ಜೂನ್ 26ರ ನಂತರ ಮಳೆ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುಂದಿನ ದಿನಗಳಲ್ಲಿ
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ, ಗದಗ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಭಾನುವಾರ ಶೃಂಗೇರಿ, ಕಳಸ, ಭಾಗಮಂಡಲ, ಗುಬ್ಬಿ, ಕಮ್ಮರಡಿ, ಮಾಣಿ, ಉಪ್ಪಿನಂಗಡಿ, ಮಂಗಳೂರು, ಯಲ್ಲಾಪುರ, ಗೇರುಸೊಪ್ಪ, ಸುಳ್ಯ, ಪುತ್ತೂರು, ಮಂಕಿ, ಬಂಟವಾಳ, ಕುಂದಾಪುರ, ಕ್ಯಾಸಲ್ರಾಕ್, ಸಿದ್ದಾಪುರ, ಮೂಡುಬಿದಿರೆ, ಕೊಪ್ಪ, ಜೋಯ್ಡಾ ಹಾಗೂ ಅಂಕೋಲಾದಲ್ಲಿ ಹೆಚ್ಚಿನ ಮಳೆಯಾಗಿದೆ
ಜೂ.26ರ ಬಳಿಕ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ














































