June 2025

ಗುಂಡ್ಯದಲ್ಲಿ ಖಾಸಗಿ ಬಸ್ಸು ಪಲ್ಟಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯ

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ನಸುಕಿನ ವೇಳೆ ಖಾಸಗಿ ಬಸ್ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ಜೂ.7 ರಂದು ನಡೆದಿದೆ.ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ ಸುಮಾರು 3:30 ರ ವೇಳೆ ಗುಂಡ್ಯ ಸಮೀಪ ತಲುಪುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇಬ್ಬರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆಈ ಘಟನೆಯಲ್ಲಿ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಚಾಲಕ ಸೇರಿದಂತೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ […]

ಗುಂಡ್ಯದಲ್ಲಿ ಖಾಸಗಿ ಬಸ್ಸು ಪಲ್ಟಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ-ಸ್ವಾಗತ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಜಾಲ್ಸೂರು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎಂ. ದೀಪಬೆಳಗಿಸಿ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದರು. ಅತಿಥಿಗಳಾಗಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಜತೆ ಕಾರ್ಯದರ್ಶಿ ಜಯರಾಮ ರೈ , ನಿರ್ದೇಶಕ ಮೋನಪ್ಪ ಎಂ, ಸುಂದರ ಕಾಡು ಸೊರಂಜ ಭಾಗವಹಿಸಿದರು. ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್ ಸ್ವಾಗತಿಸಿ, ಶಿಕ್ಷಕಿ ಮೀನ ಕುಮಾರಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ್ ಕೆ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ-ಸ್ವಾಗತ Read More »

ಪೂಜೆಯ ವೇಳೆ ಬೆಂಕಿ ತಗುಲಿದ ಮಹಿಳೆ ಸಾವು

ಪೂಜೆಯ ವೇಳೆ ಉಟ್ಟ ಬಟ್ಟೆಗೆ ಬೆಂಕಿ ತಗುಲಿ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ನಗರದ ಮೇರಿಹಿಲ್ ಸಮೀಪದ ಗುರುನಗರ ಎಂಬಲ್ಲಿನ ಸರೋಜಿನಿ (64) ಎಂಬವರು ಮೃತಪಟ್ಟಿದ್ದಾರೆ, ಅವರನ್ನು ರಕ್ಷಿಸಲ ಬಂದ ಪುತ್ರ ಅಕ್ಷಯ್ (20)ಗೆ ಗಾಯವಾಗಿದೆ.ಮಂಗಳವಾರ ರಾತ್ರಿ ಮನೆಯಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಸರೋಜಿನಿಯ ಬಟ್ಟೆಗೆ ಬೆಂಕಿ ತಗುಲಿತ್ತು. ಈ ವೇಳೆ ಪುತ್ರ ಆಕೆಯನ್ನು ರಕ್ಷಿಸಲು ಮುಂದಾಗಿದ್ದು, ಆತನಿಗೂ ಬೆಂಕಿಯಿಂದ ಸುಟ್ಟಗಾಯವಾಗಿತ್ತು. ವಿಷಯ ತಿಳಿದ

ಪೂಜೆಯ ವೇಳೆ ಬೆಂಕಿ ತಗುಲಿದ ಮಹಿಳೆ ಸಾವು Read More »

ಸಂಘ ಪರಿವಾರದ ಮುಖಂಡರು ಹಿಂದು ಕಾರ್ಯಕರ್ತರ ಮನೆಗಳಿಗೆ ಪೊಲೀಸರ ದಾಳಿ,ಮಾನವ ಹಕ್ಕು ಆಯೋಗಕ್ಕೆ ದೂರು: ಚೌಟ

ರಾಜ್ಯ ಸರ್ಕಾರ ಸಂಘ ಪರಿವಾರದ ಮುಖಂಡ ಮತ್ತು ಕಾರ್ಯಕರ್ತರ ಮನೆಗಳಿಗೆ ಪೊಲೀಸರನ್ನು ನಡುರಾತ್ರಿ ಕಳುಹಿಸಿ ಬೆದರಿಸುವ ಕೆಲಸ ಮಾಡುತ್ತಿದೆ. ಈ ನಿಯಮಗಳು ಪೊಲೀಸ್ ಕಾನೂನಿನಲ್ಲಿ ಇಲ್ಲ‌.ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಸಂಸದ ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.ಅವರು ಶುಕ್ರವಾರ ಸಂಜೆ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಹೊಣೆ ಗೇಡಿ ರಾಜ್ಯ ಸರ್ಕಾರ ಭಾವನೆ ಕೆರಳಿಸುವ ಕೆಲಸ ಮಾಡುತ್ತಿದೆ. ಹಿಂದೂ ಸಂಘಟನೆಗಳ ಪ್ರಮುಖರ, ಕಾರ್ಯಕರ್ತರ ಮನೆಗೆ

ಸಂಘ ಪರಿವಾರದ ಮುಖಂಡರು ಹಿಂದು ಕಾರ್ಯಕರ್ತರ ಮನೆಗಳಿಗೆ ಪೊಲೀಸರ ದಾಳಿ,ಮಾನವ ಹಕ್ಕು ಆಯೋಗಕ್ಕೆ ದೂರು: ಚೌಟ Read More »

ಅರಂತೋಡಿ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಅರಂತೋಡಿ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆಅರಂತೋಡಿನಲ್ಲಿ ಮುಸ್ಲಿಂ ಭಾಂದವರು ಬಕ್ರೀದ್ ಹಬ್ಬವನ್ನು ಬಹಳ ಸಡಗರದಿಂದ ಆಚರಿಸಿದರು, ಖತಿಬ್ ಇಸ್ಮಾಯಿಲ್ ಪೈಝಿ ಗಟ್ಟಮನೆ ಯವರ ನೇತ್ರತ್ವ ದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು, ಜಮಾತ್ ಪದಾಧಿಕಾರಿಗಳು, ಜಮಾತ್ ಸದಸ್ಯರು ಪಾಲ್ಗೊಂಡರು*

ಅರಂತೋಡಿ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ Read More »

ಆಟೋ ರಿಕ್ಷಾವನ್ನು ನುಜ್ಜುಗುಜ್ಜು ಮಾಡಿದ ಕಾಡಾನೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋ ರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಜೂ.6 ರಂದು ಮುಂಜಾನೆ ನಡೆದಿದೆ.ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತನ್ನ ಆಟೋರಿಕ್ಷಾದಲ್ಲಿ ಜೂ.6 ರಂದು ಮುಂಜಾನೆ 5:30 ಸಮಯಕ್ಕೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆಯ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ದೊಡ್ಡ

ಆಟೋ ರಿಕ್ಷಾವನ್ನು ನುಜ್ಜುಗುಜ್ಜು ಮಾಡಿದ ಕಾಡಾನೆ Read More »

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಶ್ರೀ ಸುರೇಶ್ ವಾಗ್ಲೆ ವಿಶ್ವ ಪರಿಸರ ದಿನಾಚರಣೆ ಮಹತ್ವದ ಕುರಿತು ಮಾಹಿತಿ ನೀಡಿ, ಗಿಡ ನೆಟ್ಟು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ರಾಷ್ಟೀಯ ಸೇವಾ ಯೋಜನೆಯ ಕಾರ್ಯಕ್ರಮ ಆಧಿಕಾರಿ ಲಿಂಗಪ್ಪ ಎಂ. ಉಪನ್ಯಾಸಕರಾದ ಮೋಹನಚಂದ್ರ, ಪದ್ಮಕುಮಾರ್, ಚಂದ್ರಶೇಖರ್ , ಅಶ್ವಿನಿ.ಎಂ ಮತ್ತು ಶಾರೀಖ ತಸ್ಲಿಮಾ ಹಾಗೂ ಕಛೇರಿ ಸಹಾಯಕ ಚಿದಾನಂದ.ಕೆ ಹಾಗೂ

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತ ಸಾಗುವಳಿಗೆ ಡಾ.ದೇವಿಪ್ರಸಾದ್ ಕಾನತ್ತೂರು ಅವರಿಂದ ಚಾಲನೆ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಾಲ್ಕನೇ ವರ್ಷದ ಭತ್ತದ ಸಾಗುವಳಿ ಜೂ.5 ರಂದು ನಡೆಸಲಾಯಿತು.ಜೇಸಿಐ ಪಂಜ ಪಂಚಶ್ರೀಯ ಬೆಳ್ಳಿ ಹಬ್ಬದ ಸ್ಮರಣೆಗೋಸ್ಕರ ದಾನಿಗಳ ಸಹಾಯದಿಂದ ನಿರ್ಮಿತಗೊಂಡ ದೇವಳದ ಗದ್ದೆಯಲ್ಲಿ ನಾಲ್ಕನೇ ವರ್ಷದ ಭತ್ತದ ಸಾಗುವಳಿ ಮಾಡಲಾಯಿತು.ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಕಾರ್ಯಕ್ರಮವನ್ನು ಭತ್ತ ಸಾಗುವಳಿ ಮಾಡುವುದರ ಮೂಲಕ ಉದ್ಘಾಟಿಸಿದರು. ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಗೌಡ ಕುದ್ವ,

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತ ಸಾಗುವಳಿಗೆ ಡಾ.ದೇವಿಪ್ರಸಾದ್ ಕಾನತ್ತೂರು ಅವರಿಂದ ಚಾಲನೆ Read More »

ಅಕ್ರಮ ಜಾನುವಾರು ಸಾಗಾಟ ತಡೆಯುವಂತೆ ಮನವಿ

ಜಾನುವಾರುಗಳ ಅಕ್ರಮ ಸಾಗಾಟ,ಹಿಂಸತಾತ್ಮ ಸಾಗಾಟ, ಶೇಖರಣೆ ಮತ್ತು ಹತ್ಯೆಯನ್ನು ತಡೆಯುವಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಕಾರ್ಯಕರ್ತರು ಸುಳ್ಯ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಸೋಮಶೇಖ‌ರ್ ಪೈಕ, ನವೀನ್ ಎಲಿಮಲೆ, ಹರಿಪ್ರಸಾದ್ ಎಲಿಮಲೆ, ಭಾನುಪ್ರಕಾಶ್ ಪೆರುಮುಂಡ, ಉಪೇಂದ್ರ ನಾಯಕ್, ವರ್ಷಿತ್ ಚೊಕ್ಕಾಡಿ, ಅಭಿಜಿತ್ ಸುಳ್ಯ, ಕಿರಣ್ ಸುಳ್ಯ, ನಿರ್ದೇಶ್ ಸುಳ್ಳಿ, ನಿಕೇಶ್, ಪ್ರಿತೇಶ್‌ ನಾರ್ಣಕಜೆ ಇತರರು ಉಪಸ್ಥಿತರಿದ್ದರು.

ಅಕ್ರಮ ಜಾನುವಾರು ಸಾಗಾಟ ತಡೆಯುವಂತೆ ಮನವಿ Read More »

ಸಂಪಾಜೆ : ಹೆರಿಗೆಯ ಬಳಿಕ ರಕ್ತ ಸ್ರಾವದಿಂದ ಮಹಿಳೆ ಸಾವು

ಹೆರಿಗೆಯ ಬಳಿಕ ರಕ್ತಸ್ರಾವದಿಂದ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಾಜೆ ಗ್ರಾಮದ ಬಾಬು ಎಂಬವರ ಪುತ್ರಿ, ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ಬಳಿಕ ಅತೀಯಾದ ರಕ್ತ ಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ.ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ ದಂಪತಿ ಪುತ್ರಿಯಾದ ಮಧುರಾ ಆರು ವರ್ಷಗಳ ಹಿಂದೆ ಬೆಳ್ತಂಗಡಿಯ ನಾರಾವಿ ಗ್ರಾಮದ ನೂಜೋಡಿ ಮನೆ ನಿವಾಸಿ ಶೇಖರ ಮಲೆಕುಡಿಯ ಅವರೊಂದಿಗೆ ವಿವಾಹವಾಗಿದ್ದರು.ಮಧುರಾರಿಗೆ

ಸಂಪಾಜೆ : ಹೆರಿಗೆಯ ಬಳಿಕ ರಕ್ತ ಸ್ರಾವದಿಂದ ಮಹಿಳೆ ಸಾವು Read More »

error: Content is protected !!
Scroll to Top