ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಕಡಬದ ಇಂಚ್ಲಪಾಡಿ ಸೇತುವೆ ಬಳಿ ಇಂದು ನಡೆದಿದೆ.
ಇಂಚಪಾಡಿ ನಿವಾಸಿ ಜಯಾನಂದ ಶೆಟ್ಟಿ ಎಂಬವರ ಪುತ್ರ ಚೇತನ್ ಶೆಟ್ಟಿ (21) ಮೃತ ಯುವಕ.
ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿರುವ ಚೇತನ್ ಇದು ರಜೆ ಹಿನ್ನೆಲೆ ಮನೆಯಲ್ಲಿದ್ದರು. ಇಂದು ಬೆಳಿಗ್ಗೆ ಗೆಳೆಯರೊಂದಿಗೆ ಕ್ರಿಕೆಟ್ ಆಡಲು ಹೋದ ಚೇತನ್ ಮಧ್ಯಾಹ್ನ ಇಚ್ಚಂಪಾಡಿ ಸೇತುವೆ ಬಳಿ ಗುಂಡ್ಯ ಹೊಳೆಗೆ ಸ್ನಾನಕ್ಕೆಂದು ಹೋಗಿದ್ದಾರೆ.ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀರಲ್ಲಿ ಮುಳುಗಿ ಯುವಕ ಸಾವು
