ರಾಜ್ಯ ಸರ್ಕಾರ ಸಂಘ ಪರಿವಾರದ ಮುಖಂಡ ಮತ್ತು ಕಾರ್ಯಕರ್ತರ ಮನೆಗಳಿಗೆ ಪೊಲೀಸರನ್ನು ನಡುರಾತ್ರಿ ಕಳುಹಿಸಿ ಬೆದರಿಸುವ ಕೆಲಸ ಮಾಡುತ್ತಿದೆ. ಈ ನಿಯಮಗಳು ಪೊಲೀಸ್ ಕಾನೂನಿನಲ್ಲಿ ಇಲ್ಲ.ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಸಂಸದ ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಅವರು ಶುಕ್ರವಾರ ಸಂಜೆ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹೊಣೆ ಗೇಡಿ ರಾಜ್ಯ ಸರ್ಕಾರ ಭಾವನೆ ಕೆರಳಿಸುವ ಕೆಲಸ ಮಾಡುತ್ತಿದೆ. ಹಿಂದೂ ಸಂಘಟನೆಗಳ ಪ್ರಮುಖರ, ಕಾರ್ಯಕರ್ತರ ಮನೆಗೆ ಪೊಲೀಸರನ್ನು ಕಳುಹಿಸಿ ಬೆದರಿಸುವ ಕೆಲಸ ಮಾಡುತ್ತಿದೆ. ಕಾನೂನು ಸುವ್ಯವಸ್ಥೆ ಮಾಡಲು ಸಾಧ್ಯ ಆಗದೇ ಇರುವ ರಾಜ್ಯ ಸರ್ಕಾರ ಕೀಳು ಮಟ್ಟದ ಕೆಲಸ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದರು.
ಜಿಲ್ಲೆಯಲ್ಲಿ ಕಾನೂನುಸುವ್ಯವಸ್ಥೆ ಕಾಪಾಡಬೇಕು ಎನ್ನುವುದು ನಮ್ಮ ಅಪೇಕ್ಷೆ. ಆದರೆ ಏನೂ ಪ್ರಕರಣ ಇಲ್ಲದವರ ಮನೆಗೆ ಹೋಗಿ ಫೋಟೋ ತೆಗೆಯುವ ಪೊಲೀಸರ ಕೆಲಸ ಸರಿಯೇ ಎಂದು ಪ್ರಶ್ನಿಸಿದ ಬ್ರಿಜೇಶ್ ಚೌಟ ಅವರು, ರಾಜ್ಯದಲ್ಲಿ ಸಂಪೂರ್ಣ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸರ್ಕಾರದ ನಿಯಂತ್ರಣದಲ್ಲಿ ಇಲ್ಲ. ಅದಕ್ಕಾಗಿ ಗೃಹ ಸಚಿವರು ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.
ಕೊಲೆ ಸಹಿತ ಇತರ ಪ್ರಕರಣಗಳು ಬ್ರಾಂಡ್ ಮಂಗಳೂರಿಗೆ ದೊಡ್ಡ ಕಪ್ಪು ಚುಕ್ಕೆಯಲ್ಲವೆ ಎಂದು
ನಮ್ಮ ಪರಿವಾರದ ಕಾರ್ಯಕರ್ತರ ಮೇಲೆ ವಿನಃ ಕೇಸ್ ಮಾಡಿದರೆ ರಾಜ್ಯ ಸರ್ಕಾರ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೊಡ್ಡ ಕಪ್ಪು ಚುಕ್ಕೆ ಎಂದು ಆರೋಪಿಸಿದರು.
ಮುಖಂಡರಾದ ಹರೀಶ್ ಕಂಜಿಪಿಲಿ, ವಿನಯ ಕುಮಾರ್ ಕಂದಡ್ಡ, ಶಶಿಕಲಾ ನೀರಬಿದಿರೆ, ಸಂದೀಪ್, ಎಂ.ಟಿ.ಕುಸುಮಾಧರ ಗೋಷ್ಠಿಯಲ್ಲಿ ಇದ್ದರು.
ಸಂಘ ಪರಿವಾರದ ಮುಖಂಡರು ಹಿಂದು ಕಾರ್ಯಕರ್ತರ ಮನೆಗಳಿಗೆ ಪೊಲೀಸರ ದಾಳಿ,ಮಾನವ ಹಕ್ಕು ಆಯೋಗಕ್ಕೆ ದೂರು: ಚೌಟ
