ಮಂಗಳೂರು: ದ.ಕ ಜಿಲ್ಲೆಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿದೆ.
ಬಿಜೆಪಿ, ಹಿಂದೂ ಪರ ಸಂಘಟನೆಗಳು, ಸೇರಿ ಪ್ರಕರಣವನ್ನು ಎನ್ ಐಎಗೆ ವಹಿಸಲು ಒತ್ತಾಯಿಸಿದ್ದವು. ರಾಜ್ಯ ಬಿಜೆಪಿ ನಾಯಕರ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಮನವಿಯನ್ನೂ ಸಲ್ಲಿಸಿತ್ತು.
ಮೇ1(ಗುರುವಾರ) ರಾತ್ರಿ ಬಟ್ಟೆಯಲ್ಲಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹ*ತ್ಯೆ ಮಾಡಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು 12 ಮಂದಿ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ.