August 2025

ಅರೆಭಾಷೆಗೆ ರಾಜ್ಯಮಟ್ಟದ ಮನ್ನಣೆ : ಸದಾನಂದ ಮಾವಜಿ

ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿಯಿಂದ ಅರೆಭಾಷಿಕರ ಸಾಹಿತ್ಯ ಸಂಸ್ಕೃತಿಗಳ ನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು ಇದು ರಾಜ್ಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು,ಅರೆಭಾಷೆಗೆ ಇಂದು ರಾಜ್ಯಮಟ್ಟದಲ್ಲಿ ಮನ್ನಣೆ ದೊರೆತ್ತಿದೆ‌ ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಆ.10ರಂದು ನಡೆದ […]

ಅರೆಭಾಷೆಗೆ ರಾಜ್ಯಮಟ್ಟದ ಮನ್ನಣೆ : ಸದಾನಂದ ಮಾವಜಿ Read More »

ಅಡ್ಕಾರು : ಅರೆಭಾಷೆ ಜಂಬರ ಆಟಿ ಕೂಟ ಕಾರ್ಯಕ್ರಮ ಉದ್ಘಾಟನೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಅರೆಭಾಷೆ ಜಂಬರ ಆಟಿಕೂಟ ಕಾರ್ಯಕ್ರಮ ಆ. 10ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.ಪ್ರಗತಿಪರ ಕೃಷಿಕ ಎ.ಆರ್.ಗಂಗಾಧರ ಗೌಡ ಅಡ್ಕಾರುರವರು ಜಂಬರಕ್ಕೆ ಚಾಲನೆ ನೀಡಿ ಆಟಿ ಆಚರಣೆ ನಮ್ಮ ಬದುಕನ್ನು ಮತ್ತೆ ಹಿಂದಿರುಗಿ ನೋಡುವ ಪ್ರಯತ್ನ ಎಂದರು.ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿ ಮಾತನಾಡಿ,

ಅಡ್ಕಾರು : ಅರೆಭಾಷೆ ಜಂಬರ ಆಟಿ ಕೂಟ ಕಾರ್ಯಕ್ರಮ ಉದ್ಘಾಟನೆ Read More »

ಮಕ್ಕಳನ್ನು ಮಕ್ಕಳಂತೆ ನೋಡಿ; ಪ್ರತಿಷ್ಠೆಯ ಸರಕುಗಳಂತಲ್ಲ !

ಕೆಲ ದಿನಗಳ ಹಿಂದೆ ಬಾಲಕನೊಬ್ಬ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡದ್ದು ಸುದ್ದಿಯಾಯಿತು. 14 ವರ್ಷಗಳ ಕಾಲ ಚೆನ್ನಾಗಿದ್ದೆ, ಮುಂದೆ ಸ್ವರ್ಗದಲ್ಲಿ ಚೆನ್ನಾಗಿರುತ್ತೇನೆ ಎಂಬ ಆತನ ಡೆತ್‌ನೋಟ್ ಮತ್ತು ಆ ಮುಖ ನೋಡಿದಾಗ ಎಂತವರಿಗೂ ಒಂದು ಕ್ಷಣ ನೋವಾಗದೇ ಇರದು. ಇಷ್ಟು ಸಣ್ಣ ವಯಸ್ಸಿನಲ್ಲಿ ಇಂತಹ ದುಡುಕಿನ ನಿರ್ಧಾರಕ್ಕೆ ಕಾರಣವಾದರೂ ಏನಾಗಿರಬಹುದು ಎಂಬುದು ತಿಳಿಯದು. ಮಕ್ಕಳ ಮನಸ್ಸೇ ದುರ್ಬಲವೇ? ಅಥವಾ ತಡೆದುಕೊಳ್ಳಲಾಗದ ಒತ್ತಡಗಳೇ?ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಕೆಳ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಕೊಲೆ ಮಾಡಿರುವ ವಿಚಾರ ಇಂದು ಬೆಳಗ್ಗೆಯಷ್ಟೇ

ಮಕ್ಕಳನ್ನು ಮಕ್ಕಳಂತೆ ನೋಡಿ; ಪ್ರತಿಷ್ಠೆಯ ಸರಕುಗಳಂತಲ್ಲ ! Read More »

ಯುವತಿ ನಿಗೂಡವಾಗಿ ನಾಪತ್ತೆ

ಸ್ನೇಹಿತೆಯರೊಂದಿಗೆ ಮಂಗಳೂರಿಗೆ ಹೋಗುತ್ತೇನೆಂದು ಹೇಳಿ ಹೋದ ಯುವತಿ ನಾಪತ್ತೆಯಾಗಿರುವ ಘಟನೆ ಮಂಗಳೂರು ನಗರದ ಹೊಯ್ಗೆ ಬಜಾರ್ ನ ಲೂಕೈ ಹೌಸ್ ಪಾಲ್ಗಣಿ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಶಾಹಿನಾ ಬಾನು (23) ನಾಪತ್ತೆಯಾದವರು.ಶಾಹಿನಾ ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ತಂದೆಗೆ ಹೇಳಿ ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಕೆಯ ಕುಟುಂಬದವರು ಆಕೆಯ ಸ್ನೇಹಿತರನ್ನು ಸಂಪರ್ಕಿಸಿದಾಗ, ಆಕೆ ತಮ್ಮನ್ನು ಭೇಟಿಯಾಗಲು ಹೋಗಿಲ್ಲ ಎಂದು ಅವರು ದೃಢಪಡಿಸಿದರು.

ಯುವತಿ ನಿಗೂಡವಾಗಿ ನಾಪತ್ತೆ Read More »

ಕರ್ನಾಟಕ, ಕೇರಳ ಮಲೆನಾಡ ಅಭಿವೃದ್ಧಿಗೆ ಹೋರಾಟ ಸಮಿತಿ ಅಸ್ತಿತ್ವಕ್ಕೆ

ಇಲ್ಲಿ ಕಾಣುವ ಈ ಗುಂಪು ಛಾಯಾಚಿತ್ರ ಕೇರಳ ಕರ್ನಾಟಕ ರಾಜ್ಯದ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು,ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು,ರಾಜಕೀಯ ರಹಿತವಾಗಿ ಜಾತ್ಯತೀತ ನೆಲೆಯಲ್ಲಿ ಕರ್ನಾಟಕ, ಕೇರಳ ಮಲೆನಾಡ ಅಭಿವೃದ್ಧಿಗೆ ಭವಿಷ್ಯದಲ್ಲಿ ಒಂದೇ ಸರಪಳಿಯ ಕೊಂಡಿಯಾಗಿ ಜೋಡಣೆಯಾದವರು.ಇಂದು ಕೇರಳದ ಕಾಸರಗೋಡು ಮಲೆನಾಡು ಅಭಿವೃದ್ಧಿ ಸಮಿತಿ ಸುಳ್ಯದ ಬಡ್ಡಡ್ಕ ಸಹಕಾರಿ ಸಭಾ ಭವನದಲ್ಲಿ ಆಯೋಜಿಸಿದ ಸಭೆಯಲ್ಲಿ ಮುಂದೆಗೆ ಅಂತರ್ರಾಜ್ಯ ಬೆಸೆಯುವ ನೂತನ ರಸ್ತೆಯೊಂದನ್ನು ಅಭಿವೃದ್ಧಿ ಪಡಿಸಲು ಒಂದೇ ಸರಪಳಿಯ ಕೊಂಡಿಯಾಗಿ ಶ್ರಮಿಸಲು ಪಣ ತೊಟ್ಟ ಮುಂದಾಳುಗಳು. ಕೇರಳದ ಪಾಣತ್ತೂರು

ಕರ್ನಾಟಕ, ಕೇರಳ ಮಲೆನಾಡ ಅಭಿವೃದ್ಧಿಗೆ ಹೋರಾಟ ಸಮಿತಿ ಅಸ್ತಿತ್ವಕ್ಕೆ Read More »

ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ : ಟಿ.ಎಂ ಶಹೀದ್

ಲೋಕ ಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಕರ್ನಾಟಕದ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ದಾಖಲೆ ಸಹಿತ ದೇಶದ ಜನತೆಯ ಮುಂದಿಟ್ಟು ಬಿ ಜೆ ಪಿ ಯವರ ಮೋಸವನ್ನು ಬಯಲಿಗೆಳೆದಿದ್ದಾರೆ.ಈ ರೀತಿಯ ಮತಗಳ ಕಳವು ಮಾಡಿ ಮೋದಿಯವರು ದೇಶದ ಪ್ರಧಾನ ಯಾಗಿದ್ದಾರೆ ಎಂದು ಈಗ ಗೊತ್ತಾಗುತ್ತಿದೆ ಎಂದು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಆರೋಪಿಸಿದ್ದಾರೆ.ಅವರು ಆಗಸ್ಟ್ 9 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ

ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ : ಟಿ.ಎಂ ಶಹೀದ್ Read More »

ಆ.೧೯ಕ್ಕೆ ವಿಶ್ವ ಹಿಂದು ಪರಿಷತ್ ವತಿಯಿಂದ ಸುಳ್ಯದಲ್ಲಿ ಮೊಸರು ಕುಡಿಕೆ ಉತ್ಸವ

ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯದಲ್ಲಿ ಹಿಂದೂ ಬಾಂಧವರನ್ನು ಸಂಘಟಿಸುವ ಅಂಗವಾಗಿ ಆ.19ರಂದು 12 ನೇ ವರ್ಷದ ಮೊಸರು ಕುಡಿಕೆ ಉತ್ಸವವನ್ನು ಶೋಭಾಯಾತ್ರೆಯೊಂದಿಗೆ ಆಚರಿಸುವುದಾಗಿ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷ ಶ್ರೀಕಾಂತ್ ಗೋಳ್ವಾಲ್ಕರ್, ತಿಳಿಸಿದರು.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಜರಂಗದಳ ಸಂಯೋಜಕ ಹರಿಪ್ರಸಾದ್ ಎಲಿಮಲೆಆ. 19 ರಂದು ಮದ್ಯಾಹ್ನದ ನಂತರ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಉದ್ಘಾಟನೆಯನ್ನು ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕೇಸರರಾದ ಡಾ.

ಆ.೧೯ಕ್ಕೆ ವಿಶ್ವ ಹಿಂದು ಪರಿಷತ್ ವತಿಯಿಂದ ಸುಳ್ಯದಲ್ಲಿ ಮೊಸರು ಕುಡಿಕೆ ಉತ್ಸವ Read More »

ರೆಂಜಾಳ: ವರಮಹಾಕ್ಷ್ಮಿಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು.ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ. ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ .ಇವರ ಸಹಕಾರದೊಂದಿಗೆ ಸಾರ್ವಜನಿಕ ”ಶ್ರೀ ವರಮಹಾಲಕ್ಷ್ಮೀ ‘ ಪೂಜಾ ಕಾರ್ಯಕ್ರಮವು ದಿನಾಂಕಃ 08.08.2025 ರ ಶುಕ್ರವಾರ ರಂದು “ಶ್ರೀ ವಿನಾಯಕ” ಸಭಾಭವನ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳ ದಲ್ಲಿ ನಡೆಯಿತು. ಸಭಾಕಾರ್ಯಕ್ರಮದಲ್ಲಿಶ್ರೀ ವರಮಹಾಲಕ್ಷ್ಮಿ ಪೂಜಾ ಸಮತಿ ಅಧ್ಯಕ್ಷರಾದಶ್ರೀಮತಿ ರಾಜೇಶ್ವರಿ ಕುಮಾರಸ್ವಾಮಿ ರೆಂಜಾಳ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಯಕ್ರಮದ ಉದ್ಘಾಟನಾ ಕಾರ್ಯನನ್ನು:

ರೆಂಜಾಳ: ವರಮಹಾಕ್ಷ್ಮಿಪೂಜೆ Read More »

ನಾಳೆ  (ಆ.10)/ಅರೆಭಾಷೆ ಅಕಾಡೆಮಿ ಮತ್ತು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಸಹಯೋಗದಲ್ಲಿ ಅಡ್ಕಾರಿನಲ್ಲಿ ಅರೆಭಾಷೆ ಜಂಬರ – ಆಟಿಕೂಟ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅರೆಭಾಷೆ ಜಂಬರ ಆಟಿಕೂಟ ಕಾರ್ಯಕ್ರಮ ಆ. 10ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ನಡೆಯಲಿದೆ.ಬೆಳಿಗ್ಗೆ 10 ಗಂಟೆಗೆ ಪ್ರಗತಿಪರ ಕೃಷಿಕ ಎ.ಆರ್.ಗಂಗಾಧರ ಗೌಡ ಅಡ್ಕಾರುರವರು ಜಂಬರಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಅಡ್ಕಾರು ಉಪಸ್ಥಿತರಿರುವರು.ಬೆಳಿಗ್ಗೆ 10.30 ರಿಂದ ಕನಕಮಜಲಿನ ಶ್ರೀ ಕನಕದಾಸ ಮಕ್ಕಳ ಭಜನಾ ಮಂಡಳಿಯಿಂದ ಕುಣಿತ

ನಾಳೆ  (ಆ.10)/ಅರೆಭಾಷೆ ಅಕಾಡೆಮಿ ಮತ್ತು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಸಹಯೋಗದಲ್ಲಿ ಅಡ್ಕಾರಿನಲ್ಲಿ ಅರೆಭಾಷೆ ಜಂಬರ – ಆಟಿಕೂಟ ಕಾರ್ಯಕ್ರಮ Read More »

ಶಂಕಿತ ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವ ನಾಟಕಕಾರ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ.ಮೃತರನ್ನು ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಕುಡ್ಕಣಿ ನಿವಾಸಿ, ದಿವಂಗತ ಬೊಮ್ಮಾಲೆ ಅವರ ಪುತ್ರ ನಾರಾಯಣ ಕೊಯಿಲ (35) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿರುವ ಅವರಿಗೆ ಇಬ್ಬರು ಸಹೋದರಿಯರು ಇದ್ದಾರೆ.ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ನಂತರ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃತ್ತಿಯಲ್ಲಿ ಮೇಸ್ತ್ರಿ ಕೆಲಸಗಾರರಾಗಿದ್ದ ನಾರಾಯಣ ಅವರ ಕುಟುಂಬದ ಏಕೈಕ ಜೀವನಾಧಾರವಾಗಿದ್ದರು. ಒಬ್ಬ ಪ್ರತಿಭಾನ್ವಿತ ಬರಹಗಾರರಾಗಿದ್ದ ನಾರಾಯಣ ಅವರು 12 ಕ್ಕೂ ಹೆಚ್ಚು

ಶಂಕಿತ ಡೆಂಗ್ಯೂ ಜ್ವರಕ್ಕೆ ಯುವಕ ಬಲಿ Read More »

error: Content is protected !!
Scroll to Top