June 2025

ಬಂಟ್ವಾಳ : ಅಬ್ದುಲ್ ರಹಿಮಾನ್ ಹತ್ಯೆಯ ಮತ್ತಿಬ್ಬರು ಆರೋಪಿಗಳ ಬಂಧನ

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಕೊಳತ್ತಮಜಲು‌ ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 3ರ ಮಂಗಳವಾರ ವರದಿಯಾಗಿದೆ.ತೆಂಕಬೆಳ್ಳೂರು ನಿವಾಸಿ ಅಭಿನ್ ರೈ(32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಬಂಧಿತ ಆರೋಪಿಗಳು.ಪೊಲೀಸರು ಈ ಹಿಂದೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳ : ಅಬ್ದುಲ್ ರಹಿಮಾನ್ ಹತ್ಯೆಯ ಮತ್ತಿಬ್ಬರು ಆರೋಪಿಗಳ ಬಂಧನ Read More »

ಅಕ್ಕಯ್ಯ ಬಾಳೆಕಜೆ ನಿಧನ

ಸುಳ್ಯ ತಾಲೂಕು ತೊಡಿಕಾನ‌ ಗ್ರಾಮದ ಬಾಳೆಕಜೆ ದಿ.ಕುಕ್ಕಪ್ಪ ಗೌಡರ ಧರ್ಮಪತ್ನಿ ಅಕ್ಕಯ್ಯ ಬಾಳೆಕಜೆ (86)ಅವರು ಮಂಗಳವಾರ ಸ್ವಗ್ರಹದಲ್ಲಿ ನಿಧನರಾದರು.ಮ್ರತರು ಮಕ್ಕಳಾದ ದೇವಪ್ಪ,ರಾಧಕ್ರಷ್ಣ,ಜಯಲಕ್ಷ್ಮಿ,ಲೋಲಜಾಕ್ಷಿ,ಸೊಸೆಯಂದಿರಾದ ಕಾವೇರಿ,ಆಶಾಲತಾ,ಪೂರ್ಣಿಮಾ ಮತ್ತು ಮೊಮ್ಮಕ್ಕಳನ್ನು ಮರಿ ಮೊಮ್ಮಕ್ಕಳನ್ನು ಕುಟುಂಬಸ್ಥರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಅಂತಿಮ ಸಂಸ್ಕಾರ ಜೂ.4ರಂದು ಮ್ರತರ ಮನೆಯಲ್ಲಿ ನಡೆಯಲಿದೆ.

ಅಕ್ಕಯ್ಯ ಬಾಳೆಕಜೆ ನಿಧನ Read More »

ಪಾಲಡ್ಕದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 272 ಪಾಲಡ್ಕದಲ್ಲಿ ಇದೀಗ ಕಾರುಗಳ ನಡುವೆ ಅಪಘಾತ ಸಂಭವಿಸಿ ಕಾರುಗಳೆರಡು ಜಖಂಗೊಂಡ ಘಟನೆ ವರದಿಯಾಗಿದೆ.ಪರಿಣಾಮವಾಗಿ ಕಾರಿನದ್ದರು‌ ಗಾಯಗೊಂಡಿದ್ದು‌ ಅವರನ್ನು ಚಿಕಿತ್ಸೆಗೆ ಸುಳ್ಯದ ಆಸ್ಪತ್ರೆಗೆ ಕರೆತರಲಾಗಿದೆ.ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಪಾಲಡ್ಕದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ Read More »

ಸಂಘಟನೆಯಲ್ಲಿ ತೊಡಗಿಸಿಕೊಂಡ ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರ ಭೇಟಿಗೆ ಆಕ್ಷೇಪ

ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ವೇಳೆ ಪೋಲೀಸರು ಭೇಟಿ ನೀಡಿರುವುದನ್ನು ಆಕ್ಷೇಪಿಸಿರುವ ಸಂಘಟನೆಯವರು, ಸರ್ಕಲ್ ಇನ್ ಸ್ಪೆಕ್ಟರ್ ಕಚೇರಿಗೆ ಹೋಗಿ ಮನವಿ ಸಲ್ಲಿಸಿದ್ದಾರೆ.ಸುಳ್ಯ ತಾಲೂಕಿನಲ್ಲಿ ಕಳೆದ ಅನೇಕ ವರ್ಷಗಳಿಂದ ವಿವಿಧ ಹಿಂದೂ ಸಂಘಟನೆಗಳು ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದು ಸಮಾಜದಲ್ಲಿ ಸಂಸ್ಕಾರ ಮತ್ತು ಸಾಮರಸ್ಯವನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಾ ಬಂದಿವೆ. ಹಿಂದೂ ಸಂಘಟನೆಗಳ ಕಾರಣದಿಂದಾಗಿಯೇ ಸುಳ್ಯವು ಸಾಮಾಜಿಕವಾಗಿ ಇತರೆ ಕಡೆಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿರುತ್ತದೆ. ಹಿಂದೂ ಸಂಘಟನೆಗಳ ಸಂಸ್ಕಾರದ ಕಾರ್ಯದಿಂದಾಗಿ ಸಮಾಜದಲ್ಲಿ ಅಪರಾಧ ಪ್ರಕರಣಗಳು ಬಹಳಷ್ಟು ಕಡಿಮೆಯಾಗಿದ್ದು

ಸಂಘಟನೆಯಲ್ಲಿ ತೊಡಗಿಸಿಕೊಂಡ ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರ ಭೇಟಿಗೆ ಆಕ್ಷೇಪ Read More »

ಆಸ್ಪತ್ರೆಯಲ್ಲಿ ಬೆಡ್ ಸಿಗದ ಹಿನ್ನಲೆಯಲ್ಲಿ ಆ್ಯಂಬುಲೆನ್ಸ್ ನಲ್ಲೇ ಕಾದ ಅತ್ಯಾಚಾರಕೊಳಗಾದ ಬಾಲಕಿ‌ ಸಾವು

ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ಗಂಟೆಗಟ್ಟಲೆ ಆಂಬ್ಯುಲೆನ್ಸ್​ ನಲ್ಲಿ ಕಾದ ಅತ್ಯಾಚಾರ ಸಂತ್ರಸ್ತ ಬಾಲಕಿ ಆ್ಯಂಬುಲೆನ್ಸ್ ನಲ್ಲೇ ಕೊನೆಯುಸಿರೆಳೆದ ಘಟನೆ ಬಿಹಾರದ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.ರೋಹಿತ್ ಕುಮಾರ್ ಸಾಹ್ನಿ ಎಂಬಾತ ಸಂತ್ರಸ್ತ ಬಾಲಕಿಗೆ ಚಾಕೊಲೇಟ್​ ಕೊಡಿಸುವುದಾಗಿ ಆಮಿಷವೊಡ್ಡಿ ಹೊರಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದ ಇದರಿಂದಾಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಳು. ಬಾಲಕಿ ಮಾತನಾಡುವ ಸ್ಥಿತಿಯಲ್ಲಿ ಇಲ್ಲವಾದರೂ ತನ್ನ ಮೇಲೆ ದೌರ್ಜನ್ಯ ನಡೆಸಿರುವುದನ್ನು ಸನ್ನೆ ಮೂಲಕವೇ ತಿಳಿಸಿದ್ದಳು. ಇದಾದ ಬಳಿಕ ಆರೋಪಿಯನ್ನು

ಆಸ್ಪತ್ರೆಯಲ್ಲಿ ಬೆಡ್ ಸಿಗದ ಹಿನ್ನಲೆಯಲ್ಲಿ ಆ್ಯಂಬುಲೆನ್ಸ್ ನಲ್ಲೇ ಕಾದ ಅತ್ಯಾಚಾರಕೊಳಗಾದ ಬಾಲಕಿ‌ ಸಾವು Read More »

ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದೆ ದೊಡ್ಡ ಹುನ್ನಾರ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್​ಎಸ್​​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಎಫ್​ಐಆರ್ ದಾಖಲಿಸುವ ಮೂಲಕ ಮತ್ತೊಮ್ಮೆ ನಮ್ಮ ಕರಾವಳಿ ಭಾಗದ ಹಿಂದೂ ನಾಯಕರು ಮತ್ತು ಸಂಘಟನೆಗಳನ್ನು ಬೆದರಿಸಲು, ವಿಭಜಿಸಲು ಹಾಗೂ ಕಿರುಕುಳ ನೀಡಲು ಆಡಳಿತ ಯಂತ್ರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಕಳವಳ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ಹಿಂದೂಗಳನ್ನು

ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದೆ ದೊಡ್ಡ ಹುನ್ನಾರ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕಾಂಗ್ರೆಸ್ ಸರಕಾರವು ಹಿಂದು ಕಾರ್ಯಕರ್ತರ ಟಾರ್ಗೆಟ್ ಮಾಡಿ‌ ಕೇಸ್ ಪಿಕ್ಸ್ ಮಾಡುತ್ತಿರುವುದು ಖಂಡನೀಯ : ಅರಣ್ ಕುಮಾರ್ ಪುತ್ತಿಲ

ದ.ಕ‌ ಜಿಲ್ಲೆಯಲ್ಲಿ ಕೆಲವು ಘಟನೆಗಳು ಸಂಭವಿಸಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ನಾಯಕರು ಮತ್ತು ಕಾರ್ಯಕರ್ತರನ್ನೇ ಗುರಿಯಾಗಿಸಿ ಕೇಸ್ ಜಡಿಯುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆಯುತ್ತಿರುವುದು ಖಂಡನೀಯ ಎಂದು ಅರುಣ್ ಪುತ್ತಿಲ ಹೇಳಿದ್ದಾರೆ.ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಭಾಷಣ ನೆಪದಲ್ಲಿ ಸಂಘ ಪರಿವಾರದ ಹಿರಿಯರಿಗೆ, ಎನ್ ಐ ಎ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಮುಖಂಡರಿಗೆ ಕೇಸ್ ದಾಖಲಿಸಲಾಗಿದೆ ಎಂದಿದ್ದಾರೆ.ಮಧ್ಯರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತರ ಮನೆಗೆ ನುಗ್ಗಿ ಜಿಪಿಎಸ್ ಪೋಟೋ ತೆಗೆಯುವ ಮೂಲಕ ಮಲಗಿರುವ ಮನೆ

ಕಾಂಗ್ರೆಸ್ ಸರಕಾರವು ಹಿಂದು ಕಾರ್ಯಕರ್ತರ ಟಾರ್ಗೆಟ್ ಮಾಡಿ‌ ಕೇಸ್ ಪಿಕ್ಸ್ ಮಾಡುತ್ತಿರುವುದು ಖಂಡನೀಯ : ಅರಣ್ ಕುಮಾರ್ ಪುತ್ತಿಲ Read More »

ಅರಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಜೂ.6 ಕ್ಕೆ ವಿಚಾರಣೆಗೆ ದಿನ‌ ನಿಗದಿ

ಹಿಂದು ಮುಖಂಡ ಅರುಣ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ. ಅಲ್ಲದೇ ಈ ವಿಚಾರಣೆಗೆ ಅರುಣ್ ಕುಮಾರ್ ಪುತ್ತಿಲ ಅವರು ತಪ್ಪದೇ ಹಾಜರಾಗಲು ಸೂಚನೆ ನೀಡಲಾಗಿದೆ.ಈ ಪ್ರಕರಣದ ಪ್ರಕಾರ ಸ್ವತಃ ಅರುಣ್‌ಕುಮಾ‌ರ್ ಪುತ್ತಿಲ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಹೇಳಲಾಗಿರುವ ಕುರಿತು ವರದಿಯಾಗಿದೆ.ಒಂದು ವೇಳೆ ಅರುಣ್ ಕುಮಾರ್ ಪುತ್ತಿಲ

ಅರಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಜೂ.6 ಕ್ಕೆ ವಿಚಾರಣೆಗೆ ದಿನ‌ ನಿಗದಿ Read More »

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಕೊಲೆಯಾದ ಯುವಕ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮವೊಂದರಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿನಾಂಕ 12.05.2025 ರಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭಾಗವಹಿಸಿ ಅಲ್ಲಿ ಸೇರಿದ ಜನರನ್ನು ಉದ್ದೇಶಿಸಿ ಅವರು ಮಾತನಾಡಿ ಸಮಾಜದಲ್ಲಿ

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು Read More »

ಪಿಕಪ್ ಪಲ್ಟಿ ಹೊಡೆದು ಚಾಲಕನಿಗೆ ಗಂಭೀರ ಗಾಯ

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ.ಈ ಘಟನೆ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪಿಕಪ್ ಪಲ್ಟಿ ಹೊಡೆದು ಚಾಲಕನಿಗೆ ಗಂಭೀರ ಗಾಯ Read More »

error: Content is protected !!
Scroll to Top