ಪುತ್ತೂರು ಸಂಚಾರ ಪೊಲೀಸ್ ಠಾಣೆ ಹೆಡ್ಕಾನ್ನೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಸುಳ್ಯ ತಾಲೂಕಿನ ಗೂನಡ್ಕದ ಶಿವ ಪ್ರಸಾದ್(೫೧ )ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು.
ಶಿವಪ್ರಸಾದ್ ಕಡಬ, ಮಂಗಳೂರು ಹಾಗೂ ಇನ್ನಿತರ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಪತ್ನಿ ಸುಲೋಚನಾ, ಪುತ್ರಿಯರಾದ ರಮ್ಯಾ, ಅರ್ಚನಾ, ಪುತ್ರ ತೇಜಸ್ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಹೃದಯಾಘಾತದಿಂದ ಪೊಲೀಸ್ ನಿಧನ
