June 2025

ಸಂಘಟನೆಯಲ್ಲಿ ತೊಡಗಿಸಿಕೊಂಡ ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರ ಭೇಟಿಗೆ ಆಕ್ಷೇಪ

ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ವೇಳೆ ಪೋಲೀಸರು ಭೇಟಿ ನೀಡಿರುವುದನ್ನು ಆಕ್ಷೇಪಿಸಿರುವ ಸಂಘಟನೆಯವರು, ಸರ್ಕಲ್ ಇನ್ ಸ್ಪೆಕ್ಟರ್ ಕಚೇರಿಗೆ ಹೋಗಿ ಮನವಿ ಸಲ್ಲಿಸಿದ್ದಾರೆ.ಸುಳ್ಯ ತಾಲೂಕಿನಲ್ಲಿ ಕಳೆದ ಅನೇಕ ವರ್ಷಗಳಿಂದ ವಿವಿಧ ಹಿಂದೂ ಸಂಘಟನೆಗಳು ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದು ಸಮಾಜದಲ್ಲಿ ಸಂಸ್ಕಾರ ಮತ್ತು ಸಾಮರಸ್ಯವನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಾ ಬಂದಿವೆ. ಹಿಂದೂ ಸಂಘಟನೆಗಳ ಕಾರಣದಿಂದಾಗಿಯೇ ಸುಳ್ಯವು ಸಾಮಾಜಿಕವಾಗಿ ಇತರೆ ಕಡೆಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿರುತ್ತದೆ. ಹಿಂದೂ ಸಂಘಟನೆಗಳ ಸಂಸ್ಕಾರದ ಕಾರ್ಯದಿಂದಾಗಿ ಸಮಾಜದಲ್ಲಿ ಅಪರಾಧ ಪ್ರಕರಣಗಳು ಬಹಳಷ್ಟು ಕಡಿಮೆಯಾಗಿದ್ದು […]

ಸಂಘಟನೆಯಲ್ಲಿ ತೊಡಗಿಸಿಕೊಂಡ ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರ ಭೇಟಿಗೆ ಆಕ್ಷೇಪ Read More »

ಆಸ್ಪತ್ರೆಯಲ್ಲಿ ಬೆಡ್ ಸಿಗದ ಹಿನ್ನಲೆಯಲ್ಲಿ ಆ್ಯಂಬುಲೆನ್ಸ್ ನಲ್ಲೇ ಕಾದ ಅತ್ಯಾಚಾರಕೊಳಗಾದ ಬಾಲಕಿ‌ ಸಾವು

ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ಗಂಟೆಗಟ್ಟಲೆ ಆಂಬ್ಯುಲೆನ್ಸ್​ ನಲ್ಲಿ ಕಾದ ಅತ್ಯಾಚಾರ ಸಂತ್ರಸ್ತ ಬಾಲಕಿ ಆ್ಯಂಬುಲೆನ್ಸ್ ನಲ್ಲೇ ಕೊನೆಯುಸಿರೆಳೆದ ಘಟನೆ ಬಿಹಾರದ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.ರೋಹಿತ್ ಕುಮಾರ್ ಸಾಹ್ನಿ ಎಂಬಾತ ಸಂತ್ರಸ್ತ ಬಾಲಕಿಗೆ ಚಾಕೊಲೇಟ್​ ಕೊಡಿಸುವುದಾಗಿ ಆಮಿಷವೊಡ್ಡಿ ಹೊರಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದ ಇದರಿಂದಾಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಳು. ಬಾಲಕಿ ಮಾತನಾಡುವ ಸ್ಥಿತಿಯಲ್ಲಿ ಇಲ್ಲವಾದರೂ ತನ್ನ ಮೇಲೆ ದೌರ್ಜನ್ಯ ನಡೆಸಿರುವುದನ್ನು ಸನ್ನೆ ಮೂಲಕವೇ ತಿಳಿಸಿದ್ದಳು. ಇದಾದ ಬಳಿಕ ಆರೋಪಿಯನ್ನು

ಆಸ್ಪತ್ರೆಯಲ್ಲಿ ಬೆಡ್ ಸಿಗದ ಹಿನ್ನಲೆಯಲ್ಲಿ ಆ್ಯಂಬುಲೆನ್ಸ್ ನಲ್ಲೇ ಕಾದ ಅತ್ಯಾಚಾರಕೊಳಗಾದ ಬಾಲಕಿ‌ ಸಾವು Read More »

ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದೆ ದೊಡ್ಡ ಹುನ್ನಾರ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್​ಎಸ್​​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಎಫ್​ಐಆರ್ ದಾಖಲಿಸುವ ಮೂಲಕ ಮತ್ತೊಮ್ಮೆ ನಮ್ಮ ಕರಾವಳಿ ಭಾಗದ ಹಿಂದೂ ನಾಯಕರು ಮತ್ತು ಸಂಘಟನೆಗಳನ್ನು ಬೆದರಿಸಲು, ವಿಭಜಿಸಲು ಹಾಗೂ ಕಿರುಕುಳ ನೀಡಲು ಆಡಳಿತ ಯಂತ್ರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಕಳವಳ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ಹಿಂದೂಗಳನ್ನು

ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದೆ ದೊಡ್ಡ ಹುನ್ನಾರ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕಾಂಗ್ರೆಸ್ ಸರಕಾರವು ಹಿಂದು ಕಾರ್ಯಕರ್ತರ ಟಾರ್ಗೆಟ್ ಮಾಡಿ‌ ಕೇಸ್ ಪಿಕ್ಸ್ ಮಾಡುತ್ತಿರುವುದು ಖಂಡನೀಯ : ಅರಣ್ ಕುಮಾರ್ ಪುತ್ತಿಲ

ದ.ಕ‌ ಜಿಲ್ಲೆಯಲ್ಲಿ ಕೆಲವು ಘಟನೆಗಳು ಸಂಭವಿಸಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ನಾಯಕರು ಮತ್ತು ಕಾರ್ಯಕರ್ತರನ್ನೇ ಗುರಿಯಾಗಿಸಿ ಕೇಸ್ ಜಡಿಯುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆಯುತ್ತಿರುವುದು ಖಂಡನೀಯ ಎಂದು ಅರುಣ್ ಪುತ್ತಿಲ ಹೇಳಿದ್ದಾರೆ.ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಭಾಷಣ ನೆಪದಲ್ಲಿ ಸಂಘ ಪರಿವಾರದ ಹಿರಿಯರಿಗೆ, ಎನ್ ಐ ಎ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಮುಖಂಡರಿಗೆ ಕೇಸ್ ದಾಖಲಿಸಲಾಗಿದೆ ಎಂದಿದ್ದಾರೆ.ಮಧ್ಯರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತರ ಮನೆಗೆ ನುಗ್ಗಿ ಜಿಪಿಎಸ್ ಪೋಟೋ ತೆಗೆಯುವ ಮೂಲಕ ಮಲಗಿರುವ ಮನೆ

ಕಾಂಗ್ರೆಸ್ ಸರಕಾರವು ಹಿಂದು ಕಾರ್ಯಕರ್ತರ ಟಾರ್ಗೆಟ್ ಮಾಡಿ‌ ಕೇಸ್ ಪಿಕ್ಸ್ ಮಾಡುತ್ತಿರುವುದು ಖಂಡನೀಯ : ಅರಣ್ ಕುಮಾರ್ ಪುತ್ತಿಲ Read More »

ಅರಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಜೂ.6 ಕ್ಕೆ ವಿಚಾರಣೆಗೆ ದಿನ‌ ನಿಗದಿ

ಹಿಂದು ಮುಖಂಡ ಅರುಣ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ. ಅಲ್ಲದೇ ಈ ವಿಚಾರಣೆಗೆ ಅರುಣ್ ಕುಮಾರ್ ಪುತ್ತಿಲ ಅವರು ತಪ್ಪದೇ ಹಾಜರಾಗಲು ಸೂಚನೆ ನೀಡಲಾಗಿದೆ.ಈ ಪ್ರಕರಣದ ಪ್ರಕಾರ ಸ್ವತಃ ಅರುಣ್‌ಕುಮಾ‌ರ್ ಪುತ್ತಿಲ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಹೇಳಲಾಗಿರುವ ಕುರಿತು ವರದಿಯಾಗಿದೆ.ಒಂದು ವೇಳೆ ಅರುಣ್ ಕುಮಾರ್ ಪುತ್ತಿಲ

ಅರಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಜೂ.6 ಕ್ಕೆ ವಿಚಾರಣೆಗೆ ದಿನ‌ ನಿಗದಿ Read More »

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಕೊಲೆಯಾದ ಯುವಕ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮವೊಂದರಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿನಾಂಕ 12.05.2025 ರಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭಾಗವಹಿಸಿ ಅಲ್ಲಿ ಸೇರಿದ ಜನರನ್ನು ಉದ್ದೇಶಿಸಿ ಅವರು ಮಾತನಾಡಿ ಸಮಾಜದಲ್ಲಿ

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು Read More »

ಪಿಕಪ್ ಪಲ್ಟಿ ಹೊಡೆದು ಚಾಲಕನಿಗೆ ಗಂಭೀರ ಗಾಯ

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ.ಈ ಘಟನೆ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪಿಕಪ್ ಪಲ್ಟಿ ಹೊಡೆದು ಚಾಲಕನಿಗೆ ಗಂಭೀರ ಗಾಯ Read More »

ಬಿಜೆಪಿ ಯುವ ಮೋರ್ಚಾ ಮುಖಂಡನ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷನ ಮನೆ ಮೇಲೆ ದುಷ್ಕರ್ಮಿಗಳು ಭಾನುವಾರ ರಾತ್ರಿ ಕಲ್ಲು ತೂರಾಟ ನಡೆಸಿರುವ ಘಟನೆ ವರದಿಯಾಗಿದೆ.ದುಷ್ಕರ್ಮಿಗಳು ಕಡೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿರುವ ಭರತ್‌ ಕೆಂಪರಾಜು ಎನ್ನುವವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಅವರ ಕಾರಿನ ಮೇಲೆ ಕಲ್ಲು ಹಾಕಿ ಜಖಂಗೊಳಿಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆ ಮಾಡಲಾಗುತ್ತಿವೆ.

ಬಿಜೆಪಿ ಯುವ ಮೋರ್ಚಾ ಮುಖಂಡನ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ Read More »

ವ್ಯಕ್ತಿಯನ್ನು‌ ಮಚ್ಚಿಯಿಂದ ಕೊಚ್ಚಿ ಕೊಲೆ!

ವ್ಯಕ್ತಿಯೋರ್ವನನ್ನು ಮಚ್ಚಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೊಪ್ಪಳದ ತಾವರಗೇರಾ ಹಳೆ ಬಸ್ ನಿಲ್ದಾಣದ ಬೇಕರಿ ಮುಂದೆ ಮೇ 31ರ ಶನಿವಾರ ರಾತ್ರಿ ನಡೆದಿದೆ.ಚೆನ್ನಪ್ಪ ಹರಿಜನ್ (30) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.ಈ ಘಟನೆ ಹಿನ್ನಲೆಯಲ್ಲಿ ಜನರಲ್ಲಿ ಆತಂಕ ಮೂಡುವಂತಾಗಿದೆ.ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ಪಿ ಡಾ. ಎಲ್.ಆರ್. ಅರಸಿದ್ದಿ, ಗಂಗಾವತಿ ಡಿಎಸ್ಪಿ ಸಿದ್ದಲಿಂಗಪ್ಪ ಗೌಡ, ಸಿಪಿಐ ಯಶವಂತ್ ಬಿಸನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವ್ಯಕ್ತಿಯನ್ನು‌ ಮಚ್ಚಿಯಿಂದ ಕೊಚ್ಚಿ ಕೊಲೆ! Read More »

ಅರೆಭಾಷೆ ಅಕಾಡೆಮಿಯ ವಿನೂತನ ಕಾರ್ಯಾಗಾರ ಕಥೆ ಬರೆಮೊ ಬನ್ನಿ…ಸುಳ್ಯದಲ್ಲಿ ಅರೆಭಾಷೆ ಕಥೆ ಬರೆಮೋ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಥೆ ಬರೆಯುವ ಹವ್ಯಾಸವನ್ನು ಬೆಳೆಸಿದರೆ ಮುಂದೆ ಉತ್ತಮ ಕಥೆಗಾರರಾಗಿ ಭಾಷೆಯ ದೊಡ್ಡ ಆಸ್ತಿ ಆಗಲಿದ್ದಾರೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಾಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕನ್ನಡ ಭವನದಲ್ಲಿ ಅರೆಭಾಷೆ ಕತೆ ಬರೆಮೊ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕತೆ ಎಂಬುದು ಎಲ್ಲರ ಜೀವನದಲ್ಲೂ ಇರುತ್ತದೆ ಅದನ್ನು ವ್ಯವಸ್ಥಿತವಾಗಿ ಅಕ್ಷರ ರೂಪಕ್ಕೆ ಇಳಿಸಲು ಪ್ರೇರೇಪಿಸುವುದಕ್ಕಾಗಿ ಈ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಅರೆಭಾಷೆ ಅಕಾಡೆಮಿಯ ವಿನೂತನ ಕಾರ್ಯಾಗಾರ ಕಥೆ ಬರೆಮೊ ಬನ್ನಿ…ಸುಳ್ಯದಲ್ಲಿ ಅರೆಭಾಷೆ ಕಥೆ ಬರೆಮೋ ಕಾರ್ಯಕ್ರಮಕ್ಕೆ ಚಾಲನೆ Read More »

error: Content is protected !!
Scroll to Top