July 2025

ಟಿಪ್ಪರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಸಾವು

ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಚಿಕಿತ್ಸೆ ಫಲಕರಿಯಾಗದೆ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಕಾರಿನಲ್ಲಿದ್ದ ಅನಂತಾಡಿ ಆಶ್ವತ್ತಡಿ ಮೂಲದ ಚಾಲಕ ಅನೀಶ್ ಹಾಗೂ ಸಹೋದರಿ ಮಹಿಳೆ ಸಹಿತ ಮಗು ಗಂಭೀರ ಗಾಯಗೊಂಡಿದ್ದು, ಚಿಕೆತ್ಸೆ ಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದೆ ನಿನ್ನೆ ತಡರಾತ್ರಿ ಚಾಲಕ ಅನೀಶ್ ಅನಂತಾಡಿ (34) ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ಟಿಪ್ಪರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಸಾವು Read More »

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಲಿಂಗಂ ನಿಧನ

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಚಂದ್ರಲಿಂಗಂರವರು ಜು.21ರಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 66 ವರ್ಷ ಪ್ರಾಯವಾಗಿತ್ತು.ತೀವ್ರ ಸಕ್ಕರೆ ಕಾಯಿಲೆಗೆ ಅವರು ಒಳಗಾಗಿದ್ದರು.ಆದರೂ ಕಾರ್ಮಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಜು.20ರಂದು ಐವರ್ನಾಡಿನಲ್ಲಿ ತೋಟ ತೊಳಿಲಾಲರ ಸಂಘದ ಸಭೆಯಲ್ಲಿ ಭಾಗವಹಿಸಿದ್ದ ಅವರು ವೇದಿಕೆಯಲ್ಲಿರುವಾಗಲೇ ಲೋ ಬಿ.ಪಿ.ಗೊಳಗಾಗಿ ಅಸ್ವಸ್ಥಗೊಂಡರು.ಕೂಡಲೇ ಅವರನ್ನು ಕೆ.ವಿ.ಜಿ. ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಡಿಕೇರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮೈಸೂರಿನ ಅಪೋಲೊ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಲಿಂಗಂ ನಿಧನ Read More »

ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಳ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಶುರುವಾಗಿದ್ದು, ಇನ್ನೂ ಎರಡು ದಿನಗಳ ಕಾಲ ಧಾರಕಾರವಾಗಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಗದಗ, ರಾಯಚೂರು ಹಾಗೂ ಯಾದಗಿರಿಯಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಳ ಸಾಧ್ಯತೆ Read More »

ಡಾ.ನಂದಕುಮಾರ್ ಪುತ್ರ ನೀರಲ್ಲಿ ಮುಳುಗಿ ಸಾವು

ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದ ಕುಮಾರ್ ರವರ ಪುತ್ರ, ಮಂಗಳೂರಿನ ಎ.ಬಿ.ಶೆಟ್ಟಿ ಡೆಂಟಲ್ ಕಾಲೇಜಿನಲ್ಲಿ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ ಕೇರಳದ ಕಣ್ಣೂರಿನಲ್ಲಿ ಕೆರೆಯೊಂದರ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.ಮಂಗಳೂರಿನಿಂದ ತನ್ನ ಸಹಪಾಠಿಯೊಂದಿಗೆ ಕೇರಳದ ಕಣ್ಣೂರಿನ ಆತನ ಮನೆಗೆ ಆಸ್ತಿಕ್ ಹೋಗಿದ್ದರೆನ್ನಲಾಗಿದೆ.ಬಳಿಕ ಅವರು ಮನೆ ಪಕ್ಕದ ಕೆರೆಗೆ ಸ್ನಾನಕ್ಕೆ ಹೋದಾಗ ಕಾಲು ಜಾರಿ ನೀರಲ್ಲಿ ಮುಳುಗಲ್ಪಟ್ಟು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ.ಡಾ.ನಂದ ಕುಮಾರ್ ರವರು ತನ್ನ ಮನೆಯವರು ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಅವರು ಅಲ್ಲಿಗೆ ತಲುಪಿದ

ಡಾ.ನಂದಕುಮಾರ್ ಪುತ್ರ ನೀರಲ್ಲಿ ಮುಳುಗಿ ಸಾವು Read More »

ಬಂಟ್ವಾಳ .ಪಿ ಎಸ್.ಐ ಆತ್ಮಹತ್ಯೆ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿ ಎಸ್ ಐ ಖೀರಪ್ಪ (55) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ತನಿಖಾ ಪಿ.ಎಸ್.ಐ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಅವರು, ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ದಿನಾಂಕ 20.07.2025 ರಂದು ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಆ ಬಳಿಕ ಬಂಟ್ವಾಳದಲ್ಲಿ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಖೀರಪ್ಪ ಉತ್ತರ ಕನ್ನಡದ ಕಾರವಾರ ಮೂಲದವರಾಗಿದ್ದು, ದಿನಾಂಕ 19.07.2025 ರಂದು ರಾತ್ರಿ ಗಸ್ತು

ಬಂಟ್ವಾಳ .ಪಿ ಎಸ್.ಐ ಆತ್ಮಹತ್ಯೆ Read More »

ಕಾಡು ಹಂದಿ ತಿವಿದು ವ್ಯಕ್ತಿ ಗಂಭೀರ

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಪರಿಸರದಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಅರಸಿನಮಕ್ಕಿಯ ಹತ್ಯಡ್ಕ ಗ್ರಾಮದ ಒಡೈರೆ ಎಂಬಲ್ಲಿ ಕಾಡು ಹಂದಿ ತಿವಿದು ವ್ಯಕ್ತಿಗೆ ಗಂಭೀರ ಗಾಯವಾಗಿದೆ. ರೆಖ್ಯೆ ಗ್ರಾಮದ ಬೂಡು ನಿವಾಸಿ ಬಾಲಕೃಷ್ಣ ಗಾಯಗೊಂಡ ವ್ಯಕ್ತಿ. ಬಾಲಕೃಷ್ಣ ಅವರನ್ನು ಚಿಕಿತ್ಸೆಗಾಗಿ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಆಸ್ಪತ್ರೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.

ಕಾಡು ಹಂದಿ ತಿವಿದು ವ್ಯಕ್ತಿ ಗಂಭೀರ Read More »

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ, ಎಸ್.ಐ.ಟಿಗೆ ಹಸ್ತಾಂತರ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಸಂಬಂಧ ಇದೀಗ ವಿಶೇಷ ತನಿಖಾ ತಂಡ(SIT) ಕ್ಕೆ ವರ್ಗಾಯಿಸಿ ಜುಲೈ 19 ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ.ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.ವಿಶೇಷ ತನಿಖಾ ಸಂಸ್ಥೆ (SIT) ಯ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ, ಎಸ್.ಐ.ಟಿಗೆ ಹಸ್ತಾಂತರ Read More »

ಕೇವಲ 4 ಗಂಟೆ 50 ನಿಮಿಷದಲ್ಲಿ ನವಜಾತ ಶಿಶುವವನ್ನು ಮಂಗಳೂರುನಿಂದ ಬೆಂಗಳೂರಿಗೆ ತಲುಪಿಸಿದ ಸುಳ್ಯದ ಆ್ಯಂಬುಲೆನ್ಸ್ ಚಾಲಕ ಹನೀಫ್

ಮಂಗಳೂರಿನಿಂದ ಬೆಂಗಳೂರಿಗೆ ನವಜಾತ ಶಿಶುವನ್ನು ಚಿಕಿತ್ಸೆಗೆಂದುವ ಆ್ಯಂಬುಲೆನ್ಸ್‌ನಲ್ಲಿ ಸುಳ್ಯದ ಚಾಲಕ ಕೇವಲ 4 ಗಂಟೆ 50 ನಿಮಿಷದಲ್ಲಿ ಕರೆದೊಯ್ದು‌ ಹೆತ್ತವರ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಸುಳ್ಯದ ಸುಳ್ಯದ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ ಚಾಲಕ ಹನೀಫ್, ಮಂಗಳೂರು ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಹೃದ್ರೋಗ ಚಿಕಿತ್ಸಾ ಕೇಂದ್ರಕ್ಕೆ 15 ದಿನದ ಶಿಶುವನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದರು. ಈ ನವಜಾತು ಶಿಶು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿತ್ತು.ವೈದ್ಯರು ಆದಷ್ಟು ತುರ್ತಾಗಿ ಮಗುವನ್ನು ಕರೆದೊಯ್ಯುವಂತೆ ಸೂಚಿಸಿದಾಗ, ಅದರ ಪೋಷಕರು ಆ್ಯಂಬುಲೆನ್ಸ್‌ಗೆ ಮನವಿ ಮಾಡಿದರು. ಕೂಡಲೇ

ಕೇವಲ 4 ಗಂಟೆ 50 ನಿಮಿಷದಲ್ಲಿ ನವಜಾತ ಶಿಶುವವನ್ನು ಮಂಗಳೂರುನಿಂದ ಬೆಂಗಳೂರಿಗೆ ತಲುಪಿಸಿದ ಸುಳ್ಯದ ಆ್ಯಂಬುಲೆನ್ಸ್ ಚಾಲಕ ಹನೀಫ್ Read More »

ಪೆರಾಜೆ : ಪೀಚೆ ಮನೆ ದೀಕ್ಷಿತ್ ನಿಧನ

ಪೆರಾಜೆ ಗ್ರಾಮದ ಪೀಚೆ ಮನೆ ಪುರುಶೋತ್ತಮ ಗೌಡರ ಮಗ ದೀಕ್ಷಿತ್ (30 ವರ್ಷ) ಜು.18 ರಂದು ನಿಧನರಾದರು. ಅಸೌಖ್ಯಕೊಳದ ದೀಕ್ಷಿತ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಸಾಗಿಸುತ್ತಿದ್ದಾಗ ಸಾವನ್ನಪ್ಪಿದರು‌.ಮ್ರತರು ತಾಯಿ ರಾಧಮ್ಮ,ಸಹೋದರ ಕಿಶೋರ,ಸಹೋದರಿ ಶ್ರತಿ ಮತ್ತು ಕುಟುಂಬಸ್ಥರನ್ನು ಬಂಧು ಬಳಗವನ್ನು ಅಗಲಿದ್ದಾರೆ.

ಪೆರಾಜೆ : ಪೀಚೆ ಮನೆ ದೀಕ್ಷಿತ್ ನಿಧನ Read More »

ಖ್ಯಾತ ನಿರೂಪಕಿ ಅನಶ್ರೀಯವರ ಮದುವೆಗೆ ದಿನ ನಿಗದಿ,ಅನುಶ್ರೀಯವರ ಕೈ ಹಿಡಿಯಲಿರುವ ಮಂಗಳೂರಿನ‌ ಆ ಹುಡುಗ ಯಾರು ಗೊತ್ತಾ?

ಖ್ಯಾತ ದೂರದರ್ಶನ ನಿರೂಪಕಿ ಅನುಶ್ರೀ ಯವರ ಮದುವೆ ಕೊನೆಗೂ ಪಿಕ್ಸ್ ಆಗಿದೆಯಾಂತೆ. ಮದುವೆ ಯಾವಾಗ ಯಾವಾಗ ಎನ್ನುತ್ತಿದ್ದವರಿಗೆ ಉತ್ತರ ಕೊಡೋದಕ್ಕೆ ಸಿದ್ಧರಾಗಿದ್ದಾರೆ.ಆಗಸ್ಟ್ 28 ರಂದು ಅನುಶ್ರೀ ಮದುವೆ ಎಂಬ ಮಾಹಿತಿ ಸದ್ಯ ಅವರ ಆಪ್ತರಿಂದ ಹೊರ ಬಿದ್ದಿದೆ.ಮಂಗಳೂರು ಮೂಲದ ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿ ರೋಷನ್‌ ಅವರನ್ನು ಅನುಶ್ರೀ ವಿವಾಹವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದ್ದಾಗೆ ಇದು ಪಕ್ಕಾ ಅರೆಂಜ್ ಮ್ಯಾರೇಜ್ ಅಂತೆ. ಆಗಸ್ಟ್ 28 ರಂದು ಬೆಂಗಳೂರಿನಲ್ಲೇ ಅದ್ದೂರಿ ಆರತಕ್ಷತೆಗೆ ಸ್ಥಳ ನಿಗದಿಯಾಗಿದೆ ಎನ್ನಲಾಗಿದೆ. ಈ ಬಗ್ಗೆ

ಖ್ಯಾತ ನಿರೂಪಕಿ ಅನಶ್ರೀಯವರ ಮದುವೆಗೆ ದಿನ ನಿಗದಿ,ಅನುಶ್ರೀಯವರ ಕೈ ಹಿಡಿಯಲಿರುವ ಮಂಗಳೂರಿನ‌ ಆ ಹುಡುಗ ಯಾರು ಗೊತ್ತಾ? Read More »

error: Content is protected !!
Scroll to Top