾಳಿಗೆ ಪ್ರತ್ಯುತ್ತರ: ಉಗ್ರರ ನೆಲೆ ಮೇಲೆ ಭಾರತೀಯ ಸೇನೆ ದಾಳಿ, ಸುಮಾರು 90 ಅಧಿಕ ಉಗ್ರಾರ ಸಾವು

ಅಪ್ಪಟ ಭಾರತೀಯ ನಾರಿಯರ ಸಿಂಧೂರ ಅಳಿಸಿದ ಪಾಪಿಗಳಿಗೆ ಭಾರತೀಯ ಯೋಧರು ರಕ್ತ ಅಭಿಷೇಕವನ್ನೇ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಉಗ್ರರ ಮೇಲೆ ಭಾರತ ಕೊನೆಗೂ ಪ್ರತೀಕಾರ ತೀರಿಸಿಕೊಂಡಿದೆ. ಬುಧವಾರ ಬೆಳಿಗ್ಗೆ ಸಮಯ ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ದಾಳಿ ನಡೆಸಿದ್ದು, ಸುಮಾರು 90 ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.ಭಾರತ ನಡೆಸಿದ ಈ ದಾಳಿಯಲ್ಲಿ ಲಷ್ಕರ್ ಉಗ್ರ ಹಫೀಜ್ ಸಯಿದ್‌ಗೆ ಸಂಬಂಧಿಸಿದ ಮರ್ಕಜ್ ಸುಭಾನಲ್ಲಾಹ್ ಮಸೀದಿ ಧ್ವಂಸವಾಗಿದೆ. ಸುಮಾರು 18 ಏಕ್ರೆ

ಪಹಲ್ಗಾಮ್‌ ದಾಳಿಗೆ ಪ್ರತ್ಯುತ್ತರ: ಉಗ್ರರ ನೆಲೆ ಮೇಲೆ ಭಾರತೀಯ ಸೇನೆ ದಾಳಿ, ಸುಮಾರು 90 ಅಧಿಕ ಉಗ್ರಾರ ಸಾವು Read More »

ಚೆಂಬು ಶ್ರೀ ಮಾಡ ಉಳ್ಳಾ ಕುಲು ದೈವಸ್ಥಾನದಲ್ಲಿ ಕಾಲಾವಧಿ ಪಗ್ಗು ನೇಮೋತ್ಸವ

ಚೆಂಬು ಶ್ರೀ ಮಾಡ ಉಳ್ಳಾ ಕುಲು ದೈವಸ್ಥಾನದಲ್ಲಿ ಕಾಲಾವಧಿ ಪಗ್ಗು ನೇಮೋತ್ಸವವು ಮೇ 5 ರಂದು ನಡೆಯಿತು.ಬೆಳಿಗ್ಗೆ ದೈವದ ನಡಾವಳಿಗೆ ಎಣ್ಣೆ ಕೊಡುವುದು, ಮಾಡ ದೈವಸ್ಥಾನಕ್ಕೆ ತಂಬಿಲಕ್ಕೆ ಹೋಗುವುದು, ಉಳ್ಳಾ ಕುಲು ಕುದುರೆ ಬಂಡಿ ಉತ್ಸವ, ಪಗ್ಗು ನೇಮೋತ್ಸವ, ಬಳಿಕ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಿತು. ಊರ – ಪರವೂರ ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೈವದ ಅರಶಿನ ಪ್ರಸಾದವನ್ನು ಪಡೆದು ಕೃಪೆಗೆ ಪಾತ್ರರಾದರು.ಈ ಸಂದರ್ಭದಲ್ಲಿ ದೈವಸ್ಥಾನದ ಮೊಕೇಸರ, ಅಧ್ಯಕ್ಷರು ಆಡಳಿತ, ಮಹಿಳಾ

ಚೆಂಬು ಶ್ರೀ ಮಾಡ ಉಳ್ಳಾ ಕುಲು ದೈವಸ್ಥಾನದಲ್ಲಿ ಕಾಲಾವಧಿ ಪಗ್ಗು ನೇಮೋತ್ಸವ Read More »

ತೆಂಗಿನ ಮರ ಹತ್ತಿದ್ದ ವ್ಯಕ್ತಿ ಆಯ ತಪ್ಪಿ ಬಿದ್ದು ಸಾವು

ಕಡಬ ತಾಲೂಕಿನಲ್ಲಿ ತೆಂಗಿನಕಾಯಿ ಕೀಳಲು ತೆಂಗಿನ ಮರಕ್ಕೆ ಹತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.ಮೃತಪಟ್ಟವರನ್ನು ಬಲ್ಯ ಗ್ರಾಮದ ಪಲ್ಲತಡ್ಕ ನಿವಾಸಿ ದಿ|ಐತ್ತಪ್ಪ ಪೂಜಾರಿ ಅವರ ಪುತ್ರ ಉಮೇಶ್ (46.ವ) ಎಂದು ಗುರುತಿಸಲಾಗಿದೆ.ಅವರು ತನ್ನ ಮನೆಯ ತೋಟದಲ್ಲಿ ತೆಂಗಿನ ಮರಕ್ಕೆ ಹತ್ತಿದ್ದರು. ಕೆಳಕ್ಕೆ ಬಿದ್ದು ಗಂಭೀರಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಮೃತರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಕೂಲಿ ಕಾರ್ಮಿಕನಾಗಿದ್ದುಕೊಂಡು ಸಾಮಾಜಿಕ ಕೆಲಸಗಳಲ್ಲಿ ಸಕ್ರೀಯರಾಗಿದ್ದ ಉಮೇಶ್

ತೆಂಗಿನ ಮರ ಹತ್ತಿದ್ದ ವ್ಯಕ್ತಿ ಆಯ ತಪ್ಪಿ ಬಿದ್ದು ಸಾವು Read More »

ವಿಷ ಬೆರೆಸಿದ ಆಹಾರ ನೀಡಿ ಸಾಕು ನಾಯಿ ಕೋಳಿಗಳನ್ನು ಕೊಂದಿರುವ ಸಂಶಯ : ಪೊಲೀಸ್ ದೂರು

ವಿಷ ಬೆರೆಸಿದ ಆಹಾರ ನೀಡಿ ನಮ್ಮ ಮನೆಯ ಸಾಕು ನಾಯಿ ಹಾಗೂ ಕೋಳಿಗಳನ್ನು ಕೊಲ್ಲಲಾಗಿದೆ ಎಂದು ಪೊಲೀಸ್ ದೂರು ನೀಡಿದ ಘಟನೆ ಸುಳ್ಯ ತಾಲೂಕಿನ ಪೇರಡ್ಕದಿಂದ ರಾತ್ರಿ ವರದಿಯಾಗಿದೆ.ಪೇರಡ್ಕದ ವೀರಪ್ಪ ಎಂಬುವವರ ಮನೆಯಲ್ಲಿ ಮೇ. ೪ರಂದು ರಾತ್ರಿ ಕೋಳಿಗಳು ಹಾಗೂ ನಾಯಿ ಸತ್ತಿದ್ದು, ಯಾರೋ ಕಿಡಿಗೇಡಿಗಳು ವಿಷ ಬೆರೆಸಿದ ಆಹಾರ ಹಾಕಿರಬಹುದೆಂದು ಶಂಕಿಸಲಾಗಿದೆ.ಪೇರಡ್ಕದ ವೀರಪ್ಪ ಗೌಡರ ಮನೆಯಲ್ಲಿ ರಾತ್ರಿ ಸುಮಾರು ೧೦.೩೦ ಕ್ಕೆ ಮನೆಯ ಅಂಗಳದಲ್ಲಿ ನಾಯಿ ಬೊಗಳುವ ಶಬ್ದಕೇಳಿ ಮಹಿಳೆ ಹೊರ ಬಂದು ನೋಡಿದಾಗ ಯಾರೋ

ವಿಷ ಬೆರೆಸಿದ ಆಹಾರ ನೀಡಿ ಸಾಕು ನಾಯಿ ಕೋಳಿಗಳನ್ನು ಕೊಂದಿರುವ ಸಂಶಯ : ಪೊಲೀಸ್ ದೂರು Read More »

ಅರಂತೋಡು : ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಅರಂತೋಡು ಗ್ರಾಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ನಡೆಸುತ್ತಾ ಬರುವ ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಮೇ.3 ರಂದು ಪಟೇಲ್ ಕಾಂಪ್ಲೆಕ್ಸ್ ನಲ್ಲಿ ಕ್ಲಬಿನ ಅಧ್ಯಕ್ಷರಾದ ಅಸ್ಲಂ ಪಟೇಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವೇದಿಕೆಯಲ್ಲಿ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ನ ಗೌರವಾಧ್ಯಕ್ಷ ಮುಕ್ತಾರ್ ಪಟೇಲ್ ಮಾತನಾಡಿ ಕ್ಲಬಿನ ಉದ್ದೇಶ ಹಾಗೂ ಸಾಮಾಜಿಕ ಕಾರ್ಯಕ್ರಮದ ಬಗ್ಗೆ ಸಲಹೆ ಸೂಚನೆಯನ್ನು ನೀಡಿದರು. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶಿಕ್ ಕುಕ್ಕುಂಬಳ

ಅರಂತೋಡು : ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ Read More »

ಆಟವಾಡುತ್ತಿದ್ದ ಮಗು ಹೃದಯಾಘಾತದಿಂದ ಸಾವು

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಬತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುವ ಗೋವಿಂದ ಗೌಡರ ಪುತ್ರ ಪ್ರಥಮ್ (16) ಮೃತ ಬಾಲಕ.ಮೇ 4 ಭಾನುವಾರದು ಮಧ್ಯಾಹ್ನದ ವೇಳೆ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಬಾಲಕನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬಾಲಕಮ ಮೃತದೇಹವನ್ನು ಉಜಿರೆ ಖಾಸಗಿ ಆಸ್ಪತ್ರೆಯಿಂದ

ಆಟವಾಡುತ್ತಿದ್ದ ಮಗು ಹೃದಯಾಘಾತದಿಂದ ಸಾವು Read More »

ದಿ l ಯು. ಡಿ. ಶೇಖರ್ 58ನೇ ಜನ್ಮದಿನಾಚರಣೆ ಪ್ರಯುಕ್ತ ವಿಶಿಷ್ಟ ಚೇತನರು ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳ ವಿದ್ಯಾರ್ಥಿಗಳಿಗೆ ಧನ ಸಹಾಯ

ಪಂಚಾಯತ್ ರಾಜ್ ನ ವ್ಯವಸ್ಥೆ ಯ ಬಗ್ಗೆ ಆಳವಾದ ಅನುಭವ ಹೊಂದಿ, ಜನಸ್ನೇಹಿ,ಅಧಿಕಾರಿಯಾಗಿ ಜನರಿಂದ ಮನ್ನಣೆ ಗಳಿಸಿ ಕೆಲ ವರ್ಷಗಳ ಹಿಂದೆ ಅಕಾಲಿಕವಾಗಿ ನಿಧನ ರಾದ ಸುಬ್ರಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಯು. ಡಿ. ಶೇಖರ್ ರವರ 58ನೇ ಜನ್ಮದಿನವನ್ನು ಅವರ ಮನೆಯವರು ಪ್ರತಿ ವರ್ಷ ವೂ ಸಮಾಜಕ್ಕೆ ಮಾದರಿ ಯಾಗಿ ಆಚರಿಸುತ್ತಿದ್ದು ಈ ವರ್ಷ ಯು. ಡಿ. ಶೇಖರ್ ರವರ ಶ್ರೀಮತಿಯವರಾದ ಗೀತಾ ಶೇಖರ್ ರವರು ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ಗ್ರಾಮ ಪಂಚಾಯತ್

ದಿ l ಯು. ಡಿ. ಶೇಖರ್ 58ನೇ ಜನ್ಮದಿನಾಚರಣೆ ಪ್ರಯುಕ್ತ ವಿಶಿಷ್ಟ ಚೇತನರು ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳ ವಿದ್ಯಾರ್ಥಿಗಳಿಗೆ ಧನ ಸಹಾಯ Read More »

ಮೇ.17ಕ್ಕೆ ಕೊರಂಬಡ್ಕ ಕೊರಗಜ್ಜ ದೈವಸ್ಥಾನದಲ್ಲಿ ನರೇಂದ್ರ ಮೋದಿಯವರ ಕೊರಗಜ್ಜ ದೈವದ ಹರಕೆ ಕೋಲ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಬೇಕೆಂದು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಯನಗರ ಬೂತ್ ಸಮಿತಿಯವರು ಕೊರಂಬಡ್ಕ ಕೊರಗಜ್ಜ ಸಾನಿಧ್ಯದಲ್ಲಿ ಹರಕೆ ಹೇಳಿಕೊಂಡಿದ್ದು, ಈ ಹಿನ್ನಲೆಯಲ್ಲಿ ಮೇ.17ರಂದು ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಬಿ.ವೈ.ವಿಜಯೇಂದ್ರರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಮೇ.3ರಂದು ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ನಡೆಯಿತು.

ಮೇ.17ಕ್ಕೆ ಕೊರಂಬಡ್ಕ ಕೊರಗಜ್ಜ ದೈವಸ್ಥಾನದಲ್ಲಿ ನರೇಂದ್ರ ಮೋದಿಯವರ ಕೊರಗಜ್ಜ ದೈವದ ಹರಕೆ ಕೋಲ Read More »

error: Content is protected !!
Scroll to Top