ಅರಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಜೂ.6 ಕ್ಕೆ ವಿಚಾರಣೆಗೆ ದಿನ‌ ನಿಗದಿ

ಹಿಂದು ಮುಖಂಡ ಅರುಣ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ
ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ. ಅಲ್ಲದೇ ಈ ವಿಚಾರಣೆಗೆ ಅರುಣ್ ಕುಮಾರ್ ಪುತ್ತಿಲ ಅವರು ತಪ್ಪದೇ ಹಾಜರಾಗಲು ಸೂಚನೆ ನೀಡಲಾಗಿದೆ.
ಈ ಪ್ರಕರಣದ ಪ್ರಕಾರ ಸ್ವತಃ ಅರುಣ್‌ಕುಮಾ‌ರ್ ಪುತ್ತಿಲ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಹೇಳಲಾಗಿರುವ ಕುರಿತು ವರದಿಯಾಗಿದೆ.
ಒಂದು ವೇಳೆ ಅರುಣ್ ಕುಮಾರ್ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದೇ ಇದ್ದ ಪಕ್ಷದಲ್ಲಿ ಈ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಏಕಪಕ್ರಿಯವಾಗಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top