ಕೊಲೆಯಾದ ಯುವಕ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮವೊಂದರಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನಾಂಕ 12.05.2025 ರಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭಾಗವಹಿಸಿ ಅಲ್ಲಿ ಸೇರಿದ ಜನರನ್ನು ಉದ್ದೇಶಿಸಿ ಅವರು ಮಾತನಾಡಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಹಾಗೂ ವಿವಿಧ ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟುಮಾಡುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು
