June 2025

ಸ್ಕೂಟಿಗೆ ವಾಹನ ಡಿಕ್ಕಿ ಹೊಡೆದು ಪರಾರಿ

ಸ್ಕೂಟಿಗೆ ವಾಹನ ವೊಂದು ಢಿಕ್ಕಿಯಾಗಿ, ಆಕೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ವರದಿಯಾಗಿದೆಪೆರಾಜೆಯ ಶಾಹಿದಾ ಎಂಬವರು ಸುಳ್ಯದಿಂದ ಪೆರಾಜೆಯ ತಮ್ಮ ಮನೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಅರಂಬೂರು ಮರದ ಡಿಪ್ಪೋ ಸಮೀಪ ಸ್ಕೂಟಿಗೆ ವಾಹನವೊಂದು ಢಿಕ್ಕಿಯಾಯಿತು. ಪರಿಣಾಮ ಶಾಹಿದಾ ರಸ್ತೆಗೆ ಬಿದ್ದರು. ಗುದ್ದಿದ ವಾಹನದವರು ನಿಲ್ಲಿಸದೇ ಮುಂದಕ್ಕೆ ಹೋದರು.ಅದೇ ವೇಳೆಗೆ ಆ ರಸ್ತೆಯಾಗಿ ಕಾರಿನಲ್ಲಿ ಬಂದ ಪೈಚಾರಿನ ಆರೀಫ್ ರವರು ಆ ಯುವತಿಯನ್ನು ತನ್ನ ಕಾರಿನಲ್ಲಿ ಹಾಕಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ದಾಖಲಿಸಿದರೆಂದು […]

ಸ್ಕೂಟಿಗೆ ವಾಹನ ಡಿಕ್ಕಿ ಹೊಡೆದು ಪರಾರಿ Read More »

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ,ಮತ್ತೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು,ಜೂ.17ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.ಈಗಿರುವ ಹವಾಮಾನದ ವೈಶಿಷ್ಟ್ಯಗಮನಿಸಿದರೆ, ಪೂರ್ವ ಅರಬ್ಬಿ ಸಮುದ್ರದ ಕೊಂಕಣದ ಕರಾವಳಿ ಹತ್ತಿರ ಸರ್ಕ್ಯುಲೇಶನ್ 7.6 ಕಿ.ಮೀ ಎತ್ತರದವರೆಗೆ ಇದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 16 ರಿಂದ 20ರ ವರೆಗೆ ವ್ಯಾಪಕವಾಗಿ ಮಳೆಯಾದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಲಿದೆ.ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ,ಮತ್ತೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ Read More »

ಸುಳ್ಯದಲ್ಲಿ ಯುವ ವಿಕಾಸ ಸಮಾವೇಶ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಛೇರಿ ಹಾಗೂ ಸುಂದರ ಭಾರತ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಯುವಿಕಾಸ್ ಸಮಾವೇಶ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ .ಕು.ಭಾಗೀರಥಿ ಮುರುಳ್ಯ ವಹಿಸಿದ್ದರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ದಕ್ಷಿಣ ಕನ್ನಡ ಸಾರ್ಥಕತೆಯ ಸಹಕಾರದ ನಾಡು, ಇಲ್ಲಿನ ಯುವ ಜನತೆಗೆ ಬ್ಯಾಕ್ ಟು ಊರು ಎಂಬ ಅಭಿಯಾನದಲ್ಲಿ ಹೊರದೇಶದಲ್ಲಿ ಇದ್ದ ಉದ್ಯಮಿಗಳ ಕಂಪನಿಗಳನ್ನು ಮಂಗಳೂರಿಗೆ

ಸುಳ್ಯದಲ್ಲಿ ಯುವ ವಿಕಾಸ ಸಮಾವೇಶ Read More »

ಹಳ್ಳಿ ಹುಡುಗನಿಗೆ ಒಲಿಯಿತು 30 ಲಕ್ಷ ಮೌಲ್ಯದ ಎರಡು ಬೆಡ್ ರೂಮಿನ ಪ್ಲಾಟ್ ಮನೆ

ಪುತ್ತೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ‘ಬೈಟ್ ಭಾರತ್’ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಲಕ್ಕಿ ಕೂಪನ್ ಯೋಜನೆಯ ಡ್ರಾದಲ್ಲಿ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಯುವಕನೊಬ್ಬ ಮೂವತ್ತು ಲಕ್ಷ ರೂಪಾಯಿ ಮೌಲ್ಯದ ಎರಡು ಬೆಡ್ ರೂಂನ ಮನೆಯನ್ನು ತನ್ನದಾಗಿಸಿಕೊಂಡಿದ್ದಾನೆ.ಮಂಡೆಕೋಲು ಗ್ರಾಮದ ಮಾವಂಜಿ, ಹೊಸೊತ್ತು ದಾಸಪ್ಪ ಗೌಡ ಹಾಗೂ ಯಶೋಧಾ ದಂಪತಿಗಳ ಪುತ್ರ ಚೇತನ್ ಕುಮಾರ್ ಎಂಬ ಯುವಕನೇ ಈ ಅದೃಷ್ಟಶಾಲಿಯಾಗಿದ್ದಾನೆ. ಪದವಿ ವಿದ್ಯಾಭ್ಯಾಸ ಪೂರೈಸಿದ ಬಳಿಕ ಫ್ಯಾಬ್ರಿಕೇಶನ್ ಕೆಲಸದಲ್ಲಿ ತೊಡಗಿಕೊಂಡಿರುವ ಚೇತನ್ ತನ್ನ ಗಳಿಕೆಯ ಹಣದಲ್ಲಿ ‘ಬೈಟ್ ಭಾರತ್‌’

ಹಳ್ಳಿ ಹುಡುಗನಿಗೆ ಒಲಿಯಿತು 30 ಲಕ್ಷ ಮೌಲ್ಯದ ಎರಡು ಬೆಡ್ ರೂಮಿನ ಪ್ಲಾಟ್ ಮನೆ Read More »

ಕಾಡಾನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ

ಅರಂತೋಡು, ಜೂ.16 : ಅಲೆಟ್ಟಿ ಗ್ರಾಮದ ಕಲ್ಲರ್ಪೆ ಪಾಲಡ್ಕ, ಅರಂಬೂರು, ಪರಿವಾರಕಾನದ ರಸ್ತೆಯ ಸಮೀಪದ ಕೃಷಿಕರಿಗೆ ಆನೆ ಹಾವಳಿ ಮಾಡುತ್ತಿದ್ದು ತುರ್ತು ಕೃಮ ಕೈಗೊಳ್ಳುವಂತೆ ಸ್ಥಳೀಯರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.ಅಲೆಟ್ಟಿ ಗ್ರಾಮದ 6ನೇ ಕ್ಷೇತ್ರ ಅರಂಬೂರು, ಪರಿವಾರಕಾನ, ಪಾಲಡ್ಕ, ಕಲ್ಚೆರ್ಪೆ ಬಾಗವು ಪೂಮಲೆ ಅರಣ್ಯ ರಕ್ಷಿತಾರಣ್ಯ ಸಮೀಪವಿದ್ದು, ಕಳೆದ ಹಲವಾರು ಸಮಯಗಳಿಂದ ಆನೆಗಳ ಹಿಂಡು ಸುಮಾರು ಬಹುತೇಕ ಕೃಷಿಕರ ಕೃಪಾವಳಿಗಳನ್ನು ನಾಶಮಾಡಿದೆ. ಈಗಲೂ ದಿನಾ ರಾತ್ರೆಯಾದ ತಕ್ಷಣ ಭಯದ ವಾತಾವರಣ ಜನರದ್ದು ಆಗಿದೆ

ಕಾಡಾನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ Read More »

ಗರ್ಭಿಣಿ ಮಹಿಳೆ ಆತ್ಮಹತ್ಯೆ

ಗರ್ಭಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಪುತ್ತೂರಿನಲ್ಲಿ ಜೂನ್ 15 ರಂದು ರಾತ್ರಿ ನಡೆದಿದೆ. ಚಿಕ್ಕಪುತ್ತೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಚಿಂತನ್ ಅವರ ಪತ್ನಿ ರೇಷ್ಮಾ ಆತ್ಮಹತ್ಯೆಗೆ ಶರಣಾದವರು.ಸುರತ್ಕಲ್ ನವರಾದ ರೇಷ್ಮಾ 4 ವರ್ಷಗಳ ಹಿಂದೆ ಚಿಂತನ್ ಅವರನ್ನು ಮದುವೆಯಾಗಿದ್ದರು. ಜೂನ್ 15 ರಂದು ರೇಷ್ಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತಿ ಚಿಂತನ್ ಹಾಗೂ ಮೂರು ವರ್ಷದ ಮಗಳನ್ನು ಅಗಲಿದ್ದಾರೆ.

ಗರ್ಭಿಣಿ ಮಹಿಳೆ ಆತ್ಮಹತ್ಯೆ Read More »

ನೆಲ್ಯಾಡಿ ಸಮೀಪ ಭೀಕರ ಬಸ್ ಲಾರಿ ಅಪಘಾತ,ಓರ್ವ ಸಾವು,ಹಲವರಿಗೆ ಗಾಯ

ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ಇಂದು ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ನಿಂತಿದ್ದ ಲಾರಿಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ 18ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.ಕಾರ್ಕಳ ತಾಲೂಕಿನ ಪಡುಮನೆಯಶಂಕರನಾರಾಯಣ ಭಟ್ (41) ಮೃತಪಟ್ಟ ವ್ಯಕ್ತಿ.ಕಾರ್ಕಳದಿಂದ ಧರ್ಮಸ್ಥಳ ಮಾರ್ಗವಾಗಿ ಸುಮಾರು 30 ಪ್ರಯಾಣಿಕರಿದ್ದ ಬಸ್ಸು ಬೆಂಗಳೂರಿನತ್ತ ಹೋಗುತ್ತಿದ್ದ ಖಾಸಗಿ ಬಸ್, ಲಾವತಡ್ಕ ಬಳಿ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ನೆಲ್ಯಾಡಿ ಸಮೀಪ ಭೀಕರ ಬಸ್ ಲಾರಿ ಅಪಘಾತ,ಓರ್ವ ಸಾವು,ಹಲವರಿಗೆ ಗಾಯ Read More »

ಸ್ಕೂಟರ್ ಮೇಲೆ ಮರ ಬಿದ್ದು ದಂಪತಿಗೆ ಗಾಯ

ಚಲಿಸುತ್ತಿದ್ದ ಸ್ಕೂಟರ್ ಮರ ಬಿದ್ದು ದಂಪತಿಗೆ ಗಾಯಗಳಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಕೊಪ್ಪದ ಗಂಡಿ ಸಮೀಪ ಜೂನ್ 15 ರಂದು ನಡೆದಿದೆ.ಕಡಿರುದ್ಯವಾರ ಗ್ರಾಮದ ಎರ್ಮಾಲ ಪಲ್ಕೆ ನಿವಾಸಿಗಳಾದ ಗುಮ್ಮಣ್ಣ ಮತ್ತು ವಿಮಲಾ ಗಾಯಗೊಂಡವರು .ಸ್ಥಳೀಯರ ಸಹಕಾರದಿಂದ ಕೂಡಲೇ ದಂಪತಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡ ಮರ ಸ್ಕೂಟರ್ ಮೇಲೆ ಬಿದ್ದಿದ್ದು ಪವಾಡವೆಂಬಂತೆ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ.

ಸ್ಕೂಟರ್ ಮೇಲೆ ಮರ ಬಿದ್ದು ದಂಪತಿಗೆ ಗಾಯ Read More »

ಭಾರೀ ಮಳೆ ಹಿನ್ನಲೆ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ

ಬಾರೀ ಮಳೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗಳು ಆದೇಶ ಮಾಡಿದ್ದಾರೆ.ಜೂ.15ರಂದು ಸಂಜೆ ಹೊರಡಿಸಿದ ಆದೇಶದಲ್ಲಿ ಸುಳ್ಯ, ಪುತ್ತೂರು, ಬೆಳ್ತಂಗಡಿ, ಕಡಬ ತಾಲೂಕು ಹೊರತು ಪಡಿಸಿ ಜಿಲ್ಲೆಯ ಇತರ ತಾಲೂಕಿಗೆ ರಜೆ ಎಂದು ಆದೇಶ ಮಾಡಲಾಗಿತ್ತು.ಇಂದುಬೆಳಗ್ಗೆ ಪರಿಷ್ಕೃತ ಆದೇಶ ಮಾಡಿದ್ದು ಜಿಲ್ಲೆಯ ಎಲ್ಲ ಶಾಲೆಗಳಿಗೂ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.

ಭಾರೀ ಮಳೆ ಹಿನ್ನಲೆ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ Read More »

ಅರಂತೋಡು : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಸಂಪಾಜೆ ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸಭೆಯನ್ನು. ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರಾದ ತೀರ್ಥರಾಮ ಅಡ್ಕಬಳೆ ಇವರ ಅಧ್ಯಕ್ಷತೆಯಲ್ಲಿ. ಅರಂತೋಡು ಸಿರಿ ಸೌದ ಸಭಾಂಗಣದಲ್ಲಿ ನಡೆಲಾಯಿತು.ಈ ಸಭೆಯಲ್ಲಿ ಪ್ರಾರ್ಥನೆಯನ್ನು ಭಾರತಿ ಮರ್ಕಂಜ ಅವರು ಮಾಡಿದರು. ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿ ಅರಂತೋಡಿನ ಅಧ್ಯಕ್ಷರಾದ K R ಪದ್ಮನಾಭ ರವರು ದೀಪ ಪ್ರಜ್ವಲಿಸುವ ಮುಖೇನ ಚಾಲನೆ ನೀಡಿದರು. ಈ ಸಭೆಯಲ್ಲಿ ಸುಳ್ಯ ತಾಲೂಕಿನ

ಅರಂತೋಡು : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಭೆ Read More »

error: Content is protected !!
Scroll to Top